Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜಾಜಿನಗರದಲ್ಲಿ ಡಿ.19ರಿಂದ ಮೂರು ದಿನಗಳ‌ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ರಾಜಾಜಿನಗರದಲ್ಲಿ ಡಿ.19ರಿಂದ ಮೂರು ದಿನಗಳ‌ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ

    Updated:14/11/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೆಂಗಳೂರು:
    ರಾಜಾಜಿನಗರದಲ್ಲಿ ಡಿಸೆಂಬರ್ 19,20,21ರಂದು ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಂಡಿದ್ದೆವೆ ಎಂದು ಅಭಯಸೇವಾ ಫೌಂಡೇಶನ್ ಅಧ್ಯಕ್ಷ ಯುಬಿ ಉಮೇಶ್ ಶೆಟ್ಟಿ ಹೇಳಿದ್ದಾರೆ.

    Click Here

    Call us

    Click Here

    ಅವರು ಬೆಂಗಳೂರಿನ ಬಂಟರ ಸಂಘದಲ್ಲಿ ನಡೆದ ಸೇವಾ ಸಂಕಲ್ಪ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಕಾರ್ಯಕ್ರಮದಲ್ಲಿ ಉದ್ಯಮಿ ಜಯಪ್ರಸಾದ್ ಶೆಟ್ಟಿ, ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಬಿ.ಎಲ್.ಎನ್.ಹೆಗಡೆ, ಅಭಯ ಸೇವಾ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷರಾದ ಎಂ.ಬಿ.ಉಮೇಶ್ ಶೆಟ್ಟಿ, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಕೆ.ಉಮೇಶ್ ಶೆಟ್ಟಿರವರು, ಬಿಜೆಪಿ ಮುಖಂಡರಾದ ಬೇಳೂರು ರಾಘವೇಂದ್ರ ಶೆಟ್ಟಿ, ಬಿಜೆಪಿ ಮಹಿಳಾ ಮುಖಂಡರಾದ ಕಾಂತಿ ಶೆಟ್ಟಿ, ಕನ್ನಡ ಪರ ಹೋರಾಟಗಾರ ಶಿವಾನಂದ್ ಶೆಟ್ಟಿ, ಆರ್.ಎಸ್.ಎಸ್.ಮುಖಂಡರಾದ ಸುರೇಶ್, ಸ್ಥಳೀಯ ಮುಖಂಡರಾದ ಸಂತೋಷ್ ಶೆಟ್ಟಿ ಅವರು ಭಾಗಿಯಾಗಿ ಸೇವಾ ಸಂಕಲ್ಪ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿದ್ದರು.

    ಈ ವೇಳೆ ವರಸಿದ್ದಿ ವಿನಾಯಕನಿಗೆ ರಂಗಪೂಜೆ, ಭಜನೆ ಕುಣಿತ, ಬೀದಿ ನಾಟಕ ಸೇರಿ ವಿವಿಧ ಕಾರ್ಯಕ್ರಮ ನಡೆಯಿತು.ಕಾರ್ಯಕ್ರದಲ್ಲಿ ಎಂ.ಬಿ.ಉಮೇಶ್ ಶೆಟ್ಟಿ ಮಾತನಾಡಿ ಅಭಯ ಸೇವಾ ಫೌಂಡೇಷನ್ ಬಡವರ, ನೊಂದವರ ಸೇವೆ ಮಾಡಲು ಮತ್ತು ಸಂಸ್ಕೃತಿ ಉಳಿಸಲು ಸ್ಥಾಪನೆಯಾಗಿದೆ. ಕಳೆದ ವರ್ಷ ಸೇವಾ ಸಂಕಲ್ಪ ಕಾರ್ಯಕ್ರಮ ಸಾವಿರಾರು ಜನರಿಗೆ ಉಪಯೋಗವಾಗಿದೆ.ಈ ಭಾರಿ ರಾಜಾಜಿಗರದ ಶ್ರೀರಾಮಮಂದಿರ ಆಟದ ಮೈದಾನ ರಾಜಾಜಿನಗರದಲ್ಲಿ ಡಿಸೆಂಬರ್ 19,20,21ರ ಮೂರು ದಿನಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

    ಇಲ್ಲಿ ಅಂಧಮುಕ್ತ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರಿಗೂ ಕಣ್ಣಿನ ತಪಾಸಣೆ ಮಾಡಲಾಗುತ್ತಿದೆ.ಮಾದಕವಸ್ತುಗಳ ಪಿಡುಗು, ಬಾಲ್ಯ ವಿವಾಹ, ಸಂಚಾರಿ ನಿಯಮ ಪಾಲನೆಗೆ ಬೀದಿ ನಾಟಕದ ಮೂಲಕ ರಾಜಾಜಿನಗರದ ಬೇರೆ ಬೇರೆ ಕಡೆ ಜಾಗೃತಿ ಅಭಿಯಾನ ಏರ್ಪಡಿಸಲಾಗಿದೆ.ಹಾಗೇ ನವ ದುರ್ಗಾದೀಪ ನಮಸ್ಕಾರ ಕಾರ್ಯಕ್ರಮದಲ್ಲಿ ಸಾವಿರಾರು ಮಹಿಳೆಯರು ಭಾಗವಹಿಸಲಿದ್ದಾರೆ. 108 ಕಳಸಪೂಜೆ, ಹೋಮ, ಹವನ ನವದುರ್ಗೆಯ ಮಹತ್ವ ತಿಳಿಸುವ ಕಾರ್ಯಕ್ರಮ ನಡೆಯಲಿದೆ ಎಂದರು.

    Click here

    Click here

    Click here

    Click Here

    Call us

    Call us

    ಸೇವಾ ಸಂಕಲ್ಪ ಕಾರ್ಯಕ್ರಮದಲ್ಲಿ ಬಡವರ ಆರೋಗ್ಯ ತಪಾಸಣೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು  ಆಯೋಜಿಸಲಾಗುತ್ತಿದೆ. ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ, ಬ್ಯಾಗ್ ಹಾಗೂ ಕಣ್ಣಿನ ದೋಷ ಇರುವವರಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಗುತ್ತದೆ.

    ಸೇವಾ ಸಂಕಲ್ಪ ಕಾರ್ಯಕ್ರಮದಲ್ಲಿ  ಮೂರು ದಿನಗಳ ಕಾಲ ಭರತನಾಟ್ಯ, ಹುಲಿವೇಷ, ಗೀತೆ, ಭಜನೆ, ಯಕ್ಷಗಾನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ. ಅಭಯ ಸೇವಾ ಫೌಂಡೇಷನ್ ಹತ್ತು ಹಲವು ಕಾರ್ಯಕ್ರಮ ಆಯೋಜಿಸಿದ್ದು, ಎಲ್ಲ ಸಾಮಾಜಿಕ ಕಾರ್ಯಗಳಿಗೆ ಬೆಂಬಲ ನೀಡಿ,ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಉಮೇಶ್ ಶೆಟ್ಟಿ ಅವರು ಮನವಿ ಮಾಡಿಕೊಂಡಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    twenty + one =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.