Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತಾ.ಪಂ ಸಾಮಾನ್ಯ ಸಭೆ: ಪ್ರಶ್ನೆಯಾಗಿಯೇ ಉಳಿದ ಸಮಸ್ಯೆಗಳು. ಉತ್ತರ ಸಿಕ್ಕರೂ ಪರಿಹಾರವಿಲ್ಲ!
    Recent post

    ತಾ.ಪಂ ಸಾಮಾನ್ಯ ಸಭೆ: ಪ್ರಶ್ನೆಯಾಗಿಯೇ ಉಳಿದ ಸಮಸ್ಯೆಗಳು. ಉತ್ತರ ಸಿಕ್ಕರೂ ಪರಿಹಾರವಿಲ್ಲ!

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಪರವಾನಿಗೆ ದೊರೆತರೂ ಬಸ್ ಓಡಲಿಲ್ಲ, ವಾರಾಹಿ ಗೊಂದಲವೂ ಬಗೆಹರಿಯಲಿಲ್ಲ. ಅಧಿಕಾರಿಗಳನ್ನೂ ಸಾಮಾನ್ಯ ಸಭೆಗೆ ಕರೆಸಲಾಗಿಲ್ಲ. ಗೂಡಂಗಡಿಗಳಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಮಧ್ಯ ಮಾರಾಟ ನಿಲ್ಲಲಿಲ್ಲ. ಹೊಸ್ಕೋಟೆ ಶಾಲೆ ಹೆಸರಿಗೆ ಜಾಗ ಸಿಕ್ಕರೂ ಇನ್ನೂ ಅಳತೆ ಮಾಡಿಲ್ಲ. ಕಸ್ತೂರಿ ರಂಗನ್ ವರದಿಯಿಂದ ಬೇಸತ್ತ ಸದಸ್ಯರು ನೀಡಿದ ರಾಜಿನಾಮೆಯೂ ಅಂಗೀಕಾರವಾಗಿಲ್ಲ!

    Click Here

    Call us

    Click Here

    ಕುಂದಾಪುರ ತಾಲೂಕ್ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೊನೆಯ ಸಾಮಾನ್ಯ ಸಭೆಯಲ್ಲಿ ಸದಸ್ಯರುಗಳು ವಿಷಯ ಪ್ರಸ್ತಾಪಿಸುತ್ತಾ ತಮ್ಮ ವಿಷಾದ ವ್ಯಕ್ತಪಡಿಸಿದ ಪರಿಯಿದು. ತಾಲೂಕು ಪಂಚಾಯತ್ ನಲ್ಲಿ ಐದು ವರ್ಷದ 32 ಸಾಮಾನ್ಯ ಸಭೆಗಳಲ್ಲಿ ಬಹುಪಾಲು ಸಮಸ್ಯೆಗಳ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಉತ್ತರ ದೊರೆತಿದೆಯೇ ಹೊರತು ಈವರೆಗೆ ಪರಿಹಾರ ಕಂಡಿಲ್ಲ. ಪ್ರಶ್ನೋತ್ತರ ಕಲಾಪದಿಂದ ಸಾಧಿಸಿದ್ದೇನು ಇಲ್ಲ ಎಂದು ಕೆಲವರು ಅವಲತ್ತುಕೊಳ್ಳುತ್ತಿದ್ದರು.

    ಗ್ರಾಮೀಣ ಭಾಗದಲ್ಲಿ ಸಾರಿಗೆ ವಾಹನ ಸಂಚಾರಕ್ಕೆ ಪರವಾನಿಗೆ ಸಿಕ್ಕಿದ್ದು, ಟೈಮಿಂಗ್ ಸಿಗದೆ ಬಸ್ ಸಂಚಾರ ಇಲ್ಲ. ಕೊನೆ ಸಾಮಾನ್ಯ ಸಭೆಯಲ್ಲಿ ಬಸ್ ಸಂಚಾರಕ್ಕೆ ಒತ್ತು ಕೊಡುವಂತೆ ನಿರ್ಣಯ ಮಾಡಿ ಅದರ ಕಾಫಿ ನಮಗೆ ನೀಡಿ. ಬಸ್ ಸಂಚಾರದ ಬಗ್ಗೆ ಮುಂದೆ ಹೋರಾಟ ಮಾಡಲು ಅನುಕೂಲವಾಗುತ್ತದೆ ಎಂದು ಸದಸ್ಯ ರಾಜು ಪೂಜಾರಿ, ಹೇಮಾವತಿ ಪೂಜಾರಿ ಮತ್ತು ರಾಮ ಕೆ. ಒತ್ತಾಯಿಸಿದರು. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ಗೂಡಂಗಡಿಯಲ್ಲಿ ಮಧ್ಯ ಮಾರಾಟದ ಬಗ್ಗೆ ತಾಪಂ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿದ್ದಕ್ಕೆ ಮದ್ಯಮಾರಾಟ ಕ್ವಾಟರ್ ಬಾಟಲಿ ಬಿಕಿರಿ ಆಗುವುದು ಹೆಚ್ಚಿದ್ದು ಬಿಟ್ಟರೆ ಮತ್ತೇನು ಆಗಿಲ್ಲ. ಬೇರೆ ಬೇರೆ ಕಡೆ ರೈಡ್ ಮಾಡಿ, ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಿದ್ದರೂ ಕುಂದಾಪುರದ ಕೆಲವು ಕಡೆ ಮದ್ಯ ಮಾರಾಟ ನಿರಂತರ ಎಂದು ಸದಸ್ಯರ ಅವತ್ತುಕೊಂಡಿದ್ದು, ಮದ್ಯ ಮಾರಾಟ ವಿರುದ್ಧ ಸಂಘ-ಸಂಸ್ಥೆ ಜೊತೆ ಸೇರಿ ಜನ ಜಾಗೃತಿ ಮೂಡಿಸುವಂತೆ ಸಲಹೆ ಮಾಡಿದರು. ಹೊಸ್ಕೋಟೆ ಶಾಲೆಗೆ ಸ್ಥಳ ಮಂಜೂರಾಗಿದ್ದರೂ, ಅಳತೆ ಆಗಿಲ್ಲ. ಅಳತೆ ಮಾಡಲು ಸರ್ವೆಯರು ಬಂದರೆ ಸ್ಥಳಿಯ ಮಹಿಳೆಯೊಬ್ಬರು ಕತ್ತುಹಿಡಿದು ಆವಾಜ್ ಹಾಕುತ್ತಾರೆ. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಿಗೂ ಮತ್ತು ಶಿಕ್ಷಕರಿಗೂ ಬೆದರಿಕೆ ಹಾಕಲಾಗುತ್ತಿದೆ. ಪೊಲೀಸ್ ರಕ್ಷಣೆ ಪಡೆದು ಸರ್ವೆಕಾರ‍್ಯ ನಡೆಯಬೇಕು ಎಂದು ಸದಸ್ಯೆ ಗೌರಿ ದೇವಾಡಿಗ ಒತ್ತಾಯಿಸಿದರು.

    ಬೈಂದೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಮಸ್ಯೆ ಪರಿಹಾರವಾಗಿದ್ದರೂ ವಿದ್ಯುತ್ ಸಮಸ್ಯೆ ದುತ್ತೆಂದು ತಲೆದೋರಿದೆ. ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ವಿದ್ಯುತ್ ಸಮಸ್ಯೆ ಕಳೆದ ಎರಡು ತಿಂಗಳಿಂದ ಆಗುತ್ತಿದ್ದರೂ, ಪರಿಹಾರ ಸಿಕ್ಕಿಲ್ಲ. ವಿದ್ಯುತ್ ಇಲ್ಲದೆ ವೈದ್ಯರು ಕೆಲಸ ಮಾಡುವುದಾದರೂ ಹೇಗೆ. ತಕ್ಷಣ ಶಾರ್ಟ್ ಸರ್ಕ್ಯೂಟ್ ಸಮಸ್ಯೆ ಪರಿಹರಿಸುವಂತೆ ರಾಜು ಪೂಜಾರಿ ಒತ್ತಾಯಿಸಿದರು. ಕೊನೆ ಸಭೆಯಲ್ಲಾದರೂ ಕಸ್ತೂರಿ ರಂಗನ್ ವರದಿ ಬಗ್ಗೆ ಸಂಸದರ ಮನವಲಿಸುವ ಪ್ರಯತ್ನ ನಡೆದು, ಭಾದಿತ ಜನರಿಗೆ ನ್ಯಾಯ ಒದಗಿಸಬೇಕು ಎಂದು ಸದಸ್ಯ ಹರ್ಕೂರು ಮಂಜಯ್ಯ ಶೆಟ್ಟಿ ಮತ್ತು ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ನವೀಚಂದ್ರ ಶೆಟ್ಟಿ ಒತ್ತಾಯಿಸಿದರು.

    Click here

    Click here

    Click here

    Call us

    Call us

    ಕುಂದಾಪುರ ತಾಪಂ ಅಧ್ಯಕ್ಷ ಭಾಸ್ಕರ ಬಿಲ್ಲವ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ನಾಗೇಶ್, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ ಮತ್ತು ಕಾರ್ಯನಿರ್ವಹಣಾಧಿಕಾರಿ ನಾರಾಯಣ ಸ್ವಾಮಿTaluk Panchayath Kundapua Last Meeting on Jan 4th (1) Taluk Panchayath Kundapua Last Meeting on Jan 4th (2) Taluk Panchayath Kundapua Last Meeting on Jan 4th (3) Taluk Panchayath Kundapua Last Meeting on Jan 4th (4) ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸುಖ – ದುಃಖಗಳ ಸಮನ್ವಯದ ಪ್ರತೀಕ ಯುಗಾದಿ

    13/04/2021

    ಇತಿಹಾಸ ಪ್ರಸಿದ್ಧ ತಗ್ಗರ್ಸೆ ಕಂಬಳ, ಎಷ್ಟೊಂದು ಸುಂದರ

    05/12/2019

    ರಾಜ್ಯದ ನೆರೆ ಸಂತ್ರಸ್ತರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ 50 ಲಕ್ಷ ಪರಿಹಾರ ಘೋಷಣೆ

    01/10/2019
    Leave A Reply Cancel Reply

    eleven − three =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.