Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟೇಶ್ವರ ಮೊಗವೀರ ಯುವ ಸಂಘಟನೆಯ 21ನೇ ವಾರ್ಷಿಕ ಮಹಾಸಭೆ, ವನಮೋತ್ಸವ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಕೋಟೇಶ್ವರ ಮೊಗವೀರ ಯುವ ಸಂಘಟನೆಯ 21ನೇ ವಾರ್ಷಿಕ ಮಹಾಸಭೆ, ವನಮೋತ್ಸವ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಕೋಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆ ಇದರ 21ನೇ ವಾರ್ಷಿಕ ಮಹಾಸಭೆ ಹಾಗೂ ವನಮೋತ್ಸವ ಕಾರ್ಯಕ್ರಮವು ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ನಡೆಯಿತು.

    Click Here

    Call us

    Click Here

    ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ಅಧ್ಯಕ್ಷರಾದ ರವೀಶ್ ಎಸ್. ಕೊರವಡಿ ಸಮಾರಂಭವನ್ನು ಉದ್ಘಾಟಿಸಿ, ಮೊಗವೀರ ಯುವ ಸಂಘಟನೆಯ ಕೋಟೇಶ್ವರ ಘಟಕವು ಜಿಲ್ಲೆಯಲ್ಲೇ ಬಲಿಷ್ಠವಾದ ಘಟಕವಾಗಿದ್ದು, ಪ್ರತೀ ವರ್ಷವೂ ಅಗಸ್ಟ್‌ ತಿಂಗಳ ಮೊದಲ ವಾರದಲ್ಲಿ ತನ್ನ ವಾರ್ಷಿಕ ಮಹಾಸಭೆಯನ್ನು ನಡೆಸಿ ಎಲ್ಲರಿಗೂ ಮಾದರಿಯಾಗುವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಪ್ರಶಂಸೆಯ ಮಾತನ್ನಾಡಿದರು.

    ಕೋಟೇಶ್ವರ ಘಟಕದ ನಿಕಟಪೂರ್ವ ಅಧ್ಯಕ್ಷರಾದ ನಾಗರಾಜ್ ಬೀಜಾಡಿ ಎಲ್ಲರನ್ನೂ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಮೊಗವೀರ ಯುವ ಸಂಘಟನೆಯ ಕೋಟೇಶ್ವರ ಘಟಕದ ಕಾರ್ಯದರ್ಶಿ ನಾಗರಾಜ್ ತೆಕ್ಕಟ್ಟೆ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ರಾಜೇಶ್ ಕಾಂಚನ್ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ವರದಿ ಮತ್ತು ಲೆಕ್ಕಪತ್ರಗಳಿಗೆ ಸರ್ವ ಸದಸ್ಯರ ಅನುಮೋದನೆ ಪಡೆಯಲಾಯಿತು.

    ಘಕಟ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ತನ್ನ ಮೊದಲ ಪ್ರಯತ್ನದಲ್ಲೇ C-A ಪರಿಕ್ಷೆಯಲ್ಲಿ ತೇರ್ಗಡೆ ಹೊಂದಿದ ಅನುಷ್ಕ ಎ. ಕುಂದರ್ ಅವರನ್ಮು ಸನ್ಮಾನಿಸಿ ಗೌರವಿಸಲಾಯಿತು. ಘಟಕ ವ್ಯಾಪ್ತಿಯ ಗುರಿಕಾರರಿಗೆ ಗೌರವ ಧನ ನೀಡಿ ಗೌರವಿಸಲಾಯಿತು.  ಕಾರ್ಯಕ್ರಮದ ಪೂರ್ವಭಾವಿಯಾಗಿ ಸ್ಥಳೀಯ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಮತ್ತು ಸಂಘಟನೆಯ ಸದಸ್ಯರಿಗೆ ಹಮ್ಮಿಕೊಂಡ ರಂಗೋಲಿ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಹಾಗೂ ಭಾಗವಹಿಸಿದ ಪ್ರತಿಯೊಬ್ಬ ವಿಧ್ಯಾರ್ಥಿಗಳಿಗೆ ಶಾಲಾ ಪರಿಕರಗಳನ್ನು ವಿತರಿಸಲಾಯಿತು. ಜಿಲ್ಲಾ ಸಂಘಟನೆಯ ಮಾಜಿ ಅಧ್ಯಕ್ಷರುಗಳು ಹಾಗೂ ವಿವಿಧ ಘಟಕಗಳಿಂದ ಆಗಮಿಸಿದ ಗಣ್ಯರನ್ನು ಸಭೆಯಲ್ಲಿ ಗುರುತಿಸಲಾಯಿತು.

