Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ ಯೂರಿಯಾ ಸೇರಿದಂತೆ ವಿವಿಧ ರಸಗೊಬ್ಬರಗಳು ಲಭ್ಯ
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ ಯೂರಿಯಾ ಸೇರಿದಂತೆ ವಿವಿಧ ರಸಗೊಬ್ಬರಗಳು ಲಭ್ಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಭತ್ತದ ಬಿತ್ತನೆ ಗುರಿ 35,000 ಹೆಕ್ಟೇರ್ ಇದ್ದು, ಈವರೆಗೆ 26,050 ಹೆಕ್ಟೇರ್ ಬಿತ್ತನೆಯಾಗಿರುತ್ತದೆ. ಜೂನ್ ಮಾಹೆಯ 2ನೇ ವಾರದಿಂದ ಬಿತ್ತನೆ ಪ್ರಾರಂಭಗೊಂಡಿದ್ದು, ಪ್ರಸ್ತುತ ಭರದಿಂದ ಸಾಗುತ್ತಿದ್ದು, ಆಗಸ್ಟ್ 2ನೇ ವಾರದಲ್ಲಿ ಬಿತ್ತನೆ ಪೂರ್ಣಗೊಳ್ಳುವ ನಿರೀಕ್ಷೆಯಿರುತ್ತದೆ. ಜಿಲ್ಲೆಯ ಮುಂಗಾರು ಹಂಗಾಮಿನ ರಸಗೊಬ್ಬರ ಬೇಡಿಕೆ 8,404 ಮೆ.ಟನ್ ಇದ್ದು, ಜುಲೈ ಅಂತ್ಯದವರೆಗಿನ ಬೇಡಿಕೆ 5,470 ಮೆ.ಟನ್ ಆಗಿರುತ್ತದೆ. ಈವರೆಗೆ 6,809 ಮೆ.ಟನ್ ಸರಬರಾಜಾಗಿ 2,568 ಮೆ.ಟನ್ ವಿತರಣೆಯಾಗಿ, 4,240 ಮೆ.ಟನ್ ದಾಸ್ತಾನು ಲಭ್ಯವಿರುತ್ತವೆ.

    Click Here

    Call us

    Click Here

    ಯೂರಿಯಾ ರಸಗೊಬ್ಬರದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದ್ದು, ಜುಲೈ ಅಂತ್ಯದವರೆಗಿನ ಬೇಡಿಕೆ 1,510 ಮೆ.ಟನ್ ಇದ್ದು, 2035 ಮೆ.ಟನ್ ಪೂರೈಕೆಯಾಗಿ, 792 ಟನ್ ವಿತರಣೆಯಾಗಿ 1243 ಟನ್ ದಾಸ್ತಾನು ಇರುತ್ತದೆ.

    ಯೂರಿಯಾ ರಸಗೊಬ್ಬರವನ್ನು ಭತ್ತದ ಕೃಷಿಯಲ್ಲಿ ಮೂಲ ಹಾಗೂ ಮೇಲುಗೊಬ್ಬರವಾಗಿ ಬಳಕೆ ಮಾಡುತ್ತಿದ್ದು, ಬೇಡಿಕೆಗೆ ಅನುಗುಣವಾಗಿ ಪೂರೈಕೆ ಇದ್ದು, ಯಾವುದೇ ಕೊರತೆ ಇರುವುದಿಲ್ಲ. ಭೌತಿಕ ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾವನ್ನು ಸಹ ಬಳಸಲು ಅವಕಾಶವಿದ್ದು, ರೈತರು ಪ್ರತಿ ಲೀಟರ್ ನೀರಿಗೆ 4 ಎಂ.ಎಲ್ ನಂತೆ 1 ಹೆಕ್ಟೇರ್‌ಗೆ 1 ಲೀಟರ್ ದ್ರವರೂಪದ ಯೂರಿಯಾ ಗೊಬ್ಬರವನ್ನು ಭತ್ತದ ಬೆಳೆಗೆ ಸಿಂಪಡಿಸಿ, ಉತ್ಪಾದನಾ ವೆಚ್ಚವನ್ನು ತಗ್ಗಿಸಬಹುದಾಗಿದೆ. 

    ರೈತರು ರಸಗೊಬ್ಬರಗಳ ಕೊರತೆ ಕಂಡುಬಂದಲ್ಲಿ ಕೃಷಿ ಇಲಾಖೆಯ ತಾಲೂಕು ಸಹಾಯಕ ಕೃಷಿ ನಿರ್ದೇಶಕರಾದ ಉಡುಪಿ ಮೊ.ನಂ: 8277932515, ಕುಂದಾಪುರ ಮೊ.ನಂ: 8277932503, ಕಾರ್ಕಳ ಮೊ.ನಂ:8277932505 ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಮೊ.ನಂ: 9071150501 ಅಥವಾ 8277932500 ಹಾಗೂ ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಂ ಟೋಲ್ ಫ್ರೀ ಸಂಖ್ಯೆ 1077, 2574802 ಅನ್ನು ಸಂಪರ್ಕಿಸಿ ಮಾಹಿತಿ ನೀಡಿದಲ್ಲಿ ತುರ್ತು ಕ್ರಮವಹಿಸಿ ಸ್ಥಳೀಯವಾಗಿ ರಸಗೊಬ್ಬರಗಳ ಪೂರೈಕೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    18/12/2025

    ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್

    18/12/2025

    ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.