Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪುಸ್ತಕಗಳನ್ನು ಓದಿ ಜ್ಞಾನ ಸಂಪಾದನೆ ಹೆಚ್ಚಿಸಿ: ಡಾ. ಎಲ್ಲಮ್ಮ
    ಉಡುಪಿ ಜಿಲ್ಲೆ

    ಪುಸ್ತಕಗಳನ್ನು ಓದಿ ಜ್ಞಾನ ಸಂಪಾದನೆ ಹೆಚ್ಚಿಸಿ: ಡಾ. ಎಲ್ಲಮ್ಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜ್ಞಾನ ಎಂಬುದು ಒಂದು ಶಕ್ತಿ, ಪುಸ್ತಕಗಳನ್ನು ಓದುವುದರಿಂದ ನಾವು ಜ್ಞಾನ ಸಂಪಾದನೆ ಮಾಡಬಹುದು. ಓದುವಿಕೆ ನಮ್ಮ ಭಾಷಾ ಕೌಶಲ್ಯ ಮತ್ತು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುತ್ತದೆ. ಎಲ್ಲರೂ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ ಹೇಳಿದರು.

    Click Here

    Call us

    Click Here

    ಅವರು ಬುಧವಾರ ಅಜ್ಜರಕಾಡು ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ ನಗರ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆಯ ನಿಮಿತ್ತ ನಡೆದ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಸ್ವಾತಂತ್ರ‍್ಯ ಹೋರಾಟದಲ್ಲಿ ಪುಸ್ತಕಗಳು ಮತ್ತು ಲೇಖನಗಳು ಅತ್ಯಂತ ಪ್ರಮುಖ ಪಾತ್ರ ವಹಿಸಿವೆ. ಮಹಾನ್ ಕ್ರಾಂತಿಕಾರಿಗಳ ಲೇಖನಗಳನ್ನು ಓದಿ ಪ್ರಭಾವಿತರಾಗಿ ಅದೆಷ್ಟೋ ಮಂದಿ ಸ್ವಾತಂತ್ರ ಹೋರಾಟದಲ್ಲಿ ಧುಮುಕಿದ್ದಾರೆ. ಪುಸ್ತಕಗಳು ಸಮಾಜ ಪರಿವರ್ತನೆಯಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ. ಸಾರ್ವಜನಿಕರು ಕೂಡ ಗ್ರಂಥಗಳನ್ನು ಬರೆಯಬೇಕು ಅವುಗಳನ್ನು ವಿದ್ಯಾರ್ಥಿಗಳು ಓದುವಂತಾಗಬೇಕು ಎಂದರು.

    ಪುಸ್ತಕಗಳು ಗುಣಪಡಿಸುವ ಶಕ್ತಿಯನ್ನು ಹೊಂದಿದೆ ಪುಸ್ತಕಗಳನ್ನು ಓದುವಾಗ ನಾವು ಅದರ ಲೇಖಕನ ಜೊತೆ ಒಂದು ಸಂಬಂಧವನ್ನು ಬೆಳೆಸಿಕೊಳ್ಳುತ್ತೇವೆ. ನಮ್ಮ ಹೆತ್ತವರು ಸ್ನೇಹಿತರು ಅಥವಾ ಶಿಕ್ಷಕರ ಜೊತೆ ಹಂಚಿಕೊಳ್ಳಲಾಗದಂತಹ ಭಾವನೆಗಳನ್ನ ಪುಸ್ತಕಗಳ ಮೂಲಕ ಹಂಚಿಕೊಳ್ಳಬಹುದು. ಪುಸ್ತಕಗಳಲ್ಲಿ ಲೇಖಕನ ಉದ್ದೇಶ ಏನು ಎನ್ನುವುದು ಸ್ಪಷ್ಟವಾಗುತ್ತದೆ. ಇಲ್ಲಿ ಪಡೆದ ಅನುಭವವನ್ನು ಜೀವನದಲ್ಲಿ ಅಳವಡಿಸಿ ದಕ್ಷ ಆಡಳಿತ ನೀಡಬಹುದು. ಜಿಲ್ಲೆಯಲ್ಲಿ ಸುಸಜ್ಜಿತ ಕೇಂದ್ರ ಗ್ರಂಥಾಲಯ ಇರುವುದರಿಂದಾಗಿ ಬಹಳಷ್ಟು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಅನುಕೂಲವಾಗುತ್ತಿದೆ ಎಂದು ವಿದ್ಯಾರ್ಥಿನಿ ನಯನ ತಮ್ಮ ಅನುಭವ ಹಂಚಿಕೊಂಡರು.

