ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕಗಳು ಮತ್ತು ಮಾದಕ ವಿರೋಧಿ ಜಾಗೃತಿ ಕೋಶ ಇವುಗಳ ಆಶ್ರಯದಲ್ಲಿ ಕುಂದಾಪುರ ಅಬಕಾರಿ ಉಪ ವಿಭಾಗದ ಕಚೇರಿಯ ಸಹಯೋಗದೊಂದಿಗೆ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ “ಮಾದಕ ದ್ರವ್ಯಗಳು ಮತ್ತು ಮನೋವಿಕಾರಕ ಪದಾರ್ಥಗಳು ಮತ್ತು ಸಂಬAಧಿತ ಕಾಯ್ದೆ” ವಿಷಯದ ಕುರಿತು ಉಪನ್ಯಾಸ ನಡೆಯಿತು.
ಸಂಪನ್ಮೂಲ ವ್ಯಕ್ತಿ ಕುಂದಾಪುರದ ಉಪ ಅಬಕಾರಿ ಅಧೀಕ್ಷಕ ಶ್ರೀ ಪ್ರಭುಗೌಡ ಎಂ. ಪಾಟೀಲ್ ಅವರು ಮಾತನಾಡಿ, ವಿವಿಧ ರೀತಿಯ ಮಾದಕ ದ್ರವ್ಯಗಳು, ಅವುಗಳ ಸೇವನೆಯ ಲಕ್ಷಣಗಳು, ದೇಹದಲ್ಲಿ ಅವುಗಳ ಉಳಿಯುವ ಅವಧಿ, ದುಷ್ಪರಿಣಾಮಗಳು ಹಾಗೂ ಈ ರೀತಿಯ ವ್ಯಸನಗಳಿಂದ ದೂರವಿರುವ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲಾರದ ಡಾ. ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ, ಪೂಜಾ ಕುಂದರ್ ಮತ್ತು ಮಾದಕ ವಿರೋಧಿ ಜಾಗೃತಿ ಕೋಶದ ಸಂಯೋಜಕರಾದ ಸತೀಶ್ ಶೆಟ್ಟಿ ಮತ್ತು ವಿಲ್ಮಾ ಶೆರಲ್ ಕಾರ್ನೆಲಿಯೊ ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳಿಂದ ದೂರವಿರುವ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಎನ್.ಎಸ್.ಎಸ್. ಸ್ವಯಂ ಸೇವಕರಾದ ಮಾನ್ಯ ಪ್ರಾರ್ಥಿಸಿ, ಅನುಶ್ರೀ ಸ್ವಾಗತಿಸಿ, ಪ್ರತೀಕ್ಷಾ ವಂದಿಸಿ, ರೋನಿತ್ ಕುಮಾರ್ ಶೆಟ್ಟಿ ನಿರೂಪಿಸಿದರು.
















