Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ 10,00,260 ಗಣತಿ ನಮೂನೆ ಡಿಜಿಟಲೀಕರಣ: ಉಡುಪಿ ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ 10,00,260 ಗಣತಿ ನಮೂನೆ ಡಿಜಿಟಲೀಕರಣ: ಉಡುಪಿ ಜಿಲ್ಲಾಧಿಕಾರಿ

    Updated:11/08/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026 ಕಾರ್ಯವು ಸಮರ್ಪಕವಾಗಿ ನಡೆಯುತ್ತಿದ್ದು ಈವರೆಗೆ ಜಿಲ್ಲೆಯಾದ್ಯಂತ 100% ರಷ್ಟು ಏನ್ಯೂಮರೇಷನ್ ನಮೂನೆಗಳನ್ನು ವಿತರಿಸಲಾಗಿದೆ. ನಿಖರ ಮತ್ತು ದೋಷರಹಿತ ಮತದಾರರ ಪಟ್ಟಿಯನ್ನು ತಯಾರಿಸಲು ಈ ಪ್ರಕ್ರಿಯೆಯು ಅತ್ಯಂತ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ನಿಮಗೆ ತಲುಪಿಸಲಾಗಿರುವ ನಮೂನೆಗಳಲ್ಲಿರುವ ವಿವರಗಳನ್ನು ಪರಿಶೀಲಿಸಿ, ಎಲ್ಲಾ ಮಾಹಿತಿಯನ್ನು ತಪ್ಪಿಲ್ಲದಂತೆ ಭರ್ತಿ ಮಾಡಿ ಭರ್ತಿ ಮಾಡಿದ ನಮೂನೆಗಳನ್ನು ನಿಮ್ಮ ವ್ಯಾಪ್ತಿಯ ಬೂತ್ ಮಟ್ಟದ ಗಳಿಗೆ ಹಿಂತಿರುಗಿಸಬೇಕು.

    Click Here

    Call us

    Click Here

    ನಮೂನೆಗಳನ್ನು ಭರ್ತಿ ಮಾಡುವಲ್ಲಿ ಯಾವುದೇ ತೊಂದರೆ ಅಥವಾ ಗೊಂದಲಗಳಿದ್ದರೆ, ಹತ್ತಿರದ BLO Facilitation Centre (BFC) ಮತ್ತು Voter facilitation Centre (VFC) ಗೆ ಭೇಟಿ ನೀಡಿದಲ್ಲಿ ಅಲ್ಲಿನ ಸಿಬ್ಬಂದಿಗಳು ನಮೂನೆಗಳನ್ನು ಭರ್ತಿ ಮಾಡುವ ಕುರಿತು ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ.

    ಹೆಚ್ಚಿನ ಮಾಹಿತಿ ಅಥವಾ ನಿಮ್ಮ ವ್ಯಾಪ್ತಿಯ BLO ಮತ್ತು BLO Facilitation Centre ಗಳ ವಿವರಗಳನ್ನು ಜಿಲ್ಲಾಡಳಿತದ ಅಧಿಕೃತ ವೆಬ್ ಸೈಟ್ https://udupi.nic.in/en/special-intensive-revision -2026/ ಅನ್ನು ಸಂಪರ್ಕಿಸಬಹುದಾಗಿದೆ.

    ಇಂದಿನವರೆಗೆ ಜಿಲ್ಲೆಯಲ್ಲಿ ನಡೆದಿರುವ ಎಸ್.ಐ.ಆರ್ ಪ್ರಗತಿ ಹೀಗಿದೆ:
    ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುವ  ಪ್ರಕ್ರಿಯೆಯಲ್ಲಿ ಶೇ.100 ಪ್ರಗತಿ ಸಾಧಿಸಿದ್ದು, ಒಟ್ಟು 10,00,260 ಗಣತಿ ನಮೂನೆಯನ್ನು ಡಿಜಿಟಲೀಕರಣಗೊಳಿಸಲಾಗಿರುತ್ತದೆ. 21,215 ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಕಂಡು ಬಂದಿರುತ್ತದೆ. 29,532 ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆಗೊಂಡಿದ್ದು, 8317 ಮತದಾರರು ತಮ್ಮ ದಾಖಲಾತಿ ಮಾಡಿರುತ್ತಾರೆ. ಉಡುಪಿ ಜಿಲ್ಲೆಯಲ್ಲಿ ಶೇ. 100 ರಷ್ಟು ಡಿಜಿಟಲೀಕರಣ ಹಾಗೂ ASDD ಪರಿಶೀಲನೆಯನ್ನು ಒಟ್ಟು 1112 ಮತಗಟ್ಟೆಗಳು ಪೂರ್ಣಗೊಳಿಸಿರುತ್ತಾರೆ.

