Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಮಾಜ ಜಾಗೃತವಾದಾಗ ಮಾತ್ರ ಅಪರಾಧ ತಡೆ ಸಾಧ್ಯ : ವೃತ್ತನಿರೀಕ್ಷಕ ಸುದರ್ಶನ್
    ಊರ್ಮನೆ ಸಮಾಚಾರ

    ಸಮಾಜ ಜಾಗೃತವಾದಾಗ ಮಾತ್ರ ಅಪರಾಧ ತಡೆ ಸಾಧ್ಯ : ವೃತ್ತನಿರೀಕ್ಷಕ ಸುದರ್ಶನ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ಹಿಂದೆ ಗ್ರಾಮೀಣ ಭಾಗಗಳಲ್ಲಿ ಅಪರಾಧಗಳು ನಡೆಯುತ್ತಿರುವುದು ಕಡಿಮೆಯಾಗಿತ್ತು. ಆದರೆ ಈಗ ಕಾಲ ಬದಲಾಗಿದೆ. ವಿಧ ವಿಧವಾದ ಆಸೆ-ಆಮಿಷಗಳಿಂದ ಹಳ್ಳಿಯ ಮುಗ್ದ ಜನರ ಭಾವನೆಗಳನ್ನು ದುರುಪಯೋಗ ಪಡಿಸಿಕೊಂಡು ಸಮಾಜ ಘಾತುಕರು, ವಿಕೃತ ಮನಸ್ಸಿನವರು ಅಮಾನವೀಯ ಕೃತ್ಯಗಳನ್ನು ಮಢುತ್ತಿದ್ದಾರೆ. ಇದರಿಂದ ಅಮಾಯಕ ಮಹಿಳೆಯರು ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಜಾಗೃತಿ ವಹಿಸಬೇಕಾಗಿದೆ ಎಂದು ಬೈಂದೂರು ವೃತ್ತನಿರೀಕ್ಷಕ ಸುದರ್ಶನ್ ಎಂ ಹೇಳಿದರು.

    Click Here

    Call us

    Click Here

    ಕಾಲ್ತೋಡು ಗ್ರಾಪಂ ವ್ಯಾಪ್ತಿಯ ಅತೀ ಹಿಂದುಳಿದ ಪೈನಾಡಿ ಎಂಬ ಕುಗ್ರಾಮದ ಸಕಿಪ್ರಾ ಶಾಲೆಯಲ್ಲಿ ಭಾನುವಾರ ಸಂಜೆ ಬೈಂದೂರು ಆರಕ್ಷಕ ಠಾಣೆ ವತಿಯಿಂದ ನಡೆದ ಅಪರಾಧ ತಡೆ ಮಾಸಾಚರಣೆ ಹಾಗೂ ವಿಶೇಷವಾಗಿ ಮಹಿಳೆಯರಿಗೆ ಕಾನೂನು ಅರಿವು ಮೂಡಿಸುವ ಸಭೆಯಲ್ಲಿ ಮಾತನಾಡಿದರು.

