ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕ್ರೀಡೆ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ರೋಟರಿ ಸೇರಿದಂತೆ ವಿವಿಧ ಸಾಮಾಜಿಕ ಸಂಘ- ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರಕಾಶ್ ಶೆಟ್ಟಿ ಶೇರ್ಡಿ ಗೈನಾಡಿಮನೆ ಅವರು ಪ್ರತಿಷ್ಠಿತ ಕುಂದಾಪುರ ತಾಲೂಕು ಯುವ ಬಂಟರ ಸಂಘಕ್ಕೆ 2026- 28ನೇ ಸಾಲಿನ ನೂತನ ಗೌರವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ .
ಮೂಲತಃ ಕುಂದಾಪುರದವರಾದ ಪ್ರಕಾಶ್ ಶೆಟ್ಟಿ ಅವರು ದಾಂಡೇಲಿಯಲ್ಲಿ ಶ್ರೀ ದುರ್ಗಾ ಕನ್ಸ್ಟ್ರಕ್ಷನ್ ಇದರ ಆಡಳಿತ ನಿರ್ದೇಶಕರಾಗಿ ಹಾಗೂ ಶ್ರೀ ದುರ್ಗಾ ಹಾರ್ಡ್ ವೇರ್ ಮತ್ತು ಪೇಂಟ್ಸ್ ಇದರ ಆಡಳಿತ ಪಾಲುದಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸಾಮಾಜಿಕವಾಗಿ ಬಹುಮುಖಿ ನೆಲೆಯಲ್ಲಿ ತೊಡಗಿಕೊಂಡ ದಾಂಡೇಲಿಯ ಕಲಾಶ್ರೀ ಸಂಸ್ಥೆ ಮತ್ತು ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರಾಗಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಶಂಕನಾರಾಯಣ ಇಲ್ಲಿನ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಮಂಗಳೂರಿನ ಪಟ್ಲ ಪೌಂಡೇಶನ್ ಟ್ರಸ್ಟಿಯಾಗಿ, ದಾಂಡೇಲಿಯ ರೋಟರಿ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷರಾಗಿ, ದಾಂಡೇಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾಗಿ, ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನ ಶೇರ್ಡಿ ಕಕ್ಕುಂಜೆ ಇದರ ಅಧ್ಯಕ್ಷರಾಗಿ, ಶ್ರೀ ಕಂಬಿಕಾಲು ಮಹಾಗಣಪತಿ ದೇವಸ್ಥಾನ ಕಕ್ಕುಂಜೆ ಇಲ್ಲಿನ ಉಪಾಧ್ಯಕ್ಷರಾಗಿ, ಸೈಂಟ್ ಮಿಚೆಲೆ ಕಾನ್ವೆಂಟ್ ಸ್ಕೂಲ್ ದಾಂಡೇಲಿ ಇಲ್ಲಿನ ರಕ್ಷಕ- ಶಿಕ್ಷಕ ಸಂಘದ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ರೋಟರಿಯಲ್ಲಿ ಪ್ರಕಾಶ್ ಶೆಟ್ಟಿ ಅವರದ್ದು ಮಹತ್ವದ ಸಾಧನೆ. 2018 – 19ನೇ ಸಾಲಿನ ರೋಟರಿ ಅಧ್ಯಕ್ಷರಾಗಿ ಬೆಸ್ಟ್ ಪ್ರೆಸಿಡೆಂಟ್ ಅವಾರ್ಡ್ ಪಡೆದಿರುತ್ತಾರೆ. 2022-23ನೇ ಸಾಲಿನಲ್ಲಿ ಜಿಲ್ಲೆ 3170 ಅಸಿಸ್ಟೆಂಟ್ ಗವರ್ನರ್ ಆಗಿ ಬೆಸ್ಟ್ ಅಸಿಸ್ಟೆಂಟ್ ಗವರ್ನರ್ ಅವಾರ್ಡ್ ಸಹ ಪಡೆದಿರುತ್ತಾರೆ.
ಅವರು ಕುಂದಾಪುರದ ಶೇಖರ್ ಶೆಟ್ಟಿ ಮತ್ತು ಜಲಜಮ್ಮ ಶೆಟ್ಟಿ ದಂಪತಿಗಳ ಪುತ್ರರಾಗಿ ಜನಿಸಿದರು. ಬಿ.ಕಾಂ ಪದವಿ ಶಿಕ್ಷಣ ಪಡೆದು ದೂರದ ದಾಂಡೇಲಿಗೆ ತೆರಳಿ ಉದ್ಯಮ ಕ್ಷೇತ್ರವೂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಚಾಪನ್ನು ಮೂಡಿಸಿದ್ದಾರೆ.
ಇವರ ಜೊತೆಗೆ ಸಂಘದ ಅಧ್ಯಕ್ಷರಾಗಿ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾರ್ಯದರ್ಶಿಯಾಗಿ ಪ್ರವೀಣ್ ಕುಮಾರ್ ಶೆಟ್ಟಿ ಹರ್ಕೂರು ಹಾಗೂ ಕೋಶಾಧಿಕಾರಿಯಾಗಿ ಅರುಣ್ ಕುಮಾರ್ ಶೆಟ್ಟಿ ಕುಂದಾಪುರ ಆಯ್ಕೆಯಾಗಿದ್ದಾರೆಂದು ಸಂಘದ ಅಧ್ಯಕ್ಷ ನಿತೇಶ್ ಶೆಟ್ಟಿ ಬಸ್ರೂರು ತಿಳಿಸಿದ್ದಾರೆ.
















