Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಕ್ವಾಡಿ: ಆಸರೆ ಟ್ರಸ್ಟ್ ಮೂಲದ ವಿದ್ಯಾರ್ಥಿವೇತನ, ಸಮವಸ್ತ್ರ ವಿತರಣೆ
    ಊರ್ಮನೆ ಸಮಾಚಾರ

    ವಕ್ವಾಡಿ: ಆಸರೆ ಟ್ರಸ್ಟ್ ಮೂಲದ ವಿದ್ಯಾರ್ಥಿವೇತನ, ಸಮವಸ್ತ್ರ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಯಾವುದೇ ಅಬ್ಬರದ ಪ್ರಚಾರವಿಲ್ಲದೇ ಜನಮೆಚ್ಚುವ ಕೆಲಸ ಮಾಡುತ್ತಿರುವ ಆಸರೆ ಸಂಸ್ಥೆಯ ಕಾರ್ಯ ಇತರರಿಗೆ ಮಾದರಿ. ಗ್ರಾಮೀಣ ಪ್ರದೇಶದಲ್ಲಿರುವ ಸಂಘ-ಸಂಸ್ಥೆಗಳು ಆರ್ಥಿಕ ದುರ್ಬಲರ ಪಾಲಿಗೆ ಸಂಜೀವಿನಿಯಾಗಿದೆ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಲಿ ಹೇಳಿದರು.

    Click Here

    Call us

    Click Here

    ಅವರು ಆಸರೆ ಟ್ರಸ್ಟ್ ವಕ್ವಾಡಿ ವತಿಯಿಂದ ಭಾನುವಾರ ವಕ್ಕಾಡಿಯ ಶ್ರೀ ಹಳೆಯಮ್ಮ ದೇವಿ ಸಭಾಭವನದಲ್ಲಿ ಆಯೋಜಿಸಲಾದ ವಿದ್ಯಾರ್ಥಿವೇತನ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ದುಬ್ಬಾ ಪಾರ್ಚೂನ್ ಗ್ರೂಫ್ ಆಫ್ ಹೊಟೇಲ್‌ನ ಆಡಳಿತ ನಿರ್ದೇಶಕ ಪ್ರವೀಣ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿವೇತನವನ್ನು ವಿತರಿಸಿ, ಟ್ರಸ್ಟ್‌ನ ಕಾರ್ಯವೈಖರಿಯನ್ನು ಪ್ರಶಂಸಿದರಲ್ಲದೇ ಊರಿನ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ನೆರವನ್ನು ನೀಡಲು ಸದಾ ಬದ್ಧನಾಗಿದ್ದೇನೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಸರೆ ಟ್ರಸ್ಟ್ ವಕ್ವಾಡಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಸಣಗಲ್ಲು ಮನೆ ವಹಿಸಿದ್ದರು. ಕಟೀಲು ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ ದಿಕ್ಕೂಚಿ ಭಾಷಣ ಮಾಡಿದರು. ಹೊನ್ನಾವರದ ಶ್ರೀ ದೇವಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಚಂದ್ರಶೇಖರ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು.

    ವಕ್ವಾಡಿ ಶ್ರೀ ಹಳೆಯಮ್ಮ ದೇವಿ ಸಪರಿವಾರ ದೈವಸ್ಥಾನದ ಆಡಳಿತ ಮೊಕ್ತಸರ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಕೋಟೇಶ್ವರ ರೋಟರಿ ಕ್ಲಬ್ ನೂತನ ಕಾರ್ಯದರ್ಶಿ ಅರುಣ್ ದೇವಾಡಿಗ, ತೆಕ್ಕಟ್ಟೆ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ನಿವೃತ್ತ ಶಿಕ್ಷಕರಾದ ಅಶೋಕ ಶೆಟ್ಟಿ ಹಾಗೂ ಚಂದ್ರಶೇಖರ ಶೆಟ್ಟಿ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ನಂದಿನಿ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಸ್ಥಳೀಯ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ, ಆಶಕ್ತರಿಗೆ ಆರ್ಥಿಕ ನೆರವು, ಸ್ಥಳೀಯ ಅಂಗನವಾಡಿ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು.

    ಕೀರ್ತಿ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಸತೀಶ ಪೂಜಾರಿ ನಿರೂಪಿಸಿದರು. ಆನಂದ ಆಚಾ‌ರ್ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಕ್ರೋಷೆ ತರಬೇತಿ

    10/08/2026

    ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

    10/08/2026

    ಸಂಜೀವಿನಿ ಸಂಘಗಳಲ್ಲಿನ ಹಣ ದುರುಪಯೋಗ ತನಿಖೆಗೆ ಎಸ್‌ಐಟಿ ರಚನೆಯಾಗಲಿ: ಕೆ. ವಿಕಾಸ್ ಹೆಗ್ಡೆ

    10/08/2026
    Leave A Reply Cancel Reply

    10 − 9 =

    Call us

    Click Here

    Call us

    Call us

    Call us
    Highest Viewed Recently
    • ರಾಜ್ಯ ಸರ್ಕಾರದ ‘ವಿಷನ್ ಕಮಿಟಿ’ಯ ಅಧ್ಯಕ್ಷರಾಗಿ ಡಾ. ಕೃಷ್ಣಪ್ರಸಾದ್ ಕೂಡ್ಲು ನೇಮಕ
    • ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಕ್ರೋಷೆ ತರಬೇತಿ
    • ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ
    • ವಕ್ವಾಡಿ: ಆಸರೆ ಟ್ರಸ್ಟ್ ಮೂಲದ ವಿದ್ಯಾರ್ಥಿವೇತನ, ಸಮವಸ್ತ್ರ ವಿತರಣೆ
    • ಸಂಜೀವಿನಿ ಸಂಘಗಳಲ್ಲಿನ ಹಣ ದುರುಪಯೋಗ ತನಿಖೆಗೆ ಎಸ್‌ಐಟಿ ರಚನೆಯಾಗಲಿ: ಕೆ. ವಿಕಾಸ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.