Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಹಿಳಾ ಸಬಲೀಕರಣಕ್ಕೆ ಅರ್ಹತೆ, ಆತ್ಮವಿಶ್ವಾಸವೇ ಬಲ: ಶ್ಯಾಮಲಾ ಎಸ್. ಕುಂದರ್
    alvas nudisiri

    ಮಹಿಳಾ ಸಬಲೀಕರಣಕ್ಕೆ ಅರ್ಹತೆ, ಆತ್ಮವಿಶ್ವಾಸವೇ ಬಲ: ಶ್ಯಾಮಲಾ ಎಸ್. ಕುಂದರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಮಹಿಳಾ ಸಬಲೀಕರಣವೆಂದರೆ ಕೇವಲ ಮೀಸಲಾತಿ ಅಥವಾ ಅವಕಾಶಗಳನ್ನು ಪಡೆಯುವುದಲ್ಲ; ತನ್ನ ಸಾಮರ್ಥ್ಯ, ಅರ್ಹತೆ ಹಾಗೂ ಆತ್ಮವಿಶ್ವಾಸದ ಮೂಲಕ ಸಮಾಜದಲ್ಲಿ ತನ್ನದೇ ಆದ ಸ್ಥಾನವನ್ನು ನಿರ್ಮಿಸಿಕೊಳ್ಳುವುದಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ವಿಶ್ರಾಂತ ಸದಸ್ಯೆ ಶ್ಯಾಮಲಾ ಎಸ್. ಕುಂದರ್ ಹೇಳಿದರು.

    Click Here

    Call us

    Click Here

    ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹಿಳಾ ಸಂಘಟನೆ ‘ಸಕ್ಷಮಾ’ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಮಹಿಳಾ ಸಬಲೀಕರಣ’ ವಿಷಯದ ಕುರಿತು ಮಾತನಾಡಿದರು. ಮಹಿಳೆಯರು ತಮ್ಮ ಹಕ್ಕುಗಳು, ಕರ್ತವ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಜಾಗೃತರಾಗಬೇಕು ಎಂದರು.

    ಮಹಿಳೆಯಲ್ಲಿ ಅಪಾರವಾದ ಅರ್ಹತೆ ಮತ್ತು ಸಾಮರ್ಥ್ಯವಿದೆ. ಯಾವುದೇ ಅನುಕಂಪದ ಆಧಾರದ ಮೇಲೆ ಅವಕಾಶವನ್ನು ಬೇಡುವ ಅಗತ್ಯವಿಲ್ಲ. ನಮ್ಮ ಅರ್ಹತೆ, ಪರಿಶ್ರಮ ಮತ್ತು ಸಾಮರ್ಥ್ಯವನ್ನು ಗುರುತಿಸಿ ಅವಕಾಶ ನೀಡಿ ಎಂದು ಕೇಳುವ ಆತ್ಮವಿಶ್ವಾಸ ಮಹಿಳೆಯರಲ್ಲಿ ಬರಬೇಕು ಎಂದರು.
    ಮಹಿಳೆಯರಿಗೆ ಆಸ್ತಿ ಸೇರಿದಂತೆ ಕಾನೂನುಬದ್ಧವಾಗಿ ದೊರೆಯುವ ಹಕ್ಕುಗಳ ಬಗ್ಗೆ ಅರಿವು ಮೂಡಬೇಕು. ತಮ್ಮ ಹಕ್ಕುಗಳನ್ನು ತಿಳಿದುಕೊಳ್ಳುವುದರ ಜೊತೆಗೆ, ಇತರರ ಹಕ್ಕುಗಳನ್ನೂ ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

    ಸಮಾಜದಲ್ಲಿ ನಮ್ಮ ಕಣ್ಣೆದುರು ಯಾವುದೇ ರೀತಿಯ ಅನ್ಯಾಯ ಅಥವಾ ತಪ್ಪು ನಡೆಯುತ್ತಿದ್ದರೆ ಅದನ್ನು ಪ್ರಶ್ನಿಸುವ ಧೈರ್ಯ ಬೆಳೆಸಿಕೊಳ್ಳಬೇಕು. ಬದಲಾವಣೆ ಮತ್ತೊಬ್ಬರಿಂದ ಬರಲಿ ಎಂದು ಕಾಯುವುದಕ್ಕಿಂತ, ಮೊದಲು ನಮ್ಮಲ್ಲೇ ಬದಲಾವಣೆ ಆರಂಭವಾಗಬೇಕು. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತುಕೊಂಡಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ನಮ್ಮ ಮುಂದೆ ಗುರಿ ಇರಬೇಕು; ಹಿಂದೆ ಗುರುವಿನ ಮಾರ್ಗದರ್ಶನ ಮತ್ತು ಸಹಕಾರ ಇರಬೇಕು.

