Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೇರಂಜಾಲು: 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ – ಪೌಷ್ಟಿಕ ಮಾಸಾಚರಣೆ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಹೇರಂಜಾಲು: 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ – ಪೌಷ್ಟಿಕ ಮಾಸಾಚರಣೆ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಆಯುರ್ವೇದದಲ್ಲಿ ತಿಳಿಸಿರುವ ದಿನಚರ್ಯೆ, ಋತುಚರ್ಯೆ, ಸದ್ವೃತ್ತ ಪಾಲನೆ ಮಾಡುವುದರಿಂದ ಆರೋಗ್ಯವಂತನು ರೋಗ ಬಾರದಂತೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಜೊತೆಯಲ್ಲಿ   ರೋಗಿಯ ರೋಗವನ್ನು ಕೂಡ ಗುಣಪಡಿಸಬಹುದು ಎಂದು  ಕಾಲ್ತೋಡು ಸ.ಆ.ಚಿ ವೈದ್ಯಾಧಿಕಾರಿ  ಡಾ. ವೀಣಾ ಕಾರಂತ್ ಹೇಳಿದರು.

    Click Here

    Call us

    Click Here

    ಅವರು ಎಂದು ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – ಅಂಗನವಾಡಿ ಕೇಂದ್ರ ಹೇರಂಜಾಲು, ಆರೋಗ್ಯ ಇಲಾಖೆ – ಉಪಕೇಂದ್ರ ಹೇರಂಜಾಲು ಇವರ ಸಂಯುಕ್ತ ಆಶ್ರಯದಲ್ಲಿಅಂಗನವಾಡಿ ಕೇಂದ್ರ ಹೇರಂಜಾಲಿನಲ್ಲಿ ನಡೆದ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ – ಪೌಷ್ಟಿಕ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ನಮ್ಮ ಮನೆಯಂಗಳದಲ್ಲಿ ಇರುವಂತಹ ಅನೇಕ ಸಸ್ಯಗಳನ್ನ ಆಹಾರವಾಗಿ ಉಪಯೋಗಿಸುವುದರಿಂದ ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಜೊತೆಯಲ್ಲಿ ಅವುಗಳಿಂದಲೇ ಪೌಷ್ಟಿಕ ಆಹಾರವನ್ನು ಕೂಡ ನಾವು ಹೇಗೆ ತಯಾರಿಸಿ ಸೇವಿಸಬಹುದು. ಪೌಷ್ಟಿಕ ಆಹಾರ ಹೇಗಿರಬೇಕು ಎಂದು ತಿಳಿಸುತ್ತಾ ಅನೇಕ ಔಷಧೀಯ ಸಸ್ಯಗಳನ್ನು ಪರಿಚಯಿಸಿ, ಆಹಾರವಾಗಿ ಹಾಗೂ ಔಷಧವಾಗಿ ಹೇಗೆ ಬಳಸಬೇಕು, ಜೊತೆಯಲ್ಲಿ ನಮ್ಮ ಸಾಂಪ್ರದಾಯಿಕ ತಿನಿಸುಗಳ ಮಹತ್ವವನ್ನ ತಿಳಿಸಲಾಯಿತು.

    ಹತ್ತನೇ ಆಯುರ್ವೇದ ದಿನಾಚರಣೆಯನ್ನು “ಜನರಿಗಾಗಿ ಮತ್ತು ಜಗತ್ತಿಗಾಗಿ ಆಯುರ್ವೇದ” ಎನ್ನುವ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಆಯುರ್ವೇದದ ಸಿದ್ಧಾಂತಗಳನ್ನ ಪಾಲಿಸಿರಿ, ಚಿಕಿತ್ಸಾಲಯದ ಪ್ರಯೋಜನವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು. ಅಂಗನವಾಡಿ ಕೇಂದ್ರದ ಮಕ್ಕಳಿಗೆ ಚ್ಯವನ್ ಪ್ರಾಶ್ ವಿತರಿಸಲಾಯಿತು ಹಾಗೆ ಸಾರ್ವಜನಿಕರಿಗೆ ಆಯುಷ್ ಮಾಹಿತಿಯುಳ್ಳ ಕೈಪಿಡಿ, ಕರಪತ್ರಗಳನ್ನ ಹಂಚಲಾಯಿತು 

