Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರೊ. ಕು.ಶಿ. ಹರಿದಾಸ ಭಟ್ ಪ್ರಶಸ್ತಿಗೆ ಕನರಾಡಿ ವಾದಿರಾಜ ಭಟ್ ಆಯ್ಕೆ
    ಊರ್ಮನೆ ಸಮಾಚಾರ

    ಪ್ರೊ. ಕು.ಶಿ. ಹರಿದಾಸ ಭಟ್ ಪ್ರಶಸ್ತಿಗೆ ಕನರಾಡಿ ವಾದಿರಾಜ ಭಟ್ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಿಕ್ಷಣ, ಆಡಳಿತ, ಸಂಘಟನೆ, ಜಾನಪದ ಹೀಗೆ ಹಲವು ಕ್ಷೇತ್ರಗಳಲ್ಲಿ ಅನುಪಮ ಸಾಧನೆ, ಸಿದ್ಧಿಗಳಿಂದ ಖ್ಯಾತರಾಗಿದ್ದ ಪ್ರೊ. ಕು.ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ-2026ಕ್ಕೆ ಜಾನಪದದ ಪ್ರಸಿದ್ಧ ವಿದ್ವಾಂಸ, ಸಂಶೋಧಕ ಹಾಗೂ ಲೇಖಕರಾದ ಡಾ. ಕನರಾಡಿ ವಾದಿರಾಜ ಭಟ್ ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ಡಾ. ಕನರಾಡಿ ಭಟ್ ಅವರು ಕರಾವಳಿಯ ಕನ್ನಡ ಮತ್ತು ತುಳು ಸಾಹಿತ್ಯದ ಹಿರಿಯ ಚಿಂತಕರಾಗಿದ್ದಾರೆ. 1951ರ ಜು.2ರಂದು ಉಡುಪಿ ಜಿಲ್ಲೆಯ ಮಣಿಪುರ ಗ್ರಾಮದ ಕನರಾಡಿಯಲ್ಲಿ ಲಕ್ಷ್ಮೀನಾರಾಯಣ ಭಟ್ ಮತ್ತು ಕಮಲಮ್ಮ ದಂಪತಿ ಪುತ್ರರಾಗಿ ಜನಿಸಿದ ಅವರು ಬಾಲ್ಯದಿಂದಲೇ ಸಾಹಿತ್ಯ, ಸಂಸ್ಕೃತಿ ಹಾಗೂ ಜಾನಪದ ಅಧ್ಯಯನದತ್ತ ಅಪಾರ ಆಸಕ್ತಿ ಬೆಳೆಸಿಕೊಂಡಿದ್ದರು.

    ಶಿಕ್ಷಣದೊಂದಿಗೇ ಅಧ್ಯಾಪನ ಮತ್ತು ಸಂಶೋಧನಾ ಕ್ಷೇತ್ರದಲ್ಲಿಯೂ ತಮ್ಮದೇ ಛಾಪು ಮೂಡಿಸಿದ್ದು, ಕರಾವಳಿಯ ಸಾಂಸ್ಕೃತಿಕ ಪರಂಪರೆಯ ಅಧ್ಯಯನ ಮತ್ತು ದಾಖಲಾತಿಗೆ ಮಹತ್ವದ ಕೊಡುಗೆ ನೀಡಿದ್ದಾರೆ.

    ಪಾಡ್ದನಗಳು, ಜೋಕ್ಲೆ ಪದೋಕ್ಲು, ತುಳು ಜನಪದ ಕತೆಗಳು, ಮೂಕಜ್ಜಿ, ಮಗೆ ಬರೆವು ಕಲ್ತೆ, ಮೂಕಾಂಬಿಕಾ ಕ್ಷೇತ್ರ ಕೊಲ್ಲೂರು ಮುಂತಾದುವು ಅವರ ಖ್ಯಾತ ಪ್ರಕಟಣೆಗಳಾಗಿವೆ. ಯಕ್ಷದಿಪಿಕ, ಹಸನ್ಮುಖಿ, ಅಜ್ಜಿ ಸಾಕಿದ ಮಗ, ಬನದ ಸಿರಿ, ಕರ್ನಾಟಕ ದರ್ಶನ, ಅಮೃತ ಪುರುಷ ಮುಂತಾದವು ಅವರ ಸಂಪಾದಿತ ಕೃತಿಗಳು. 150ಕ್ಕೂ ಹೆಚ್ಚು ಲೇಖನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

    ಆಕಾಶವಾಣಿಯಲ್ಲಿ ನಾಟಕ, ವಿಚಾರಗೋಷ್ಠಿ, ದೂರದರ್ಶನದಲ್ಲಿ ಜನಪದ ಕಾರ್ಯಕ್ರಮ, ಪ್ರವಚನ ನೀಡಿದ್ದಾರೆ. ಇವರ ‘ಬಸ್ರೂರು ಅಧ್ಯಯನ’ ಗ್ರಂಥವು ಮಂಗಳೂರು ವಿ.ವಿ. ಪ್ರಾದೇಶಿಕ ಅಧ್ಯಯನ ವಿಷಯಕ್ಕೆ ಪಠ್ಯವಾಗಿದೆ. ಕನ್ನಡ ಜನಪದ ನಿಘಂಟುವಿಗೆ ಉಡುಪಿ ಜಿಲ್ಲೆಯ ಜಾನಪದ ತಜ್ಞರಾಗಿಯೂ ಆಯ್ಕೆಯಾಗಿದ್ದಾರೆ.

    Click here

    Click here

    Click here

    Call us

    Call us

    ಪ್ರಶಸ್ತಿಯು 20 ಸಾವಿರ ರೂ. ನಗದು ಹಾಗೂ ಫಲಕ ಒಳಗೊಂಡಿದೆ. ಪ್ರದಾನ ಕಾರ್ಯಕ್ರಮ ಸದ್ಯದಲ್ಲೇ ನಿಗದಿಯಾಗಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಕೊಲೆ ಪ್ರಕರಣದ ಆರೋಪಿಗೆ ನ್ಯಾಯಾಂಗ ಬಂಧನ

    06/08/2026

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ‘ನಶಾ ಮುಕ್ತ ಯುವ ವಿಕಸಿತ ಭಾರತಕ್ಕಾಗಿ’ ಕಾರ್ಯಕ್ರಮ

    06/08/2026

    ತೆಕ್ಕಟ್ಟೆ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸ್ಥಳಕ್ಕೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿ

    06/08/2026
    Leave A Reply Cancel Reply

    17 − two =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಕೊಲೆ ಪ್ರಕರಣದ ಆರೋಪಿಗೆ ನ್ಯಾಯಾಂಗ ಬಂಧನ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ‘ನಶಾ ಮುಕ್ತ ಯುವ ವಿಕಸಿತ ಭಾರತಕ್ಕಾಗಿ’ ಕಾರ್ಯಕ್ರಮ
    • ಪ್ರೊ. ಕು.ಶಿ. ಹರಿದಾಸ ಭಟ್ ಪ್ರಶಸ್ತಿಗೆ ಕನರಾಡಿ ವಾದಿರಾಜ ಭಟ್ ಆಯ್ಕೆ
    • ತೆಕ್ಕಟ್ಟೆ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸ್ಥಳಕ್ಕೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿ
    • ರಾಮಕ್ಷತ್ರಿಯರ ವೃತ್ತಿಪರರ ಸಮಾವೇಶದ ಪೂರ್ವಭಾವಿ ಸಭೆ ಸಂಪನ್ನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.