ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಪ್ರತಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ರೂ. 100 ಚಾಪಾ ಕಾಗದದೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದಾಗಿದೆ.
ಸದ್ರಿ ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಫ್ರೂಟ್ಸ್ ಐ.ಡಿಯನ್ನು ಹೊಂದಿರಬೇಕು. ರೈತರು ಈಗಾಗಲೇ ಫ್ರೂಟ್ಸ್ ಐ.ಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದರದೇ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿ ಗಳನ್ನು ಫ್ರೂಟ್ಸ್ ಐ.ಡಿಗೆ ಜೋಡಣೆ ಮಾಡಿಕೊಳ್ಳುವಂತೆ ಕುಂದಾಪುರ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.











