Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಜ್ಞಾನ ಪಿಯು ಕಾಲೇಜಿನಲ್ಲಿ ಕಬಡ್ಡಿ ಪಂದ್ಯಾಟ
    ಊರ್ಮನೆ ಸಮಾಚಾರ

    ಸುಜ್ಞಾನ ಪಿಯು ಕಾಲೇಜಿನಲ್ಲಿ ಕಬಡ್ಡಿ ಪಂದ್ಯಾಟ

    Updated:11/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸುಜ್ಞಾನ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿಭಾಗದ ಕಬಡ್ಡಿ ಪಂದ್ಯಾಟವು ಬುಧವಾರ ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಕಾಲೇಜಿನ ಕ್ರೀಡಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು.

    Click Here

    Call us

    Click Here

    ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಸುಕೇಶ್ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ರೀಡೆಯನ್ನು ಪ್ರೀತಿಸಿ, ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಇತ್ತೀಚೆಗೆ ಕ್ರೀಡಾಂಗಣದಲ್ಲಿ ಆಡುವವರಿಗಿಂತ ಮೊಬೈಲ್‌ನಲ್ಲಿಯೇ ಆಡುವವರ ಸಂಖ್ಯೆ ಹೆಚ್ಚಾಗಿರುವುದು ಕಳವಳಕಾರಿ ಸಂಗತಿಯಾಗಿದೆ; ಶಾರೀರಿಕ ಕ್ರೀಡೆಯಿಂದ ವ್ಯಕ್ತಿಯ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ಹೇಳಿದರು.

    ಮಹಾತ್ಮಗಾಂಧಿ ಪ್ರೌಢಶಾಲೆ ಸಾಬ್ರಕಟ್ಟೆಯ ದೈಹಿಕ ಶಿಕ್ಷಣ ಶಿಕ್ಷಕ ವಿಜಯ್ ಕುಮಾರ್ ಶೆಟ್ಟಿ ಮಾತನಾಡಿ, “ಸೋಲು, ಗೆಲುವಿನ ಬಗ್ಗೆ ಗಮನ ಹರಿಸದೆ ಕ್ರೀಡೆಯಲ್ಲಿ ಖುಷಿಯಿಂದ ತೊಡಗಿಸಿಕೊಳ್ಳಿ. ಕ್ರೀಡೆಯಲ್ಲಿ ಗೆದ್ದಾಗ ಅಹಂಕಾರ ಪಡದೇ ಸೋತಾಗ ನಿರಾಸಕ್ತಿ ಹೊಂದದೆ  ಭಾಗವಹಿಸುವಿಕೆಯ ಬಗ್ಗೆ ಗಮನಹರಿಸಿ” ಎಂದು ಕಿವಿಮಾತು ನುಡಿದರು.

    ದೇಶೀ ಕ್ರೀಡೆಯಾದ ಕಬಡ್ಡಿಯು ದೇಹದ ಶಕ್ತಿ ಹಾಗೂ ಮನೋಬಲ ಎರಡನ್ನೂ ಪ್ರತಿನಿಧಿಸುವ ಆಟವಾಗಿದೆ. ಕ್ರೀಡಾ ಸ್ಫೂರ್ತಿಯೊಂದಿಗೆ ಆಟವಾಡುವುದನ್ನು ರೂಢಿಸಿಕೊಂಡಾಗ ಮೈಮನಸ್ಸು ಉಲ್ಲಾಸಗೊಳ್ಳುತ್ತದೆ ಎಂದು ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ಹೇಳಿದರು.

    ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಅವರು, “ಈಗ ಕ್ರೀಡೆಯಲ್ಲಿಯೂ  ಬದುಕು ಕಟ್ಟಿಕೊಳ್ಳಲು ಅಪಾರ ಅವಕಾಶಗಳಿವೆ. ಸೋಲನ್ನು ಯಾವುದೇ ಕಾರಣಕ್ಕೂ ವೈಯಕ್ತಿಕವಾಗಿ ತೆಗೆದುಕೊಳ್ಳಬಾರದು. ಸೋಲೇ ಗೆಲುವಿನ ಸೋಪಾನ ಎಂಬುದನ್ನು ಮನವರಿಕೆ ಮಾಡಿಕೊಂಡು ತಮಗೆ ಆಸಕ್ತಿಯಿರುವ ಕ್ರೀಡೆಯಲ್ಲಿ ಕೌಶಲಗಳನ್ನು ಹೆಚ್ಚಿಸಿಕೊಳ್ಳುವುದು ಮುಖ್ಯವಾಗುತ್ತದೆ ಎಂದು ವಿವರಿಸಿದರು.

    Click here

    Click here

    Click here

    Call us

    Call us

    ಬಾಲಕರ ವಿಭಾಗದಲ್ಲಿ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಪ್ರಥಮ, ಭಂಡಾರ್‌ಕಾರ್ಸ್‌ ಕಾಲೇಜು ಕುಂದಾಪುರ ದ್ವಿತೀಯ ಸ್ಥಾನವನ್ನು, ಬಾಲಕಿಯರ ವಿಭಾಗದಲ್ಲಿ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಪ್ರಥಮ, ಸರ್ಕಾರಿ ಪಿಯು ಕಾಲೇಜು ಕುಂದಾಪುರ ದ್ವಿತೀಯ ಸ್ಥಾನ ಗಳಿಸಿ ಗೆಲುವಿನ ನಗೆ ಬೀರಿದವು.

    ವೇದಿಕೆಯಲ್ಲಿ ಕುಂದಾಪುರ ತಾಲೂಕು ಪದವಿ ಮತ್ತು ಪದವಿ ಪೂರ್ವ ನೌಕರರ ಸಂಘದ ನಿರ್ದೇಶಕ ಉದಯ್‌ ಕುಮಾರ್‌ ಶೆಟ್ಟಿ, ಕುಂದಾಪುರ ತಾಲೂಕಿನ ಕ್ರೀಡಾ ಸಂಯೋಜಕ ರಾಮ ಶೆಟ್ಟಿ ಉಪಸ್ಥಿತರಿದ್ದರು.

    ಕೊಲ್ಲೂರಿನ ಮೂಕಾಂಬಿಕ ಪದವಿ ಪೂರ್ವ ಕಾಲೇಜಿನ  ದೈಹಿಕ ಶಿಕ್ಷಣ ಶಿಕ್ಷಕ ಸಚಿನ್‌ ಶೆಟ್ಟಿ ನಿರೂಪಿಸಿ, ಸಂಸ್ಥೆಯ ಪ್ರಾಂಶುಪಾಲ ರಂಜನ್ ಬಿ.ಶೆಟ್ಟಿ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕಿ ಜಯಲತಾ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್‌ ಕುಮಾರ್ ವಂದಿಸಿದರು.

    Like this:

    Like Loading...

    Related

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d