Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ
    ಊರ್ಮನೆ ಸಮಾಚಾರ

    ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಹೊರಾಂಗಣ ವೇದಿಕೆಯಲ್ಲಿ ಧ್ವಜಾರೋಹಣ ಪುರಸ್ಸರವಾಗಿ ವಿಜೃಂಭಣೆಯಿಂದ 79ನೇ ಸ್ವಾತಂತ್ರ್ಯ ದಿನೋತ್ಸವವನ್ನು ಆಚರಿಸಲಾಯಿತು.

    Click Here

    Call us

    Click Here

    ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ದಂತ ವೈದ್ಯರು ಕಾಟಿಪಳ್ಳ ಡಾ. ಅರವಿಂದ ಭಟ್ ಕೆ. ಮತ್ತು ಶ್ರೀ ಎನ್‌ಎಸ್‌ಆರ್ ವಕೀಲರು, ಕುಂದಾಪುರ ಅವರನ್ನು ಶಾಲೆಯ ವಾದ್ಯಮೇಳದೊಂದಿಗೆ ಸ್ವಾಗತಿಸಲಾಯಿತು. ಅತಿಥಿಗಳು ಧ್ವಜಾರೋಹಣಗೈದು ಧ್ವಜವಂದನೆ ಸಲ್ಲಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ದೇಶಭಕ್ತಿಯ ಘೋಷವಾಕ್ಯಗಳನ್ನು ಬೋಧಿಸಿದರು. ವಿದ್ಯಾರ್ಥಿಗಳು ಪಥಸಂಚಲನದ ಮೂಲಕ ಧ್ವಜವಂದನೆಗೈದರು.

    ಡಾ. ಅರವಿಂದ ಭಟ್ ವಿದ್ಯಾರ್ಥಿಗಳನ್ನು  ಉದ್ದೇಶಿಸಿ ಮಾತನಾಡಿ, ಶಾಲೆಯು ಉತ್ತಮ ಶಿಸ್ತನ್ನು ಹೊಂದಿದ್ದು, ಆ ಎಲ್ಲಾ ಶಿಸ್ತನ್ನು ಮಕ್ಕಳು ಜೀವನದಲ್ಲಿ ಸದಾ ಮೈಗೂಡಿಸಿಕೊಳ್ಳಬೇಕು. ದೇಶದ ಮುಂದಿನ ಪ್ರಜೆಗಳು ಇಂದಿನ ವಿದ್ಯಾರ್ಥಿಗಳಾದ ನೀವು. ಈ ಎಲ್ಲಾ ಶಿಸ್ತನ್ನು ಮೈಗೂಡಿಸಿಕೊಂಡರೆ ನಮ್ಮ ದೇಶ ಶಿಸ್ತಿನಲ್ಲೂ, ಸಂಯಮದಲ್ಲೂ ಸಾಧನೆಗೈಯ್ಯುವುದರಲ್ಲಿ ಎಳ್ಳಷ್ಟೂ ಸಂದೇಹವಿಲ್ಲ. ನಾವು ಬೇರೆಲ್ಲ ಹಬ್ಬಗಳನ್ನು ನಮ್ಮ ನಮ್ಮ ಮತ ಧರ್ಮಗಳಂತೆ ಆಚರಿಸಿದರೆ, ಈ ಸಂತೋಷವನ್ನು ಎಲ್ಲರೂ ಸೇರಿ ಆಚರಿಸಿಕೊಳ್ಳುತ್ತಿದ್ದೇವೆ. ಇದುವೇ ರಾಷ್ಟ್ರೀಯ ಭಾವೈಕ್ಯತೆಯ ಪ್ರತೀಕವಾಗಿದೆ. ಎಂದರು.

    ಕುಂದಾಪುರ ವಕೀಲರಾದ ಶ್ರೀ ಎನ್‌ಎಸ್‌ಆರ, ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳ ಫಲವಾಗಿ ಇಂದು ನಾವೆಲ್ಲಾ ಸಂತೋಷ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ನಡೆಸುವಂತಾಗಿದೆ. ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್, ಮಂಗಳ ಪಾಂಡೆ, ಝಾನ್ಸಿರಾಣಿ ಲಕ್ಷ್ಮೀಬಾಯಿ ಇವರೇ ಮೊದಲಾದ ವ್ಯಕ್ತಿಗಳ ಮಾತು ಸದಾ ನಮ್ಮ ಕಿವಿಗಳಲ್ಲಿ ಮೊಳಗುತ್ತಿರಬೇಕು. ಆಲಸ್ಯ, ತಾತ್ಸಾರ, ದುಷ್ಟಚಟಗಳಿಂದ ಮುಕ್ತರಾಗಿ, ದೇಶದ ಅಭಿವೃದ್ಧಿಯ ಕಡೆಗೆ ಸದಾ ಗಮನಿಸಬೇಕು. ವಿದ್ಯಾರ್ಥಿಗಳಾದ ನೀವು ಸದಾ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು. ಅವಕಾಶ ಸಿಕ್ಕಾಗ ಬೇರೆಯವರಿಗೆ ಸಹಾಯ ಮಾಡುತ್ತಿರಬೇಕು. ನಿಮ್ಮ ವಾತಾವರಣವನ್ನು ಶುದ್ಧವಾಗಿರಿಸಿಕೊಳ್ಳಬೇಕು. ಸತ್ಯವಾದ ನುಡಿ, ಪ್ರಾಮಾಣಿಕತೆ, ಸ್ವಾಭಿಮಾನ ನಿಮ್ಮ ಉಸಿರಾಗಿರಬೇಕು. ಎಂದರು.

    ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಮತ್ತು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರರ ಅಧ್ಯಕ್ಷತೆ ವಹಿಸಿದ್ದರು.

    Click here

    Click here

    Click here

    Call us

    Call us

    ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತಾಧಿಕಾರಿ ವೀಣಾರಶ್ಮಿ ಎಮ್. ಶಾಲೆಯ ಉಪಪ್ರಾಂಶುಪಾಲರಾದ ರಾಮ ದೇವಾಡಿಗ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಸುಜಾತಾ ಸದಾರಾಮ್ ಮತ್ತು ಶಿಕ್ಷಕ ಶಿಕ್ಷಕೇತರ ವೃಂದ, ವಿದ್ಯಾರ್ಥಿ ವೃಂದದವರು ಭಾಗವಹಿಸಿದ್ದರು.

    ವಿದ್ಯಾರ್ಥಿ ಚಿನ್ಮಯ್ ಕಾರ್ಯಕ್ರಮವನ್ನು ನಿರೂಪಿಸಿ, ವಿದ್ಯಾರ್ಥಿನಿ ವೈಷ್ಣವೀ ಸರ್ವರನ್ನು ಸ್ವಾಗತಿಸಿ, ವಿದ್ಯಾರ್ಥಿ ಪ್ರದ್ಯುಮ್ನ ವಿ.ಕೆ ಧನ್ಯವಾದವನ್ನು ಸಮರ್ಪಿಸಿದರು. 

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.