Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಯಪ್ರಕಾಶ್ ಹೆಗ್ಡೆಯದ್ದು ಬಂಡಾಯವಲ್ಲ. ಅಧಿಕಾರ ದಾಹವಷ್ಟೇ: ಪ್ರತಾಪ್ಚಂದ್ರ ಶೆಟ್ಟಿ ಆರೋಪ
    ಊರ್ಮನೆ ಸಮಾಚಾರ

    ಜಯಪ್ರಕಾಶ್ ಹೆಗ್ಡೆಯದ್ದು ಬಂಡಾಯವಲ್ಲ. ಅಧಿಕಾರ ದಾಹವಷ್ಟೇ: ಪ್ರತಾಪ್ಚಂದ್ರ ಶೆಟ್ಟಿ ಆರೋಪ

    Updated:14/12/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಇಲ್ಲಿನ ರೋಟರಿ ಸಭಾಭವದಲ್ಲಿ ಯಡ್ತರೆ, ಬೈಂದೂರು, ಪಡುವರಿ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆ ಜರುಗಿತು. ವಿಧಾನ ಪರಿಷತ್ ಅಭ್ಯರ್ಥಿ ಪ್ರತಾಪ್‌ಚಂದ್ರ ಶೆಟ್ಟಿ ಮಾತನಾಡಿ ಬೇರೆಯವರಿಗೂ ಅವಕಾಶ ನೀಡಬೇಕೆಂಬ ಉದ್ದೇಶದಿಂದ ತಾನು ಸ್ವರ್ಧಿಸುವುದಿಲ್ಲ ಎಂದು ಹೇಳಿದ್ದೆ. ಆದರೆ ಈಗ ಪಕ್ಷದ ಕಾರ್ಯಕರ್ತರು, ವರಿಷ್ಠರು ಮತ್ತೆ ಸ್ವರ್ಧಿಸಬೇಕೆಂಬ ತೀರ್ಮಾನ ಕೈಗೊಂಡಿದ್ದಾರೆ. ಅವರ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದ ಅವರು ಜಯಪ್ರಕಾಶ್ ಹೆಗ್ಡೆಯವರಿಗೆ ಸಾಕಷ್ಟು ಅವಕಾಶ ಮಾಡಿಕೊಟ್ಟಿದೆ. ಎರಡು ಭಾರಿ ಸೋತವರಿಗೆ ಮತ್ತೆ ಅವಕಾಶ ಮಾಡಿಕೊಡಬಾರದೆಂಬ ನಿಯಮವನ್ನೂ ಮೀರಿ ಸ್ವರ್ಧಿಸಲು ಅನುವು ಮಾಡಿಕೊಟ್ಟಿತ್ತು. ಇನ್ನೂ ಅವರಿಗೇ ಮಾನ್ಯತೆ ನೀಡಬೇಕು ಎನ್ನುವುದಲ್ಲಿ ಅರ್ಥವಿಲ್ಲ. ಜಯಪ್ರಕಾಶ್ ಹೆಗ್ಡೆಯವರದ್ದು ಬಂಡಾಯವಲ್ಲ. ಅಧಿಕಾರ ದಾಹದ ನಡೆಯಷ್ಟೇ. ಇವರು ಯಾವ ಪಕ್ಷದಲ್ಲೂ ಶಾಶ್ವತವಾಗಿ ಇರಲಾರರು. ನಾವು ಜಯಪ್ರಕಾಶ್ ಹೆಗ್ಡೆಯವರನ್ನು ಟೀಕಿಸುತ್ತಿಲ್ಲ. ಬದಲಿಗೆ ಅವರ ನಡೆಯನ್ನು ಖಂಡಿಸುತ್ತಿದ್ದೇವೆ ಎಂದರು. (ಕುಂದಾಪ್ರ ಡಾಟ್ ಕಾಂ ಸುದ್ದಿ)