     ಸಭಾ ಕಾರ್ಯಕ್ರಮದ ತರುವಾಯ “ಮೊಗಸಿರಿ- 2026” ಸಾಂಸ್ಕೃತಿಕ ಕಾರ್ಯಕ್ರಮ ಜರುಗಿ, ಪ್ರೇಕ್ಷಕರನ್ನು ರಂಜಿಸಿತು. ಸಭೆಗೆ ಆಗಮಿಸಿದ ಪ್ರತಿಯೊಬ್ಬರಿಗೂ,  ವನಮೋತ್ಸವದ ಪ್ರಯುಕ್ತ ಗಿಡಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ ರಿ. ಬಗ್ವಾಡಿ ಹೋಬಳಿ-ಕುಂದಾಪುರ ಶಾಖಾಧ್ಯಕ್ಷ ಉದಯ್ ಕುಮಾರ್ ಹಟ್ಟಿಯಂಗಡಿ, ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ನಿಕಟಪೂರ್ವ ಅಧ್ಯಕ್ಷರಾದ ಜಯಂತ್ ಅಮೀನ್ ಕೋಡಿ,  ಉಪಾಧ್ಯಕ್ಷರು ಹಾಗೂ ಕೋಟೇಶ್ವರ ಘಟಕದ ಉಸ್ತುವಾರಿಗಳಾದ ಅಶೋಕ್ ತೆಕ್ಕಟ್ಟೆ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಶೇಖರ್ ತೋಳಾರ್, ಕೋಟೇಶ್ವರ ಘಟಕದ ಗೌರವಾಧ್ಯಕ್ಷರು ಆನಂದ್ ಕುಂದರ್ ಅಜ್ಜರಬೆಟ್ಟು, ಮಹಿಳಾ ಸಂಘಟನೆಯ ಅಧ್ಯಕ್ಷೆ ಗಾಯತ್ರಿ  ವಿಕ್ರಮ್, ಕಾರ್ಯದರ್ಶಿ ರಾಜೇಶ್ವರಿ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೆಕ್ಕಟ್ಟೆ ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ – 40 ಲಕ್ಷ ರೂ.ಗೂ ಅಧಿಕ ನಷ್ಟ

    04/08/2026

    ಕೋಟ: ಕ್ರೆಡಿಟ್ ಕಾರ್ಡ್‌ ಅಪ್‌ಡೇಟ್‌ ಹೆಸರಿನಲ್ಲಿ ಮಹಿಳೆಗೆ 1.99 ಲಕ್ಷ ರೂ. ವಂಚನೆ

    04/08/2026

    ಮಣೂರು ದೇಗುಲದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

    04/08/2026
    Leave A Reply Cancel Reply

    4 × two =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಕಟ್ಟೆ ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ – 40 ಲಕ್ಷ ರೂ.ಗೂ ಅಧಿಕ ನಷ್ಟ
    • ಕೋಟ: ಕ್ರೆಡಿಟ್ ಕಾರ್ಡ್‌ ಅಪ್‌ಡೇಟ್‌ ಹೆಸರಿನಲ್ಲಿ ಮಹಿಳೆಗೆ 1.99 ಲಕ್ಷ ರೂ. ವಂಚನೆ
    • ಕೋಟೇಶ್ವರ ಮೊಗವೀರ ಯುವ ಸಂಘಟನೆಯ 21ನೇ ವಾರ್ಷಿಕ ಮಹಾಸಭೆ, ವನಮೋತ್ಸವ ಕಾರ್ಯಕ್ರಮ
    • ಮಣೂರು ದೇಗುಲದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
    • ಗುಜ್ಜಾಡಿ: ಬೈಕ್‌ಗಳ ನಡುವೆ ಡಿಕ್ಕಿ  – ಸವಾರರರಿಗೆ ಗಾಯ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.