Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆದಿತ್ಯಪ್ರಸಾದ್ ಅವರ ʼಗೋಪಾಳದಿಂದ ನೇಪಾಳದೆಡೆಗೆʼ ಪುಸ್ತಕ ಲೋಕಾರ್ಪಣೆ
    ಊರ್ಮನೆ ಸಮಾಚಾರ

    ಆದಿತ್ಯಪ್ರಸಾದ್ ಅವರ ʼಗೋಪಾಳದಿಂದ ನೇಪಾಳದೆಡೆಗೆʼ ಪುಸ್ತಕ ಲೋಕಾರ್ಪಣೆ

    Updated:10/12/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮಾಧ್ಯಮಗಳಲ್ಲಿ ಸದ್ವಿಚಾರಗಳು ಮೂಡಿಬಂದು ಸಮಾಜವನ್ನು ಬೆಸೆಯುವ ಕಾರ್ಯವಾಗಬೇಕು ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಅಭಿಪ್ರಾಯ ವ್ಯಕ್ತಪಡಿಸಿದರು.

    Click Here

    Call us

    Click Here

    ಅವರು ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ‘ಸುಗುಣಮಾಲಾ’ ಮಾಸಪತ್ರಿಕೆ ಹಾಗೂ ಬೆಂಗಳೂರಿನ ಸಮಾನ ಮನಸ್ಕ ಮಾಧ್ಯಮ ಮಿತ್ರರ ವೇದಿಕೆ ‘ವಿಕಾಸʼ ನೇತೃತ್ವದಲ್ಲಿ ಗೀತಾ ಮಂದಿರದ ಪುತ್ತಿಗೆ ಶ್ರೀನರಸಿಂಹ ಸಭಾಭವನದಲ್ಲಿ ನಡೆದ ‘ಕರಾವಳಿ ವಿಕಾಸ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.

    ಪರ್ಯಾಯ ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿದ್ದರು.

    ಈ ಸಂದರ್ಭದಲ್ಲಿ ‘ಉಡುಪಿ ಶ್ರೀಕೃಷ್ಣ ಪೂಜಾ ಪರ್ಯಾಯ ವೈಭವʼ ಮತ್ತು ಶ್ರೀ ಸುಜ್ಞಾನೇಂದ್ರತೀರ್ಥ ಶ್ರೀಪಾದರು (ಸಂಪಾದಕ-ಓಂಪ್ರಕಾಶ್ ಭಟ್ ಉಡುಪಿ) ಕೃತಿ ಹಾಗೂ ಇಂದಿರಾ ನಾಡಿಗ್ ಅವರ ‘ಹಸಿಗನಸು’ಕಾದಂಬರಿಯನ್ನು ಕಸಾಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಶಿವಮೊಗ್ಗದ ಆದಿತ್ಯಪ್ರಸಾದ್ ಅವರ ‘ಗೋಪಾಳದಿಂದ ನೇಪಾಳದೆಡೆಗೆʼ ಪ್ರವಾಸ ಕಥನವನ್ನು ಕಿನ್ನಿಗೋಳಿ ‘ಯುಗಪುರುಷ’ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಹಾಗೂ ಆಸ್ಟ್ರೇಲಿಯಾದ ಉಮೇಶ್ ದತ್ ಹಿಂದೂ ಧರ್ಮದ ಆಚರಣೆಗಳಿಗೆ ವೈಜ್ಞಾನಿಕ ತಳಹದಿಯ ಸಂಶೋಧನಾ ಪುಸ್ತಕ ‘ದಿ ಅಸ್ಟೋ ಕೊಡೆಸ್ಟ್ʼ ಅನಾವರಣಗೊಳಿಸಲಾಯಿತು.

    ಶಾಸಕ ಯಶಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್, ವಿಧಾನ ಪರಿಷತ್‌ ಮಾಜಿ ಸದಸ್ಯ ಕ್ಯಾ. ಗಣೇಶ ಕಾರ್ಣಿಕ್, ಉದ್ಯಮಿ ರಘುನಾಥ ಸೋಮಯಾಜಿ ಮುಖ್ಯ ಅಭ್ಯಾಗತರಾಗಿ ಆಗಮಿಸಿ ಶುಭ ಹಾರೈಸಿದರು. ಪತ್ರಕರ್ತರಾದ ಪ್ರಕಾಶ್ ಇಳಂತಿಲ ಮತ್ತು ಜಿತೇಂದ್ರ ಕುಂದೇಶ್ವರ ಅಭ್ಯಾಗತರಾಗಿದ್ದರು.