    Click Here

    Call us

    Click Here

    ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಶಾಸಕ ಗೋಪಾಲ ಪೂಜಾರಿ ಮಾತನಾಡಿ ಕಾಂಗ್ರೆಸ್ ಪ್ರತಾಪ್‌ಚಂದ್ರ ಶೆಟ್ಟಿ ಪಕ್ಷದ ಇತರ ನಾಯಕರಿಗೂ ಅವಕಾಶ ಸಿಗಬೇಕೆಂಬ ಕಾರಣಕ್ಕೆ ಚುನಾವಣೆಗೆ ಸ್ವರ್ಧಿಸುವುದಿಲ್ಲ ಎಂದು ಹೇಳಿದರೇ ವಿನಾಃ ರಾಜಕೀಯ ಸಂನ್ಯಾಸ ತೆಗೆದುಕೊಳ್ಳುವ ಉದ್ದೇಶ ಅವರಿಗಿರಲಿಲ್ಲ. ಈಗ ಪಕ್ಷದ ಕಾರ್ಯಕರ್ತರೇ ಒತ್ತಾಯಿಸಿರುವಾಗ ಅವರ ಮಾತಿಗೆ ಬೆಲೆ ನೀಡಬೇಕಾದ್ದು ನಾಯಕರ ಜವಾಬ್ದಾರಿ. ಅದರ ಮುಂದೆ ಯಾವುದೂ ಮುಖ್ಯವೆನಿಸುವುದಿಲ್ಲ ಎಂದರು.

    ಕಾಂಗ್ರೆಸ್ ಮುಖಂಡ ಮಂಜುನಾಥ ಭಂಡಾರಿ ಮಾತನಾಡಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷಕ್ಕೆ ಬರುವವರಿಗೆ ಮಣೆ ಹಾಕುವ ಬದಲಿಗೆ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಮಾನ್ಯತೆ ನೀಡುವುದು ಒಳ್ಳೆಯದು. ಪದೆ ಪದೆ ಪಕ್ಷ ಬದಲಿಸುವವರಿಂದ ಕಾರ್ಯಕರ್ತರಿಗೆ ಗೊಂದಲ ಉಂಟುಮಾಡುತ್ತಿದೆ. ಈ ಭಾರಿಯಾದವರೂ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ ಹಿರಿಯ ಮುಖಂಡರನ್ನೇ ಗೆಲ್ಲಿಸಬೇಕಾಗಿದೆ ಎಂದು ಹೇಳಿದರು. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ಕಾಂಗ್ರೆಸ್ ಮುಂದಾಳುಗಳಾದ ಮಂಜುನಾಥ ಭಂಡಾರಿ, ಎಂ.ಎ. ಗಪೂರ್, ಕೆ.ಎಫ್‌ಡಿಸಿ ಅಧ್ಯಕ್ಷ ಹಿರಿಯಣ್ಣ, ಎಐಸಿಸಿ ಸದಸ್ಯ ರಘುರಾಮ ಶೆಟ್ಟಿ, ರಾಜು ಪೂಜಾರಿ, ರಾಮ ಶೇರುಗಾರ್, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಗಾಣಿಗ, ಕಾರ್ಯದರ್ಶಿ ನಾಗರಾಜ ಗಾಣಿಗ, ಕುಂದಾಪುರ ಬ್ಲಾಕ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಬೈಂದೂರು ಪಂಚಾಯತ್ ಅಧ್ಯಕ್ಷ ಯು. ಜನಾರ್ಧನ್, ಉಪಾಧ್ಯಕ್ಷೆ ಸುಶೀಲ, ಯಡ್ತರೆ ಗ್ರಾ.ಪಂ ಅಧ್ಯಕ್ಷ ನಾಗರಾಜ ಶೆಟ್ಟಿ, ಉಪಾಧ್ಯಕ್ಷೆ ಕಲಾವತಿ ನಾಗರಾಜ್, ಪುರಸಭೆ ಸದಸ್ಯೆ ದೇವಕಿ ಸಣ್ಣಯ್ಯ, ಪ್ರಕಾಶ್ಚಂದ್ರ ಶೆಟ್ಟಿ, ಸಂತೋಷ್‌ಕುಮಾರ್ ಶೆಟ್ಟಿ, ಸುಬ್ರಮಣ್ಯ ಪೂಜಾರಿ, ರಿಯಾಜ್ ಅಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.

    _MG_6344 _MG_6352

    Click here

    Click here

    Click here

    Call us

    Call us

    Like this:

    Like Loading...

    Related

    Byndoor MLA News Raju Poojary
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d