    ಪ್ರಕೃತಿ ಮತ್ತು ಸಮಾಜದ ನಡುವೆ ಸಾಮರಸ್ಯ ಅತ್ಯಗತ್ಯ. ಪ್ರಕೃತಿಯೊಂದಿಗೆ ಹೊಂದಿಕೊಂಡು ಬದುಕಿದಾಗ ಅದು ಸಂಸ್ಕೃತಿ; ಪ್ರಕೃತಿಗೆ ವಿರುದ್ಧವಾಗಿ ನಡೆದಾಗ ಅದು ವಿಕೃತಿ ಎಂಬುದನ್ನು ಅರಿತುಕೊಳ್ಳಬೇಕು. ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಜವಾಬ್ದಾರಿ ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದರು.
    ದೇಶದ ಬಗ್ಗೆ ಗೌರವ, ಸಂವಿಧಾನದ ಬಗ್ಗೆ ಅರಿವು ಹಾಗೂ ಸಾಮಾಜಿಕ ಹೊಣೆಗಾರಿಕೆ ಪ್ರತಿಯೊಬ್ಬ ನಾಗರಿಕನಲ್ಲೂ ಇರಬೇಕು. ಹಿಂದಿನ ತಲೆಮಾರುಗಳಲ್ಲಿ ಕುಟುಂಬ ಮತ್ತು ಸಮಾಜವನ್ನು ಬೆಸೆಯುತ್ತಿದ್ದ ಭಜನೆ, ಸಾಂಸ್ಕೃತಿಕ ಚಟುವಟಿಕೆಗಳಂತಹ ಮೌಲ್ಯಾಧಾರಿತ ಚಟುವಟಿಕೆಗಳ ಸ್ಥಾನವನ್ನು ಇಂದು ವೈವಿಧ್ಯಮಯ ದೂರದರ್ಶನ ಕಾರ್ಯಕ್ರಮಗಳು ಹಾಗೂ ಡಿಜಿಟಲ್ ಮನರಂಜನೆಗಳು ಆಕ್ರಮಿಸಿವೆ. ತಂತ್ರಜ್ಞಾನವನ್ನು ತಿರಸ್ಕರಿಸುವ ಬದಲು, ಅದನ್ನು ಸದುಪಯೋಗಪಡಿಸಿಕೊಂಡು ಮೌಲ್ಯಗಳನ್ನು ಉಳಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

    ಇದು ತಾಂತ್ರಿಕ ಯುಗವಾಗಿದ್ದು, ಮಹಿಳೆಯರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಶಿಕ್ಷಣ, ಉದ್ಯೋಗ, ಉದ್ಯಮ, ಆಡಳಿತ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ತಮ್ಮ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬೇಕು. ತಂತ್ರಜ್ಞಾನವು ಮಹಿಳೆಯರ ಜ್ಞಾನ ಮತ್ತು ಅವಕಾಶಗಳ ವ್ಯಾಪ್ತಿಯನ್ನು ಹೆಚ್ಚಿಸುವ ಸಾಧನವಾಗಬೇಕು ಎಂದರು.

    Click here

    Click here

    Click here

    Call us

    Call us

    ರಾಜಕೀಯ ಕ್ಷೇತ್ರದಲ್ಲಿಯೂ ಮಹಿಳೆಯರ ಸಮಾನ ಭಾಗವಹಿಸುವಿಕೆ ಅಗತ್ಯವಿದೆ. ಮಹಿಳೆಯರಿಗೆ 33 ಶೇಕಡಾ ರಾಜಕೀಯ ಮೀಸಲಾತಿ ನೀಡುವ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳು ಮಹಿಳೆಯರ ರಾಜಕೀಯ ಪಾಲ್ಗೊಳ್ಳುವಿಕೆಯನ್ನು ಮತ್ತಷ್ಟು ಹೆಚ್ಚಿಸುವ ಆಶಾವಾದ ಮೂಡಿಸಿವೆ ಎಂದು ಹೇಳಿದರು.