    ಸರಕಾರಿ ಇಲಾಖೆಗಳಲ್ಲಿ ಲಂಚ ಇಲ್ಲದೆ ಕಾರ್ಯನಿರ್ವಹಿಸುವ ಮುಕ್ತ ವಿಭಾಗವಿದ್ದರೆ ಅದು ಗ್ರಂಥಾಲಯ. ಬ್ಯಾಂಕನ್ನು ತೆರೆದಿಟ್ಟರೆ ಕಳ್ಳರು ನುಗ್ಗಿ ಹಣವನ್ನು ದೋಚುತ್ತಾರೆ ಆದರೆ ಗ್ರಂಥಾಲಯವನ್ನು ತೆರೆದಿಟ್ಟರೆ ಕಳ್ಳರು ಬರುವುದಿಲ್ಲ ಏಕೆಂದರೆ ಇಲ್ಲಿ ಕಳ್ಳತನ ಮಾಡಲು ಪುಸ್ತಕಗಳನ್ನು ಬಿಟ್ಟರೆ ಬೇರೇನೂ ಇಲ್ಲ. ಕ್ರೀಡೆ ಮತ್ತು ಓದಿನಲ್ಲಿ ಜನರಿಗೆ ಆಸಕ್ತಿ ಕಡಿಮೆಯಾಗಿದ್ದು ಗ್ರಂಥಾಲಯಕ್ಕೆ ಬರುವ ಜನರ ಸಂಖ್ಯೆ ಕ್ಷೀಣಿಸಿದೆ. ಗ್ರಂಥಾಲಯಗಳು ಹೆಚ್ಚು ಜನರನ್ನು ಆಕರ್ಷಿಸಲು ಕಾರ್ಯನಿರ್ವಹಿಸಬೇಕು ಎಂದು ಹಿರಿಯ ಓದುಗರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದರು.

    ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿ ಸುರೇಖಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಡಾ. ಎಸ್ ಆರ್ ರಂಗನಾಥ್ ಅವರ ಜನ್ಮ ದಿನಾಚರಣೆಯನ್ನು ರಾಜ್ಯದಾದ್ಯಂತ ಗ್ರಂಥಪಾಲಕರ ದಿನವಾಗಿ ಆಚರಿಸಲಾಗುತ್ತಿದೆ. ಆಗಸ್ಟ್ 14 ರಂದು ಗ್ರಂಥಾಲಯದಲ್ಲಿ ನಮ್ಮ ಸಾಹಿತಿ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

    Click here

    Click here

    Click here

    Call us

    Call us

    ನಗರ ಕೇಂದ್ರ ಗ್ರಂಥಾಲಯದ ಗ್ರಂಥ ಪಾಲಕಿ ರಂಜಿತ ವಂದಿಸಿದರು. ಜಿಲ್ಲಾ ಕೇಂದ್ರದ ಗ್ರಂಥ ಪಾಲಕಿ ವನಿತಾ, ಗ್ರಂಥಾಲಯದ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಆ.14 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    12/08/2026

    ಸರ್ಕಾರೇತರ ವಸತಿ ನಿಲಯಗಳ ಶಾಲೆ/ಕಾಲೇಜುಗಳ ನೋಂದಣಿ: ಅರ್ಜಿ ಆಹ್ವಾನ

    12/08/2026

    ಜಿಲ್ಲೆಯಲ್ಲಿ 10,00,260 ಗಣತಿ ನಮೂನೆ ಡಿಜಿಟಲೀಕರಣ: ಉಡುಪಿ ಜಿಲ್ಲಾಧಿಕಾರಿ

    11/08/2026
    Leave A Reply Cancel Reply

    five × five =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ವಿಬಿ-ಜಿ ರಾಮ್ ಜಿ ಯೋಜನೆ ಪ್ರಗತಿ ಪರಿಶೀಲನಾ ಸಭೆ
    • ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗೂಡ್ಸ್ ವಾಹನ ಢಿಕ್ಕಿ – ಗಾಯ
    • ಬ್ರಹ್ಮಾವರ ಫಾರ್ಚೂನ್ ಕಾಲೇಜ್ ಆಫ್‌ ಪ್ಯಾರಾಮೆಡಿಕಲ್ ಸೈನ್ಸಸ್: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
    • ಪುಸ್ತಕಗಳನ್ನು ಓದಿ ಜ್ಞಾನ ಸಂಪಾದನೆ ಹೆಚ್ಚಿಸಿ: ಡಾ. ಎಲ್ಲಮ್ಮ
    • ಕೋಟ ಮೆಸ್ಕಾಂ ಉಪವಿಭಾಗದ ಜನಸಂಪರ್ಕ ಸಭೆ, ಅಹವಾಲು ಸ್ವೀಕಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.