Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನ ಜ್ಞಾನದ ಬೆಳಕಿನಿಂದ ಮಾತ್ರ ಸಾಧ್ಯ: ಡಾ. ರಘು ನಾಯ್ಕ್
    ಊರ್ಮನೆ ಸಮಾಚಾರ

    ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನ ಜ್ಞಾನದ ಬೆಳಕಿನಿಂದ ಮಾತ್ರ ಸಾಧ್ಯ: ಡಾ. ರಘು ನಾಯ್ಕ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಂದಿನ ಪದವಿ ಶಿಕ್ಷಣದಲ್ಲಿ ಕೌಶಲ್ಯ ಸಂಪಾದನೆ  ಮತ್ತು ವ್ಯಕ್ತಿತ್ವ ವಿಕಸನಕ್ಕೆ ಮಹತ್ವ ಕೊಡಲಾಗುತ್ತಿದ್ದು ಸಕಾರಾತ್ಮಕ ಚಿಂತನೆಯೊಂದಿಗೆ ಶಿಸ್ತುಬದ್ಧ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಭವಿಷ್ಯದ ಸತ್ಪ್ರಜೆಗಳಾಗುತ್ತಾರೆ. ದೀಪದ ಬೆಳಕು ಮನೆಯನ್ನು ಬೆಳೆಗಿದರೆ, ಜ್ಞಾನದ ಬೆಳಕು ಮನವನ್ನು ಬೆಳಗುತ್ತದೆ. ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನ ಜ್ಞಾನದ  ಬೆಳಕಿನಿಂದ ಮಾತ್ರ ಸಾಧ್ಯವಾಗುತ್ತದೆ ಎಂದು ಉಡುಪಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ರಘು ನಾಯ್ಕ್ ನುಡಿದರು.

    Click Here

    Call us

    Click Here

    ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು  ಕೋಟೇಶ್ವರ ಇಲ್ಲಿ ಐಕ್ಯೂಎಸಿ ಸಹಯೋಗದೊಂದಿಗೆ ಹಮ್ಮಿಕೊಂಡ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ  ಎಸ್ಇಪಿ  ಶಿಕ್ಷಣ ಪದ್ಧತಿ ಕುರಿತು ಮಾತನಾಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ನಾಗರಾಜ ವೈದ್ಯ ಎಂ. ಶಿಸ್ತು ಮತ್ತು ಸಮಯಪಾಲನೆಯೊಂದಿಗೆ ಶಿಕ್ಷಣ ಪಡೆದು,  ಕಾಲೇಜಿನ ನಿಯಮಗಳನ್ನು ಪಾಲಿಸಿ ಇಲ್ಲಿನ ಮೂಲಭೂತ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕಿವಿಮಾತು ಹೇಳಿದರು.

    ಸಿಂಚನಾ ಮತ್ತು ತಂಡದವರು ಪ್ರಾರ್ಥಿಸಿದರು.  ಇತ್ತೀಚಿಗೆ ವಿವಿಧ ಸರಕಾರಿ ಕಾಲೇಜುಗಳಿಂದ ವರ್ಗಾವಣೆಗೊಂಡು ಈ ಕಾಲೇಜಿನ ಕರ್ತವ್ಯಕ್ಕೆ ಹಾಜರಾದ ಒಂಭತ್ತು ಮಂದಿ ಪ್ರಾಧ್ಯಾಪಕರನ್ನು ಬರಮಾಡಿಕೊಳ್ಳಲಾಯಿತು. ವಿದ್ಯಾರ್ಥಿ  ಕ್ಷೇಮಪಾಲನಾಧಿಕಾರಿ  ಡಾ. ಸುಬ್ರಹ್ಮಣ್ಯ ಎ  ಪ್ರಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ವಿದ್ಯಾ ಭಟ್ ಕಾರ್ಯಕ್ರಮ ನಿರೂಪಿಸಿದರು. ಐಕ್ಯೂಎಸಿ ಸಂಚಾಲಕರಾದ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಮೋಹಿನಿ ಅತ್ತಿಮನಿ ವಂದಿಸಿದರು. ಬೋಧಕ ಹಾಗೂ  ಬೋಧಕೇತರ ಸಿಬ್ಬಂದಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಗುರುಪೂರ್ಣಿಮೆಯ ಸಂಭ್ರಮಾಚರಣೆ

    30/07/2026

    ಕುಂದಾಪುರ: ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

    30/07/2026

    ಯೋಗಾಸನ ಸ್ಪರ್ಧೆ: ವಿದ್ಯಾರಣ್ಯ ಶಾಲೆಯ ಲಾಸ್ಯ ಮಧ್ಯಸ್ಥ ಜಿಲ್ಲಾ ಮಟ್ಟಕ್ಕೆ ಆಯ್ಕೆ 

    30/07/2026
    Leave A Reply Cancel Reply

    2 × five =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಗುರುಪೂರ್ಣಿಮೆಯ ಸಂಭ್ರಮಾಚರಣೆ
    • ಡಾ. ಶಾಂತಾರಾಮ ಸಾಹಿತ್ಯ ಪ್ರಶಸ್ತಿಗೆ ಶ್ರೀಧರ ಬಳಗಾರರ ʼಮಾರ ಮಿಂದನುʼಕಥಾ ಸಂಕಲನ ಆಯ್ಕೆ
    • ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನ ಜ್ಞಾನದ ಬೆಳಕಿನಿಂದ ಮಾತ್ರ ಸಾಧ್ಯ: ಡಾ. ರಘು ನಾಯ್ಕ್
    • ಕುಂದಾಪುರ: ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ
    • ಯೋಗಾಸನ ಸ್ಪರ್ಧೆ: ವಿದ್ಯಾರಣ್ಯ ಶಾಲೆಯ ಲಾಸ್ಯ ಮಧ್ಯಸ್ಥ ಜಿಲ್ಲಾ ಮಟ್ಟಕ್ಕೆ ಆಯ್ಕೆ 

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.