ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ಶ್ರಾವಣ ಮಾಸದಲ್ಲಿ ಜರಗುವ ’ಅಖಂಡ ಭಜನಾ ಸಪ್ತಾಹ’ಮಹೋತ್ಸವ’ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರ ಮಾರ್ಗದರ್ಶನದಂತೆ ಮಂಗಳವಾರ ಬೆಳಿಗ್ಗೆ ಕನ್ಯಾ ಲಗ್ನ ಸುಮುಹೂರ್ತದಲ್ಲಿ ದೀಪ ಸ್ಥಾಪನಾಪೂರ್ವಕ ಪ್ರಾರಂಭವಾಯಿತು.
ದೇವಳದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ಮತ್ತು ಪುರೋಹಿತರಾದ ಜಿ. ವಿಠಲದಾಸ ಭಟ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿತು. ದೇವಳದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್ ಮತ್ತು ಆಡಳಿತ ಮಂಡಳಿ ಸದಸ್ಯ ಜಿ. ವೆಂಕಟೇಶ ನಾಯಕ್ ಜಂಟಿಯಾಗಿ ದೀಪ ಪ್ರಜ್ವಲನೆ ಮಾಡಿದರು.
ಸಮಾಜದ ಹಿರಿಯರಾದ ಎಂ. ವಿನೋದ ಪೈ, ಜಿ. ನಿತ್ಯಾನಂದ ಶೆಣೈ, ಯು.ನಾರಾಯಣ ಪೈ, ಡಾ. ಕಾಶೀನಾಥ ಪಿ.ಪೈ, ಬಿ. ಕೃಷ್ಟ್ರಾಯ ಪೈ, ಎಂ.ಜಿ. ಮಾಧವ ಪೈ, ಎನ್. ಸುಭಾಶ್ ನಾಯಕ್, ಎಚ್. ಪಾಂಡುರಂಗ ನಾಯಕ್, ಎಂ.ಜಿ. ವಿಶ್ವನಾಥ ಭಂಡಾರ್ಕಾರ್, ಬಿ. ಸದಾನಂದ ಶೆಣೈ, ಎಂ. ರಾಮಕೃಷ್ಣ ಪೈ, ಪುರೋಹಿತರು, ದೇವಳದ ಆಡಳಿತ ಮಂಡಳಿ ಸದಸ್ಯರು, ಜಿ.ಎಸ್.ಬಿ ಮಹಿಳಾ ಮಂಡಳಿ ಸದಸ್ಯರು, ಜಿಎಸ್ಬಿ ಸಮಾಜಬಾಂಧವರು, ಊರಿನ ಹತ್ತು ಸಮಸ್ತರು ಮತ್ತಿತರರು ಉಪಸ್ಥಿತರಿದ್ದರು.
ಅಖಂಡ ಭಜನಾ ಸಪ್ತಾಹ ಮಹೋತ್ಸವವು ಆ.25 ರಂದು ದೀಪ ವಿಸರ್ಜನೆಯೊಂದಿಗೆ ಸಮಾಪನಗೊಳ್ಳಲಿದೆ. ಆ.24ರಂದು ಸಂಜೆ 5 ಗಂಟೆಗೆ ನಗರ ಭಜನೆ, ರಾತ್ರಿ ವಿಶೇಷ ಪೂಜೆ ನಡೆಯಲಿದೆ.
ಅಖಂಡ ಭಜನಾ ಸಪ್ತಾಹ ಮಹೋತ್ಸವದಲ್ಲಿ ಊರ ಪರ ಊರಿನ ವಿವಿಧ ಭಜನಾ ತಂಡಗಳು ಪಾಲ್ಗೊಂಡು ಭಜನಾ ಸೇವೆ ಸಮರ್ಪಿಸಲಿದ್ದು, ಪ್ರತಿನಿತ್ಯ ಶ್ರೀದೇವರಿಗೆ ವಿಶೇಷ ಪೂಜೆ ಪುನಸ್ಕಾರ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
















