Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನಸಂಪರ್ಕ ಸಭೆ: ಫಲಾನುಭವಿಗಳಿಗೆ ಸವಲತ್ತು ವಿತರಣೆ
    ಕುಂದಾಪ್ರದ್ ಸುದ್ಧಿ

    ಜನಸಂಪರ್ಕ ಸಭೆ: ಫಲಾನುಭವಿಗಳಿಗೆ ಸವಲತ್ತು ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಕಾಂಗ್ರೆಸ್ ಸರಕಾರ ನೀಡಿದ ಬಹುಪಾಲು ಭರವಸೆಗಳನ್ನು ಪೂರೈಸಿದ ಸಂತೋಷವಿದೆ. ಇನ್ನಷ್ಟು ಜನಪರ ಕಾರ್ಯಗಳನ್ನು ಮಾಡಲು ಸರಕಾರ ಸಿದ್ಧವಿದೆ ಎಂದು ಜಿಲ್ಲಾ ಉಸ್ತುವಾರಿ ವಿನಯ್ ಕುಮಾರ್ ಸೊರಕೆ ಹೇಳಿದರು. ಕುಂದಾಪುರ ಕುಂದಾಪುರದ ಆರ್‌ಎನ್ ಶೆಟ್ಟಿ ಸಭಾಂಗಣದಲ್ಲಿ ಜರುಗಿದ ತಾಲೂಕು ಮಟ್ಟದ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.

    Click Here

    Call us

    Click Here

    ಆಶ್ರಯ ಮನೆಗಳಿಗೆ ಬಡ್ಡಿ ಸಮೇತ ಸಾಲು ಕಟ್ಟಲು ಭಾಕಿ ಇರುವವರ ಸಾಲಮನ್ನಾ ಮಾಡಲಾಗಿದ್ದು. ಪ್ರಮಾಣ ಪತ್ರವನ್ನು ಕೂಡ ಹಲವು ಮನೆಗಳಿಗೆ ನೀಡಲಾಗಿದೆ. ಸ್ತ್ರೀ ಶಕ್ತಿ ಸಂಘಗಳಿಗೆ ೫೦೦೦ ಸುತ್ತು ನಿಧಿಯನ್ನು ನೀಡಲಾಗುತ್ತಿದ್ದು. ಈ ಸುತ್ತು ನಿಧಿಯನ್ನು ಐದುಸಾವಿರದಿಂದ ಇಪ್ಪತೈದುಸಾವಿರಕ್ಕೆ ಏರಿಸಲಾಗಿದೆ. ಎಂದರು. ನಂತರ ಜನರಿಂದ ಅಧಿಕಾರಿಗಳಿಗೆ ಪ್ರಶ್ನೆಗಳನ್ನು ಕೇಳಲಾಯಿತು. ಹೊಸ ಪಂಚಾಯತ್‌ಗಳಿಗೆ ದಾನ ಬಿಡುಗಡೆಯಾಗುತ್ತದೆ ಎಂದರು. ರೇಷನ್‌ಕಾರ್ಡ್ ವಿತರಣೆ ಮಾಡಿ ಕೆಲವು ದಿನಗಳ ಬಳಿಕ ಅದನ್ನು ರದ್ದುಗೊಳಿಸಲಾಗುತ್ತದೆ. ಇದರಿಂದ ಬಡ ಜನರಿಗೆ ತೊಂದರೆಯಾಗುತ್ತಿದೆ. ಎಂಬ ಪ್ರಶ್ನೆಗೆ ಉತ್ತರಿಸಿದ ಸೊರಕೆ ಈ ಹಿಂದಿನ ಸರ್ಕಾರವಿದ್ದಾಗ ಶೆ. 30ರಷ್ಟು ಮಾತ್ರ ರೇಷನ್ ಕಾರ್ಡ್ ವಿತರಣೆ ಮಾಡಲಾಗಿತ್ತು. ನಾವು ಈಗ 70ರಷ್ಟು ರೇಷನ್‌ಕಾರ್ಡ್‌ಗಳನ್ನು ವಿತರಣೆ ಮಾಡಿದ್ದೇವೆ. ಈಗ ತೊಂದರೆಯಾದ ಕುಟುಂಬಗಳಿದ್ದರೆ ಅರ್ಜಿ ಸಲ್ಲಿಸಿ ಪರಿಶೀಲಿಸಿ ಕಾರ್ಡ ವಿತರಣೆ ಮಾಡಲಾಗುತ್ತದೆ ಎಂದರು.