    Click here

    Click here

    Click here

    Click Here

    Call us

    Call us

    ಕಳೆದ 40 ವರ್ಷಗಳಿಂದ ಪುತ್ತಿಗೆ ಮಠದಿಂದ ಪ್ರಕಟವಾಗುತ್ತಿರುವ ಆಧ್ಯಾತ್ಮಿಕ ಮಾಸಪತ್ರಿಕೆ ‘ಸುಗುಣಮಾಲಾ ನಡೆದುಬಂದ ದಾರಿʼ ಕುರಿತು ಸಂಪಾದಕೀಯ ಸಲಹಾ ಮಂಡಳಿ ಸದಸ್ಯ ಓಂ. ಪ್ರಕಾಶ್ ಭಟ್ ಮಾತನಾಡಿದರು. ಪುತ್ತಿಗೆ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ವಿದ್ವಾನ್ ಎಂ. ಪ್ರಸನ್ನ ಆಚಾರ್ಯ, ಸುಗುಣಮಾಲಾ ಸಂಪಾದಕ ಮಹಿತೋಷ ಆಚಾರ್ಯ ಉಪಸ್ಥಿತರಿದ್ದರು.

    ʼವಿಕಾಸʼ ಅಧ್ಯಕ್ಷ ಶ್ರೀನಾಥ ಜೋಶಿ ಮತ್ತು ಪ್ರಧಾನ ಕಾರ್ಯದರ್ಶಿ ಹನುಮೇಶ್ ಕೆ. ಯಾವಗಲ್ ವೇದಿಕೆಯಲ್ಲಿದ್ದರು. ಪ್ರಣವ ಮೀಡಿಯಾ ಹೌಸ್ನ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

    ಯೋಗ ಥೆರಪಿಸ್ಟ್ ಸ್ಫೂರ್ತಿ ಯಾವಗಲ್ ಅವರಿಂದ ಪ್ರಾರ್ಥನಾ ಕಥಕ್ ನೃತ್ಯ ನಡೆಯಿತು.

    ಈ ಸಂದರ್ಭದಲ್ಲಿ ‘ವಿಕಾಸ ಉಡುಪಿ ಶ್ರೀಕೃಷ್ಣ ಸದ್ಭಾವನಾ ಪ್ರಶಸ್ತಿ’ಯನ್ನು ಹಿರಿಯ ಭರತನಾಟ್ಯ ಕಲಾವಿದೆ ವಿದುಷಿ ಗಾಯತ್ರಿ ಚಂದ್ರಶೇಖ‌ರ್ ಮತ್ತು ದ್ರಾವಿಡ ವಿಶ್ವವಿದ್ಯಾಲಯದ ಡೀನ್ ಬಿ.ಎಸ್. ಶಿವಕುಮಾರ್ ಅವರಿಗೆ, ವೈದ್ಯಲೋಕ- ಹೆಲ್ತ್ ವಿಷನ್ ಪ್ರಾಯೋಜಿತ ‘ವಿಕಾಸ ವೈದ್ಯರತ್ನ’ ಪ್ರಶಸ್ತಿಯನ್ನು ಡಾ. ಆನಂದ ಶೇಡ್ವಾಳ, ಸಂಪದ ಸಾಲು ಪ್ರಾಯೋಜಿತ ‘ವಿಕಾಸ ಸಂಗೀತ ರತ್ನ’ಪ್ರಶಸ್ತಿಯನ್ನು ವಿದುಷಿ ಪವನಾ ಬಿ. ಆಚಾರ್ ಮಣಿಪಾಲ ಅವರಿಗೆ ನೀಡಿ ಪುರಸ್ಕರಿಸಲಾಯಿತು.

    ʼಮಾಧ್ಯಮ ಲೋಕದ ಸವಾಲುಗಳು’ಕುರಿತ ವಿಚಾರಗೋಷ್ಠಿಯಲ್ಲಿ ಮಣಿಪಾಲ ಮಾಹೆ ಸತ್ಯಬೋಧ ಜೋಶಿ, ಹಿರಿಯ ಪತ್ರಕರ್ತರಾದ ನಿತ್ಯಾನಂದ ಎಸ್. ಪಡ್ರೆ ಮತ್ತು ಡಾ.ಆಶಾ ಕೃಷ್ಣಸ್ವಾಮಿ ವಿಚಾರ ಮಂಡಿಸಿದರು. ಪತ್ರಕರ್ತ ಲಕ್ಷ್ಮೀ ಮಚ್ಚಿನ ನಿರೂಪಿಸಿದರು.

