Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿ.ಪಂ ಚುನಾವಣೆ: ಕಾಂಗ್ರೆಸ್ – ಬಿಜೆಪಿ ಮಹಿಳಾ ಸ್ವರ್ಧಾಕಾಂಕ್ಷಿಗಳು ಅದಲು ಬದಲು!
    ವಿಶೇಷ ವರದಿ

    ಜಿ.ಪಂ ಚುನಾವಣೆ: ಕಾಂಗ್ರೆಸ್ – ಬಿಜೆಪಿ ಮಹಿಳಾ ಸ್ವರ್ಧಾಕಾಂಕ್ಷಿಗಳು ಅದಲು ಬದಲು!

    Updated:17/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಸುನಿಲ್ ಹೆಚ್. ಜಿ. ಬೈಂದೂರು.
    ಕುಂದಾಪುರ: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳ ಪಕ್ಷಾಂತರವೂ ಚುರುಕುಗೊಳ್ಳುತ್ತಿದೆ. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಟಿಕೇಟಿಗಾಗಿ ಈಗಾಗಲೇ ಆಕಾಂಕ್ಷಿಗಳ ತೆರೆಮರೆಯ ಕಸರತ್ತು ನಡೆಯುತ್ತಿದ್ದರೇ, ಯಾರಿಗೆ ಟಿಕೆಟ್ ನೀಡಬಹುದು ಎಂಬ ಲೆಕ್ಕಾಚಾರದಲ್ಲಿ ಪಕ್ಷದ ನಾಯಕರುಗಳು ಮುಳುಗಿದ್ದಾರೆ. ಆಕಾಂಕ್ಷಿಗಳ ಪಟ್ಟಿ ದೊಡ್ಡದೇ ಇರುವುದರಿಂದ ಟಿಕೇಟ್ ನೀಡುವುದು ಕೂಡ ಪಕ್ಷಗಳಿಗೆ ಸವಾಲಾಗಿದೆ ಪರಿಣಮಿಸಿದೆ. ಈ ನಡುವೆ ಪಕ್ಷ, ನಾಯಕರುಗಳೊಂದಿಗೆ ಅಸಮಧಾನಗೊಂಡ ಅಭ್ಯರ್ಥಿಗಳ ಪಕ್ಷಾಂತರ, ಪಕ್ಷೇತರವಾಗಿ ಸ್ವರ್ಥಿಸುವುದಕ್ಕೆ ಅಖಾಡ ಸಿದ್ಧಗೊಳ್ಳುತ್ತಿದೆ.

    Click Here

    Call us

    Click Here

    [quote font_size=”15″ bgcolor=”#ffffff” bcolor=”#9eba9c” arrow=”yes” align=”right”]* ಬಿಜೆಪಿ ಪಕ್ಷದಲ್ಲಿ ಇಷ್ಟು ವರ್ಷಗಳ ಕಾಲ ಸಕ್ರೀಯವಾಗಿ ತೊಡಗಿಸಿಕೊಂಡು ತನ್ನಿಂದಾದ ಕೆಲಸವನ್ನು ಮಾಡಿದ್ದೇನೆ. ಆದರೆ ಅಲ್ಲಿನ ಕೆಲವು ನಾಯಕರುಗಳ ಗುಂಪುಗಾರಿಕೆ, ಕೆಲಸ ಮಾಡುವವರಿಗೂ ಅವಕಾಶ ನೀಡದಿರುವುದು ನನಗೆ ಬೇಸರ ತರಿಸಿತ್ತು. ಹಾಗಾಗಿ ರಾಜಿನಾಮೆ ನೀಡಿದ್ದೇನೆ. ಮುಂದಿನ ನಡೆ ಸದ್ಯದಲ್ಲಿಯೇ ತಿಳಿಯಲಿದೆ – ಗೌರಿ ದೇವಾಡಿಗ[/quote]

    ಬಿಜೆಪಿ ಪಕ್ಷದ ಚುನಾಯಿತ ಪ್ರತಿನಿಧಿ, ಉಡುಪಿ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ ಕಳೆದ ಕೆಲವು ತಿಂಗಳುಗಳಿಂದ ಕಾಂಗ್ರೆಸ್ ಪಕ್ಷ ಸೇರುವ ಇರಾದೆ ಹೊಂದಿದ್ದು ಗುಟ್ಟಾಗಿ ಉಳಿದಿರಲಿಲ್ಲ. ಅದನ್ನು ಸಾಕ್ಷೀಕರಿಸುವಂತೆ ಗೌರಿ ದೇವಾಡಿಗ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಎಲ್ಲಾ ಹುದ್ದೆಗಳಿಗೆ ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಪಕ್ಷದ ಮುಖಂಡರ ಗುಂಪುಗಾರಿಕೆಯಿಂದ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸಲು ಹಾಗೂ ಜನಪರವಾಗಿ ಕೆಲಸ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಅವರು ತಮ್ಮ ರಾಜನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಗೌರಿ ದೇವಾಡಿಗ ಅನೇಕ ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು, ತಾಪಂ ಮತ್ತು ಜಿಪಂ ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದ್ದರು. ಈಗ ರಾಜಿನಾಮೆ ನೀಡಿರುವ ಅವರು ಕಾಂಗ್ರೆಸ್ ಪಕ್ಷಕ್ಕೆ ಸದ್ಯದಲ್ಲಿಯೇ ಸೇರ್ಪಡೆಗೊಳ್ಳುವುದು ಬಹುತೇಕ ಖಚಿವಾಗಿದ್ದು, ಖಂಬದಕೋಣೆ ಕ್ಷೇತ್ರದ ಟಿಕೇಟ್ ಪಡೆಯಲಿದ್ದಾರೆ ಎನ್ನಲಾಗಿದೆ.

    ಇತ್ತ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದಾ ಬಿಜೂರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಈ ಭಾರಿ ಶಾರದಾ ಬಿಜೂರು ಅವರ ಬದಲಿಗೆ ಅವರ ಮಗಳನ್ನು ಖಂಬದಕೋಣೆ ಕ್ಷೇತ್ರದಿಂದ ಕಣಕ್ಕಿಳಿಸುವ ತಯಾರಿಯಲ್ಲಿದ್ದಾರೆ. ಒಟ್ಟಿನಲ್ಲಿ ಮಹಿಳಾ ಮೀಸಲಾತಿ ಇದ್ದ ಖಂಬದಕೋಣೆ ಕ್ಷೇತ್ರದಲ್ಲಿ ಈ ಭಾರಿ ಮಹಿಳೆಯರ ನಡುವೆ ನೇರ ಜಿದ್ದಾಜಿದ್ದಿ ಏರ್ಪಡಲಿದ್ದು ಯಾರು ಗೆಲುವು ಸಾಧಿಸಲಿದ್ದಾರೆ ಎಂಬುದು ಸದ್ಯದ ಕುತೂಹಲ.

    Election Gowri Devadiga
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಅರಣ್ಯ ಲೋಕದ ಮರುಸೃಷ್ಟಿ – ಕುಮ್ರಿಕಾನ್. ‌ಬೈಂದೂರು ಉತ್ಸವದ ವಿಶೇಷ ಆಕರ್ಷಣೆ

    01/11/2024

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.