    ಅಂಗನವಾಡಿ ಕೇಂದ್ರದಿಂದ  ಪೌಷ್ಟಿಕ ಖಾದ್ಯಗಳ ಪ್ರದರ್ಶನ, ಐಸಿಡಿಎಸ್  ರಂಗೋಲಿ ಪ್ರದರ್ಶನ, ಗರ್ಭಿಣಿ  ಮಹಿಳೆಯರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಕಿರಿಮಂಜೇಶ್ವರ ಇಲ್ಲಿಯ ಸಿಎಚ್ಒ ಸುಭಾಷ್ ಹಾಗೂ ಪಿಎಚ್ ಸಿ ಓ ಶ್ರೀಮತಿಯವರು ಸಾರ್ವಜನಿಕರ ಮಧುಮೇಹ ಮತ್ತು ರಕ್ತದೊತ್ತಡ ಪರೀಕ್ಷೆ ನಡೆಸಿದರು.

    Click here

    Click here

    Click here

    Call us

    Call us

    ಕಾರ್ಯಕ್ರಮದ  ಅಧ್ಯಕ್ಷತೆಯನ್ನು ವಹಿಸಿರುವ ಗಣೇಶ ದೇವಾಡಿಗ ಉಪಾಧ್ಯಕ್ಷರು ಗ್ರಾಮ ಪಂಚಾಯತ್ ಕಂಬದಕೋಣೆ ಅವರು “ಆರೋಗ್ಯವೇ ಪರಮಧನ” ಆರೋಗ್ಯವನ್ನ ನಾವು ಕಾಪಾಡಿಕೊಂಡರೆ ಎಲ್ಲವನ್ನು  ಪಡೆಯಬಹುದು ಎಂದು ತಿಳಿಸುತ್ತಾ  ಸಣ್ಣಪುಟ್ಟ ತೊಂದರೆಗಳಿಗೆ ಮಾತ್ರೆಗಳ ಮೊರೆ ಹೋಗದೆ ಮನೆ ಮದ್ದಿನಿಂದಲೇ ಗುಣ ಮಾಡಿಕೊಳ್ಳಬಹುದು. ಇಂತಹ ಮಾಹಿತಿ ಕಾರ್ಯಕ್ರಮಗಳನ್ನ ಕೇಳಿ  ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು  ಎಂದು ಸಾರ್ವಜನಿಕರಿಗೆ ಕರೆ ನೀಡಿದರು.

    ವೇದಿಕೆಯಲ್ಲಿ ಜಲಜಾಕ್ಷಿ ಗಾಣಿಗ ಗ್ರಾಮ ಪಂಚಾಯಿತಿ ಸದಸ್ಯರು, ರೇಖಾ ಅಂಗನವಾಡಿ ಮೇಲ್ವಿಚಾರಕರು, ನಾಗರತ್ನ ಯು ಬಾಲ ವಿಕಾಸ ಸಮಿತಿ ಅಧ್ಯಕ್ಷರು, ದಯಾನಂದ್ ಪುಟ್ಟಗಾರ್ ಶಾಲಾ ಮುಖ್ಯೋಪಾಧ್ಯಾಯರು, ಚಂದ್ರ ದೇವಾಡಿಗ ಶಿಕ್ಷಕರು,  ಸಿಎಚ್ಒ ಸುಭಾಷ್ ಪಿಎಚ್ ಸಿಓ ಶ್ರೀಮತಿ  ಉಪಸ್ಥಿತರಿದ್ದರು.

    ಅಂಗನವಾಡಿ ಶಿಕ್ಷಕಿಯಾದ ಅನುಸೂಯ ಮಯ್ಯ ಕಾರ್ಯಕ್ರಮವನ್ನ ನಿರೂಪಿಸಿ, ಪ್ರಾ.ಆ.ಕೇ. ಕಿರುಮಂಜೇಶ್ವರ ಸ್ವಾಗತಿಸಿ, ಅಂಗನವಾಡಿ ಶಿಕ್ಷಕಿ  ಎಚ್. ಗೌರಿಯವರು ಧನ್ಯವಾದಗಳನ್ನು ಸಲ್ಲಿಸಿದರು.

    Like this:

    Like Loading...

    Related

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d