Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಸ್ತಾನದಲ್ಲಿ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಸಾಸ್ತಾನದಲ್ಲಿ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ನಮ್ಮ ದೇಶದಲ್ಲಿ ಗುರುಕುಲ ಮಾದರಿಯ ಶಿಕ್ಷಣ ಪದ್ದತಿಯನ್ನು ಜಾರಿಗೆ ತರಬೇಕು ಎಂದು ಕೇಮಾರಿನ ಸಾಂದೀಪನಿಸಾಧನಾಶ್ರಮದ ಶ್ರೀ ಈಶ ವಿಠಲದಾಸ ಶ್ರೀಪಾದಂಗಳ ನುಡಿದರು.

    Click Here

    Call us

    Click Here

    ಅವರು ಭಾನುವಾರ ಸಾಸ್ತಾನದ ಕಾರ್ತಿಕೇಯ ಎಸ್ಟೇಟ್‌ನಲ್ಲಿ  ಹಿಂದೂ ಸಂಗಮ ಆಯೋಜನಾ ಸಮಿತಿ ಸಾಲಿಗ್ರಾಮ ತಾಲೂಕಿನ ಸಾಸ್ತಾನ ಮಂಡಲದ ಆಶ್ರಯದಲ್ಲಿ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಆಶ್ರೀವಚನ ನೀಡಿ ಮಾತನಾಡಿದರು. ಹಿಂದೆ ಗುರುಕುಲ ಮಾದರಿ ಶಿಕ್ಷಣ ಇದಿತ್ತು ಆದರೆ ಇಂದು ಗುಲಾಮಿ ಶಿಕ್ಷಣದಿಂದ ಇಡೀ ದೇಶವೇ ಸಮಸ್ಯೆ ಎದುರಿಸುತ್ತಿದ್ದೇವೆ.

    ಸಂಸ್ಕಾರಭರಿತ ಶಿಕ್ಷಣವನ್ನು ನಮ್ಮ ಮುಂದಿನ ತಲೆಮಾರಿಗೆ ತಾಯಂದಿರರು ನೀಡಬೇಕಿದೆ, ಆಂಗ್ಲ ಶಿಕ್ಷಣ ವ್ಯಾಮೂಹದಿಂದ ನಮ್ಮ ಸಂಪ್ರದಾಯ ಪರಂಪರೆಯನ್ನು ಮರೆತು ಬಿಡುತ್ತಿದ್ದೇವೆ ಇದರ ದುಷ್ಪರಿಣಾಮ ಇಂದು ಅನುಭವಿಸುತ್ತಿದ್ದೇವೆ ಇದಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸಮರ್ಪಣಾ ಮನೋಭಾವದಿಂದ ಹಗಲು ರಾತ್ರಿ ಎನ್ನದೆ ಕಾರ್ಯನಿರ್ವಹಿಸುತ್ತಿದೆ. ಹಿಂದೂ ಸಮುದಾಯದ ಮಕ್ಕಳಿಗೆ ಭಗವದ್ಗೀತೆ, ರಾಮಾಯಣ ಮಹಾಭಾರತದಂತ ಕಾವ್ಯವನ್ನು ಪ್ರತಿದಿನ ಓದಿಸಿ ಹಿಂದೂ ಧರ್ಮವನ್ನು ನಿರಂತರ ಜಾಗೃತಗೊಳಿಸುವ ಕೆಲಸ ನಮ್ಮ ಪೋಷಕರಿಂದಾಗಬೇಕು ಎಂದು ಹಿಂದೂ ಸಂಗಮದ ಮೂಲಕ ಜಾಗೃತಗೊಳಿಸುವ ಕಾರ್ಯ ನಿತ್ಯನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.

    ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಕಾರ್ಯವಾಹ  ಪ್ರಕಾಶ್ ಎಸ್.ಪಿ. ದಿಕ್ಸೂಚಿ ಭಾಷಣಗೈದು ಅಖಂಡವಾಗಿದ್ದ ಈ ಭರತ ಖಂಡವನ್ನು ಮರುಜೋಡಿಸುವ ಕೆಲಸ ಮಾಡಬೇಕು, ಸನಾತನ ಹಿಂದೂ ಧರ್ಮವನ್ನು ಮತ್ತಷ್ಟು ಜಾಗೃತಗೊಳಿಸುವ ಕಾರ್ಯ ಮಾಡಬೇಕಿದೆ,ಜಗತ್ತಿಗೆ ಭಾರತ ವಿಶ್ವಗುರು ಎನಿಸಿದೆ ಅದೇ ರೀತಿ ಧರ್ಮಜಾಗೃತಿಗಾಗಿ ಕುಟುಂಬ ಪ್ರಭೋದನ್,ಸಂಸ್ಕೃತಿ ರಕ್ಷಣೆ, ವಿದೇಶಿ ಆಚರಣೆ ಅಂತ್ಯಗೊಳ್ಳಬೇಕು, ಅಸ್ಪೃಶ್ಯತೆ ತೊಡೆದುಹಾಕಬೇಕು, ಪರಿಸರದ ಮೇಲೆ ರ್ದೌಜನ್ಯಕ್ಕೆ ಕಡಿವಾಣ ಹಾಕಬೇಕು ಈ ಮೂಲಕ ಅದರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು, ರಾಮಮಂದಿರದ ಮೂಲಕ ಸ್ವದೇಶಿ ಚಿಂತನೆ ಜಾಗೃತಗೊಂಡಿದೆ,ಕೃಷಿಗೆ ವಿಷಕಾರಿ ವಸ್ತುಗಳ ಬಳಕೆಗೆ ಕಡಿವಾಣ ಹಾಕಿ ಸಾವಯುವ ಪದ್ದತಿ ಜಾರಿಗೊಳಿಸಬೇಕು ಎಂದರು.