    ತಾಲೂಕಿನಲ್ಲಿ ಜನವರಿ 2015ರಿಂದ ಡಿಸೆಂಬರ್‌ವರೆಗೆ 25 ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಗಳ ದೂರು ದಾಖಲಾಗಿದ್ದು, ಅದರಲ್ಲಿ ಎಂಟು ಮಹಿಳೆಯರು ತಾಯಾಗಿದ್ದಾರೆ. ಅಲ್ಲದೇ ಏಳು ಮಹಿಳೆಯರ ಕೊಲೆಗಳು ನಡೆದಿದ್ದು, ಅವೆಲ್ಲವೂ ಗ್ರಾಮೀಣ ಭಾಗದಲ್ಲಿ ಸಂಭವಿಸಿದೆ ಎಂದು ಅಂಕಿ-ಅಂಶ ನೀಡಿದ ಅವರು, ಪೋಲಿಸರು ಸಮಾಜ ಕಾಯುವ ಸೈನಿಕರು. ನಿಮ್ಮೆಲ್ಲರ ರಕ್ಷಣೆ ನಮ್ಮ ಹೊಣೆಯಾಗಿದೆ. ಹೆಂಗಸರ ಮೇಲಿನ ದೌರ್ಜನ್ಯ, ಅತ್ಯಾಚಾರ ಹಾಗೂ ಊರನಲ್ಲಿ ನಡೆಯುತ್ತಿರುವ ಕಳ್ಳತನಗಳ ಬಗ್ಗೆ ಮಾಹಿತಿ ಅಥವಾ ಅನುಮಾನಗಳಿದ್ದರೆ ನೇರವಾಗಿ ಬಂದು ಠಾಣೆಗೆ ದೂರು ನೀಡಿ ಅಥವಾ ದಯಮಾಡಿ ಪೋಲಿಸರಿಗೆ ತಿಳಿಸಿ. ಇದರಿಂದ ಅಪರಾಧಿಗಳನ್ನು ಹಿಡಿಯಲು ಸಹಕಾರಿಯಾಗುತ್ತದೆ. ಸಮಾಜ ಜಾಗೃತವಾದಾಗ ಮಾತ್ರ ಅಪರಾಧ ತಡೆಯಲು ಸಾಧ್ಯ. ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಸಾರ್ವಜನಿಕರು ಪೋಲಿಸರೊಂದಿಗೆ ಕೈ ಜೋಡಿಸಿ ಸಹಕರಿಸಬೇಕು ಎಂದು ಮನವಿ ಮಾಡಿದರು.

    ಕಾಲ್ತೋಡು ಗ್ರಾಪಂ ಉಪಾಧ್ಯಕ್ಷ ಬಟ್ನಾಡಿ ಅಣ್ಣಪ್ಪ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಠಾಣಾಧಿಕಾರಿ ಸಂತೋಷ್ ಎ. ಕಾಯ್ಕಿಣಿ ಉಪಸ್ಥಿತರಿದ್ದರು. ನವೋದಯ ಸ್ವ-ಸಹಾಯ ಸಂಘದ ಮೇಲ್ವಿಚಾರಕ ಶಿವರಾಮ ಪೂಜಾರಿ ಯಡ್ತರೆ ವಂದಿಸಿದರು. ಈ ಭಾಗದ ಸ್ತ್ರೀಶಕ್ತಿ ಗುಂಪಿನ ನೂರಾರು ಮಹಿಳೆಯರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಂಡು ಕಾನೂನು ಮಾಹಿತಿ ಪಡೆದರು.

    [quote bgcolor=”#ffffff” arrow=”yes”]ಅಪರಾಧ ಕೃತ್ಯಗಳಿಗೆ ಯಾವುದೇ ವ್ಯಾಪ್ತಿಯಿಲ್ಲ. ಇದು ವಿಶ್ವವ್ಯಾಪಿ. ಕೆಲವು ಸಂದರ್ಭಗಳಲ್ಲಿ ಮನುಷ್ಯನ ಮನಸ್ಸು ವಿಕೃತಗೊಂಡು ಕೆರಳಿದಾಗ ಅಪರಾಧಗಳು ಸಂಭವಿಸುತ್ತದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಮಹಿಳಾ ಸಭೆಗಳನ್ನು ನಡೆಸಿ ಅವರಿಗೆ ಕಾನೂನಿನ ಅರಿವು ಮೂಡಿಸುವ ಜೊತೆಗೆ ಅಪರಾಧ ತಡೆಯುವ ಪ್ರಯತ್ನ ಪೋಲಿಸ್ ಇಲಾಖೆ ಮಾಡುತ್ತಿದೆ.- ಸಂತೋಷ್ ಆನಂದ್ ಕಾಯ್ಕಿಣಿ, ಠಾಣಾಧಿಕಾರಿ ಬೈಂದೂರು.[/quote]

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    1 × two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.