    ಹೆಣ್ಣುಮಕ್ಕಳ ಸಶಕ್ತೀಕರಣ ದೇಶದಲ್ಲಿ ನಿರಂತರವಾಗಿ ನಡೆಯುತ್ತಿದೆ. ಶಿಕ್ಷಣ, ಉದ್ಯೋಗ, ಆಡಳಿತ, ರಾಜಕೀಯ ಹಾಗೂ ವಿವಿಧ ವೃತ್ತಿಪರ ಕ್ಷೇತ್ರಗಳಲ್ಲಿ ಮಹಿಳೆಯರು ಮುನ್ನಡೆಯುತ್ತಿರುವುದು ಉತ್ತಮ ಬೆಳವಣಿಗೆ. ಆದರೆ ಈ ಪ್ರಗತಿ ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾಗದೆ ಗ್ರಾಮೀಣ ಭಾಗದ ಮಹಿಳೆಯರಿಗೂ ತಲುಪಬೇಕು ಎಂದರು.

    ಮಹಿಳಾ ಸಬಲೀಕರಣವು ಮಹಿಳೆಯರ ಬದುಕನ್ನು ಮಾತ್ರ ಬದಲಿಸುವ ಪ್ರಕ್ರಿಯೆಯಲ್ಲ; ಅದು ಕುಟುಂಬ, ಸಮಾಜ ಮತ್ತು ದೇಶದ ಪ್ರಗತಿಗೆ ದಾರಿ ಮಾಡಿಕೊಡುವ ಶಕ್ತಿಯಾಗಿದೆ. ಆದ್ದರಿಂದ ಮಹಿಳೆಯರು ಆತ್ಮವಿಶ್ವಾಸದಿಂದ ಮುಂದೆ ಬಂದು ತಮ್ಮ ಹಕ್ಕು, ಅರ್ಹತೆ ಮತ್ತು ಸಾಮರ್ಥ್ಯವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಅನುಕಂಪದ ನೆಲೆಯಲ್ಲಿ ಯಾವುದೇ ಭಿಕ್ಷೆ ಬೇಡ; ನಮ್ಮ ಅರ್ಹತೆ ಮತ್ತು ಸಾಮರ್ಥ್ಯಕ್ಕೆ ತಕ್ಕ ಅವಕಾಶವನ್ನು ಕೇಳೋಣ ಎಂಬ ಸಂದೇಶದೊಂದಿಗೆ ಮಹಿಳೆಯರಲ್ಲಿ ಆತ್ಮವಿಶ್ವಾಸ ಮತ್ತು ಸ್ವಾವಲಂಬನೆಯ ಅಗತ್ಯವನ್ನು ಒತ್ತಿ ಹೇಳಿದರು.

    ಕರ‍್ಯಕ್ರಮದಲ್ಲಿ ಆಳ್ವ ಫಾರ್ಮಸಿಯ  ಆಡಳಿತಾಧಿಕಾರಿ  ಹಾಗೂ ಸಕ್ಷಮ ವೇದಿಕೆಯ ಸಂಚಾಲಕಿ ಡಾ. ಗ್ರೀಷ್ಮಾ ವಿವೇಕ ಆಳ್ವ, ಕರ‍್ಯಕ್ರಮ ಸಂಯೋಜಕಿ ಡಾ. ಅರ್ಚನಾ ಪ್ರಭಾತ್ ಹಾಗೂ ಸಂಘಟನೆಯ ಸದಸ್ಯರು ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳ ಕಮಾಲ್

    20/08/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಫ್ರೀಡಂ ಪ್ರೆನ್ಯೂರ್‌ ಏಕಪಾತ್ರಾಭಿನಯ ಸ್ಪರ್ಧೆ

    19/08/2026

    ಸುಜ್ಞಾನ ಕಾಲೇಜಿನಲ್ಲಿ ಸಿಎ ಹಾಗೂ ಸಿಎಸ್‌ ತರಬೇತಿ ಕಾರ್ಯಕ್ರಮ

    17/08/2026
    Leave A Reply Cancel Reply

    nine + 11 =

    Call us

    Click Here

    Call us

    Call us

    Call us
    Highest Viewed Recently
    • ರೋಟರಿ ಕ್ಲಬ್ ಸಾಂಸ್ಕೃತಿಕ ಸ್ಪರ್ಧೆ: ಯುವ-ಜನ-ಮನ ರ‍್ಯಾಲಿಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜು ಪ್ರಥಮ
    • ಮಹಿಳಾ ಸಬಲೀಕರಣಕ್ಕೆ ಅರ್ಹತೆ, ಆತ್ಮವಿಶ್ವಾಸವೇ ಬಲ: ಶ್ಯಾಮಲಾ ಎಸ್. ಕುಂದರ್
    • ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ
    • ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳ ಕಮಾಲ್
    • ಯೋಧರಿಗೆ ಗೌರವಾರ್ಪಣೆ – ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಶೇಷ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.