    ಸಭೆಯ ಅಧ್ಯಕ್ಷತೆಯನ್ನು ಹಿಂದೂ ಸಂಗಮ ಸಾಸ್ತಾನ ಮಂಡಲದ ಅಧ್ಯಕ್ಷ ರಘು ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕಚ್ಚೂರು ಮಾಲ್ತಿಯಮ್ಮ ದೇಗುಲದ ಟ್ರಸ್ಟಿ ವಾಸುದೇವ ಹಂಗಾರಕಟ್ಟೆ, ಸಾಸ್ತಾನದ ಪ್ರಸಿದ್ಧ ವೈದ್ಯೆ ಡಾ. ಉಷಾ ಹೇಮಂತ್, ಹಿಂದೂ ಸಂಗಮದ ಉಪಾಧ್ಯಕ್ಷ ಎಂ.ಸಿ ಚಂದ್ರಶೇಖರ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಸಮಿತಿಯ ಪ್ರಮುಖರಾದ ಯೋಗ ಗುರುಕುಲದ ಡಾ. ವಿದ್ವಾನ್ ವಿಜಯ ಮಂಜರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ಪ್ರಶಾಂತ್ ಶೆಟ್ಟಿ ನಿರೂಪಿಸಿದರೆ, ಸಮಿತಿಯ ಸುರೇಶ್ ಪೂಜಾರಿ ಪಾಂಡೇಶ್ವರ ಸ್ವಾಗತಿಸಿದರು. ಹಿಂದೂ ಸಂಗಮ ಸಾಲಿಗ್ರಾಮ ತಾಲೂಕಿನ ಸಂಯೋಜಕ ಸುರೇಂದ್ರ ಕೋಡಿ ವಂದಿಸಿದರು.  

    ಇದೇ ವೇಳೆ ಕೇಮಾರು ಈಶವಿಠಲದಾಸ ಸ್ವಾಮೀಜಿ ಅವರನ್ನು ಫಲಪುಷ್ಭಗಳೊಂದಿಗೆ ಗೌರವಿಸಿಕೊಳ್ಳಲಾಯಿತು.

    ಸಾಸ್ತಾನದ ಶಿವಕೃಪಾ ಕಲ್ಯಾಣಮಂಟಪದಿಂದ ಬೃಹತ್ ಹಿಂದೂ ಸಂಗಮ ಶೋಭಯಾತ್ರೆ ವೈಭವದಿಂದ ಕಾರ್ತಿಕೇಯ ಎಸ್ಟೇಟ್ ವರೆಗೆ ನಡೆದ ಮೆರವಣಿಗೆಯಲ್ಲಿ ವಿವಿಧ ಸ್ಥಭ್ಧ ಚಿತ್ರಗಳು,ವಿವಿಧ ಭಜನಾ ತಂಡಗಳು ಚಂಡೆ ವಾದನದೊಂದಿಗೆ ಭಾಗವಹಿಸಿದವು.

    ಈ ಮೊದಲು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಪಾರಾಯಣ ತಂಡ ಬ್ರಹ್ಮಾವರ ಇವರಿಂದ ಭಗವದ್ಗೀತೆ ಪಾರಾಯಣ, ಮೀನಾ ಕಾರಂತ ನೇತ್ರತ್ವದ ಹೆಜ್ಜೆಗೆಜ್ಜೆ ನೃತ್ಯ ತಂಡದಿಂದ ನೃತ್ಯ ಸಿಂಚನ, ದೇಶ ಭಕ್ತಿಗೀತೆಗಾಯನ ಜರಗಿತು,ಕಲಾವಿದ ಮಂಜುನಾಥ ಕುಂದೇಶ್ವರ ಅವರಿಂದ ಹಾಸ್ಯ ಸಂಜೆ ಜರಗಿತು.ಸ್ಥಳೀಯ ಗಾಯಕರಿಂದ ಸಂಗೀತ ಸಂಜೆ ಜರಗಿತು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    fourteen − four =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.