    ASDD ಪಟ್ಟಿಯನ್ನು ಜಿಲ್ಲೆಯ ಅಧಿಕೃತ ವೆಬ್‌ಸೈಟ್ https://udupi.nic.in/en/special-intensive-revision -2026/ ನಲ್ಲಿ ಪ್ರಕಟಿಸಲಾಗಿದೆ. ಕೂಡಲೇ ಎಲ್ಲರೂ ASDD ಪಟ್ಟಿಯನ್ನು ವೀಕ್ಷಿಸಿ ಏನಾದರೂ ಬದಲಾವಣೆಗಳು ಅಥವಾ ತಿದ್ದುಪಡಿಗಳು ಇದ್ದಲ್ಲಿ ಸಂಬಂಧಪಟ್ಟ ಬೂತ್ ಮಟ್ಟದ ಅಧಿಖಾರಿಗಳಿಗೆ ಹಾಗೂ ಮತದಾರರ ನೋಂದಣಾಧಿಕಾರಿಯವರ ಗಮನಕ್ಕೆ ಆಗಸ್ಟ್ 17 ರ ಪಳಗೆ ತರಬಹುದಾಗಿದೆ.

    Click here

    Click here

    Click here

    Call us

    Call us

    ಎನುಮರೇಷನ್ ನಮೂನೆಗಳನ್ನು ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆಯು ಆಗಸ್ಟ್ 17 ರ ವರೆಗೆ ನಡೆಯಲಿದ್ದು, ಇದುವರೆಗೆ ನಮೂನೆಗಳನ್ನು ಭರ್ತಿ ಮಾಡದ ನಾಗರಿಕರು ಕೂಡಲೇ ಭರ್ತಿ ಮಾಡಿ ಸಂಬಂಧಿಸಿದ BLO ಅವರಿಗೆ ನೀಡಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾಜ್ಯ ಸರ್ಕಾರದ ‘ವಿಷನ್ ಕಮಿಟಿ’ಯ ಅಧ್ಯಕ್ಷರಾಗಿ ಡಾ. ಕೃಷ್ಣಪ್ರಸಾದ್ ಕೂಡ್ಲು ನೇಮಕ

    10/08/2026

    ಡೇವಿಡ್ ಕೊಲೆ ಪ್ರಕರಣ – ಬೈಂದೂರು, ಭಟ್ಕಳದಲ್ಲಿ  ಮೂವರು ಆರೋಪಿಗಳ ಬಂಧನ

    08/08/2026

    ಪ್ರಕೃತಿ ವಿಕೋಪದಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾದಲ್ಲಿ ಕೂಡಲೇ ಸ್ಪಂದಿಸಿ: ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್

    08/08/2026
    Leave A Reply Cancel Reply

    two + twelve =

    Call us

    Click Here

    Call us

    Call us

    Call us
    Highest Viewed Recently
    • ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಕಸ್ತೂರಿ ರಂಗನ್ ವರದಿ ಜಾರಿಯ ಕಾಟಚಾರದ ಸಭೆ: ಕೆ. ವಿಕಾಸ್ ಹೆಗ್ಡೆ
    • ಉಡುಪಿ ಜಿಲ್ಲಾಧಿಕಾರಿ ಅವರಿಂದ ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಗೆ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ
    • ಕಲಾತಂಡಗಳನ್ನು ಆಹ್ವಾನಿಸಿಕೊಂಡು ಅತಿಥಿ ಸತ್ಕಾರವೀಯುತ್ತಾ ಜನ ಮನ ಗೆದ್ದವರು ನಾಗರಾಜ ಹಂದೆ: ಕೆ. ತಾರಾನಾಥ ಹೊಳ್ಳ
    • ಕುಂದಾಪುರ: ಜಿ.ಎಸ್.ಬಿ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.