ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಮೊಗವೀರ ಯುವ ಸಂಘಟನೆ ರಿ., ಉಡುಪಿ ಜಿಲ್ಲೆ ಇದರ ಹಾಲಾಡಿ-ಶಂಕರನಾರಾಯಣ ಘಟಕದ ನೂತನ ಅಧ್ಯಕ್ಷರಾಗಿ ಶರತ್ ಸೌಡ, ನೂತನ ಕಾರ್ಯದರ್ಶಿಯಾಗಿ ರಂಜಿತ್ ಬೈಲೂರು ರವಿವಾರ ಪದಗ್ರಹಣ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್, ಯುವ ಸಂಘಟನೆ ಜಿಲ್ಲಾಧ್ಯಕ್ಷ ರವೀಶ ಕೊರವಡಿ ಮೊದಲಾದವರ ಸಮಕ್ಷಮದಲ್ಲಿ ಪದಪ್ರದಾನ ನೆರವೇರಿಸಲಾಯಿತು.