    ಸ್ಮಾರಕ ಪ್ರಶಸ್ತಿ
    ಹಲವಾರು ಹಿರಿಯ ಪತ್ರಕರ್ತರ ಸ್ಮರಣಾರ್ಥ ನೀಡುವ ‘ವಿಕಾಸ ಮಾಧ್ಯಮ ಸಾಧಕ ಪ್ರಶಸ್ತಿಗಳಾದ ಪಾ.ವೆಂ. ಆಚಾರ್ಯ ಸ್ಮರಣಾರ್ಥ ಪ್ರಶಸ್ತಿ- ಕಿರಣ್ ಮಂಜನಬೈಲು ಉಡುಪಿ, ಬನ್ನಂಜೆ ಗೋವಿಂದಾಚಾರ್ಯ ಸ್ಮರಣಾರ್ಥ ಪ್ರಶಸ್ತಿ- ಡಾ. ಮಂದಾರ ರಾಜೇಶ ಭಟ್ ಮೂಡುಬಿದಿರೆ, ಬನ್ನಂಜೆ ರಾಮಾಚಾರ್ಯ ಸ್ಮರಣಾರ್ಥ ಪ್ರಶಸ್ತಿ- ಸಾಂತೂರು ಶ್ರೀನಿವಾಸ ತಂತ್ರಿ ಉಜಿರೆ, ದಾಮೋದರ ಕಕ್ರಣ್ಣಾಯ ಸ್ಮರಣಾರ್ಥ ಪ್ರಶಸ್ತಿ- ಚಂದ್ರಶೇಖರ ಕುಳಮರ್ವ ಮಂಗಳೂರು (ಉಪಯುಕ್ತ ನ್ಯೂಸ್ ಸಂಪಾದಕರು), ಸಂತೋಷ್ ಕುಮಾ‌ರ್ ಗುಲ್ವಾಡಿ ಸ್ಮರಣಾರ್ಥ ಪ್ರಶಸ್ತಿ- ವೆಂಕಟೇಶ ಪೈ ಬೆಂಗಳೂರು, ದಾಮೋದರ ಐತಾಳ ಸ್ಮರಣಾರ್ಥ ಪ್ರಶಸ್ತಿ- ಶ್ವೇತ ಇಂದಾಜೆ ಮಂಗಳೂರು, ಕೊಡೆತ್ತೂರು ಅನಂತಪದ್ಮನಾಭ ಉಡುಪ ಸ್ಮರಣಾರ್ಥ ಪ್ರಶಸ್ತಿ- ಶ್ಯಾಮ್ ಹೆಬ್ಬಾರ್ ಬೆಂಗಳೂರು, ಈಶ್ವರಯ್ಯ ಅನಂತಪುರ ಸ್ಮರಣಾರ್ಥ ಪ್ರಶಸ್ತಿ- ಶ್ರೀಕೃಷ್ಣ ಭಟ್ ಮಾಯ್ಲೆಂಗಿ ಹಾಗೂ ಮಂಜುನಾಥ ಭಟ್ ಸ್ಮರಣಾರ್ಥ ಪ್ರಶಸ್ತಿ- ಹರೀಶ್ ಕೆ. ಆದೂರು ಮೂಡುಬಿದಿರೆ ಅವರಿಗೆ ಸಾಹಿತಿ ಡಾ. ವೀಣಾ ಬನ್ನಂಜೆ ಮತ್ತು ಪುತ್ತಿಗೆ ಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಪ್ರದಾನಿಸಿದರು.

    ಕ್ಯಾ. ಗಣೇಶ ಕಾರ್ಣಿಕ್, ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ಸುಧೀಂದ್ರ ಪ್ರಸಾದ್‌ ಇದ್ದರು. `ನಮ್ಮ ಹಿರಿಯರು- ನಮ್ಮ ಹೆಮ್ಮೆ’ ವಿಭಾಗದಲ್ಲಿ ವಿಜಯಕುಮಾ‌ರ್ ಹೊಳ್ಳ ಕೋಟ, ರಾಮಕೃಷ್ಣ ಮೈರುಗ ಕಾಸರಗೋಡು, ಜಿ.ಕೆ. ಭಟ್, ರಾಮಚಂದ್ರ ಆಚಾರ್ಯ ಪಡುಬಿದ್ರಿ, ಲಕ್ಷ್ಮಿ ಮಚ್ಚಿನ ಕುಂದಾಪುರ ಅವರನ್ನು ಗೌರವಿಸಲಾಯಿತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    eleven + nine =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.