ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕ, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಯುಥ್ ರೆಡ್ ಕ್ರಾಸ್ ಘಟಕ ಮತ್ತು ಪದವಿ ಪೂರ್ವ ಕಾಲೇಜಿನ ಜ್ಯೂನಿಯರ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ‘ಜಿನೆವಾ ಒಪ್ಪಂದ ದಿನ” ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮುಖ್ಯ ಅತಿಥಿಗಳಾದ ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ದಿನೇಶ್ ಹೆಗ್ಡೆ ಮಾತನಾಡಿ, ಜಿನೆವಾ ಎಂಬ ಸ್ಥಳವಿರುವುದು ಸ್ವಿಟ್ಜರ್ಲ್ಯಾಂಡ್ ನಲ್ಲಿ . ಈ ದೇಶದ ಜಗತ್ತಿನಲ್ಲಿಯೇ ಅತ್ಯಂತ ಶಾಂತಿಯುತ ರಾಷ್ಟ್ರ. ಅಂತರರಾಷ್ಟ್ರೀಯ ಮಟ್ಟದ ವ್ಯವಹಾರದಲ್ಲಿ ಈ ದೇಶ ತಟಸ್ಥ ಧೋರಣೆಯನ್ನು ಪಾಲಿಸುವುದು. ಕಾರಣ ಇದು ಶಾಂತಿ, ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವ ಸ್ವಭಾವವನ್ನು ಹೊಂದಿದೆ. ಜಗತ್ತಿನಲ್ಲಿ ಯುದ್ಧಗಳಾದಾಗ ಶಾಂತಿಯ ಸಂದೇಶ ಮತ್ತು ಯುದ್ಧದ ಸಂದರ್ಭದಲ್ಲಿ ಗಾಯಗೊಂಡವರು ಸೈನಿಕರು ಮತ್ತು ನೊಂದವರ ಚಿಕಿತ್ಸೆ ಮತ್ತು ಸಂತೈಸುವ ಮೂಲ ಉದ್ದೇಶವನ್ನು ರೆಡ್ ಕ್ರಾಸ್ ಸಂಸ್ಥೆ ಹೊಂದಿದೆ ಎಂದು ಹೇಳಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರದ ಘಟಕದ ಛೇರ್ಮನ್ ಜಯಕರ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶುಭಕರಾಚಾರಿ ವಹಿಸಿದ್ದರು.
ವೇದಿಕೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಖಜಾಂಚಿ ಶಿವರಾಮ ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರೋಜ ಎಮ್, ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಸತ್ಯನಾರಾಯಣ, ಯುಥ್ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಣಿ ವಿದ್ಯಾರಾಣಿ, ಪದವಿ ಪೂರ್ವ ಕಾಲೇಜಿನ ಜ್ಯೂನಿಯರ್ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ವಿದ್ಯಾಧರ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿಯಲ್ಲಿ ಮೂಲ ವಿಜ್ಞಾನ ವಿಭಾಗಗಳಾದ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ ವಿಷಯಗಳನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಭಾರತೀಯ ರೆಡ್ ಕ್ರಾಸ್ ಕುಂದಾಪುರ ಅಧ್ಯಕ್ಷ ಜಯಕರ ಶೆಟ್ಟಿ 1ಲಕ್ಷ ರೂಪಾಯಿಗಳ ಮೊತ್ತದ ವಿದ್ಯಾರ್ಥಿ ವೇತನ ನೀಡಿದರು.
ವಿದ್ಯಾರ್ಥಿನಿಯರಾದ ಅನೀಶಾ ಲೆವಿಸ್ ಕಾರ್ಯಕ್ರಮ ನಿರೂಪಿಸಿದರು. ವೈಷ್ಣವಿ ಪುತ್ರನ್ ಸ್ವಾಗತಿಸಿದರು. ಮಾನ್ವಿ ಎಮ್. ಭಂಡಾರಿ ವಂದಿಸಿದರು.
