    ಈ ಸಂದರ್ಭ ಮಾತನಾಡಿದ ಬಿಜೆಪಿ ಮುಖಂಡ ರಾಜೇಶ್ ಕಾವೇರಿ ಹಕ್ಕುಪತ್ರ ವಿತರಣೆ ಸಂದರ್ಭ ಮೊದಲು 10,000 ಸಾವಿರ ರೂಪಾಯಿ ಹಣವನ್ನು ಪಡೆಯಲಾಗಿತ್ತು, ಈಗ ನೀವು 2,000 ಮಾತ್ರ ನೀಡಲು ನೀವು ಹೇಳುತ್ತಾ ಇದ್ದಿರಿ. ಈಗ ಹಕ್ಕುಪತ್ರಕ್ಕಾಗಿ ಹತ್ತುಸಾವಿರ ಕೊಟ್ಟ ಜನರು ಗತಿ ಏನು ಎಂದು ಪ್ರಶ್ನಿಸಿದರು. ನಾವು ಜನರಿಗೆ ಹಕ್ಕು ಪತ್ರಕ್ಕಾಗಿ ಹಣ ನೀಡಬೇಡಿ ಎಂದೇ ಹೇಳಿದ್ದೇವೆ. ಆದರೆ ಜನರು ಹಣವನ್ನು ನೀಡಿರುವುದು ಎಂದರು. ಇದಕ್ಕೆ ಮರುಪ್ರಶ್ನೆ ಹಾಕಿದ ರಾಜೇಶ್ ಕಾವೇರಿ ಹಣಕೊಡದಿದ್ರೆ ಹಕ್ಕುಪತ್ರ ಸಿಗೋದಿಲ್ಲ ಎಂದ ಕಾರಣಕ್ಕೆ ಹಣ ನೀಡಿರೋದು ಈಗ ನೀವು ಹೀಗೆ ಹೇಳುತ್ತಾ ಇದ್ದಿರಿ ಎಂದರು. ಈ ಬಗ್ಗೆ ಪರಿಶೀಲಿಸುತ್ತೇವೆ ಎಂದು ಸೊರಕೆ ಸಮಜಾಯಿಷಿ ನೀಡಿದರು.

    ಪಹಣಿ ಪತ್ರ ಪಡೆಯುವಲ್ಲಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಬೆಳಿಗ್ಗೆ ಬಂದು ಟೋಕನ್ ಪಡೆದರೆ ಸಂಜೆವರೆಗೆ ಕಾಯಬೇಕು. ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಎಂದು ಜಿ.ಪಂ ಸದಸ್ಯ ಗಣಪತಿ ಶ್ರೀಯಾನ್ ಪ್ರಶ್ನೆಗೆ ಜಿಲ್ಲಾಧಿಕಾರಿ ಆರ್ ವಿಶಾಲ್ ಉತ್ತರಿಸಿ ಈ ಸಮಸ್ಯೆ ನಮ್ಮ ಗಮನಕ್ಕೂ ಬಂದಿದೆ. ಇದನ್ನು ಪಹಣಿ ಪತ್ರ ವಿತರಣೆಯನ್ನು ನಾವು ಗ್ರಾಮಪಂಚಾಯತ್‌ನಲ್ಲಿ ನೀಡಲು ಪ್ರಯತ್ನಿಸುತ್ತಿದ್ದೇವೆ, ಇದಕ್ಕೆ ಕೆಲವೊಂದು ತಾಂತ್ರಿಕ ಅವಶ್ಯಕತೆಗಳನ್ನು ಪೂರೈಸಿ ಮುಂದುವರಿಯಬೇಕಾಗುತತ್ತದೆ ಇದಕ್ಕೆ ಕನಿಷ್ಠ ಒಂದುವರ್ಷಗಳ ಅವಧಿ ಬೇಕಾಗುತ್ತದೆ ಎಂದರು.

    409 ಮಂದಿ ಫಲಾನುಭವಿಗಳಿಗೆ ಸಹಾಯಧನ ಪರಿಹಾರ ಧನ ವನ್ನು ವಿತರಿಸಲಾಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಆರ್ ವಿಶಾಲ್, ಸಿಇಓ ಪ್ರಿಯಾಂಕ ಫ್ರಾನ್ಸಿಸ್ ಡಿಸೋಜಾ, ಉಪವಿಭಾಗಾಧಿಕಾರಿ ಅಶ್ವಥಿ. ಎಸ್, ತಹಶೀಲ್ದಾರ್ ಗಾಯತ್ರಿ ಎಸ್. ನಾಯಕ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    News Janasamparka Sabhe in Kundapura (2)

    Kundapur Taluk
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.