ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ವಿದ್ಯಾರ್ಥಿಗಳು ಯಾವುದೇ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಮುಖ್ಯ. ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಆದರೆ ಅದು ಬಹುದೊಡ್ಡ ಬದುಕಿನ ಪಾಠವನ್ನು ಕಲಿಸುತ್ತದೆ ಎಂದು ಅಮೇರಿಕನ್ ಏರ್ ಲೈನ್ಸ್ ಕಂಟ್ರಿ ಮ್ಯಾನೇಜರ್ ಸಂಧ್ಯಾ ರಾವ್ ಹೇಳಿದರು.
ಅವರು ಇಲ್ಲಿನ ಮದರ್ ತೆರೆಸಾ ಶಾಲೆಯಲ್ಲಿ ಇತ್ತೀಚಿಗೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವ ಸಲುವಾಗಿ ಹಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಸ್ಪರ್ಧಾ ಕಾರ್ಯಕ್ರಮವು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಶಮಿತಾ ರಾವ್ ಹಾಗೂ ರೇನಿಟಾ ಲೋಬೋ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಗಳು, ತೀರ್ಪುಗಾರರೂ ಆಗಿರುವ ಸಂಧ್ಯಾ ರಾವ್( ಕಂಟ್ರಿ ಮ್ಯಾನೇಜರ್ ಅಮೇರಿಕನ್ ಏರ್ ಲೈನ್ಸ್ ) ಯಶ್ ಆರ್ಯನ್ (ರಾಮಯ್ಯ ಯುನಿವರ್ಸಿಟಿ ಇನ್ ಟರ್ನ್ ಇಂಡಿಯಾ ಓಲ್ಡ್ಸ ಟ್ II ಎಸ್.ಸಿ ಯುವ ಲ್ಯಾಬ್) ಹಾಗೂ ಅಲಿಟಾ ಡೇಸಾ (ಸಂಸ್ಕೃತಿ ಮತ್ತು ಭಾಷಾ ಅಭಿವೃದ್ಧಿ ನಿರ್ದೇಶಕರು) ಮತ್ತು ಶಾಲಾ ಮುಖ್ಯೋಪಾಧ್ಯಾಯಿನಿ ಮಮತಾ ಪೂಜಾರಿ ಅವರು ಉಪಸ್ಥಿತರಿದ್ದರು.
ಅದೇ ರೀತಿಯಾಗಿ ವಿದ್ಯಾರ್ಥಿಗಳು ತರಗತಿವಾರು ನೃತ್ಯ, ಹಾಡು, ಏಕಪಾತ್ರಾಭಿನಯ, ಕೊಳಲು ವಾದನ, ವೀಣಾ ವಾದನ, ಯೋಗಾಸನ, ಯಕ್ಷಗಾನವನ್ನು ಅತ್ಯಂತ ಸುಂದರವಾಗಿ ಹಾಗೂ ನೋಡುಗರು ಮನಸೂರೆಗೊಳ್ಳುವ ರೀತಿಯಲ್ಲಿ ಅತ್ಯಂತ ಸುಂದರವಾಗಿ ಪ್ರದರ್ಶಿಸಿದರು.
ಆರನೇ ತರಗತಿಯ ವಿದ್ಯಾರ್ಥಿಗಳಾದ ಸಾತ್ವಿಕ್ ಆರ್. ಯೋಗಾಸನದಲ್ಲಿ ಪ್ರಥಮ ಸ್ಥಾನವನ್ನು, ಶ್ರೀ ಕರ್ ಭಟ್ ಹಾಡುಗಾರಿಕೆಯಲ್ಲಿ ದ್ವಿತೀಯ ಸ್ಥಾನವನ್ನು, ಮನಸ್ವಿ ಎಂ. ಶೆಟ್ಟಿ ಏಕಪಾತ್ರಭಿನಯದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾಳೆ. ಅದೇ ರೀತಿಯಾಗಿ ಏಳನೇ ತರಗತಿಯಲ್ಲಿ ಶ್ರೀಶಾಂತ್ ಹಾಡುಗಾರಿಕೆಯಲ್ಲಿ ಪ್ರಥಮ ಸ್ಥಾನವನ್ನು, ಹಿಮಾನಿ ಕೃಪಾ ಯಕ್ಷಗಾನದಲ್ಲಿ ದ್ವಿತೀಯ ಸ್ಥಾನವನ್ನು, ಅಮೂಲ್ಯ ನೃತ್ಯದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ಎಂಟನೇ ತರಗತಿಯ ವಿದ್ಯಾರ್ಥಿಗಳಲ್ಲಿ ಪನ್ನಗ ಆರೂರು ಕೊಳಲು ವಾದನದಲ್ಲಿ ಪ್ರಥಮ ಸ್ಥಾನವನ್ನು, ರಶ್ಮಿತಾ ಏಕ ಪಾತ್ರಭಿನಯದಲ್ಲಿ ದ್ವಿತೀಯ ಸ್ಥಾನವನ್ನು, ನಿಧಿ ಶೆಟ್ಟಿ ನೃತ್ಯದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ವಿಜೇತರಾದ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿಯವರು ಹಾಗೂ ಮುಖ್ಯ ಅತಿಥಿಗಳು ಅಭಿನಂದಸಿದರು. ಗ್ರೇಸಿ ಅವರು ಧನ್ಯವಾದ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.
















