Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯ ನಿಗ್ರಹಕ್ಕೆ ಸದನದಲ್ಲಿ ಒತ್ತಾಯಿಸಿದ ಶಾಸಕ ಗಂಟಿಹೊಳೆ
    ಊರ್ಮನೆ ಸಮಾಚಾರ

    ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯ ನಿಗ್ರಹಕ್ಕೆ ಸದನದಲ್ಲಿ ಒತ್ತಾಯಿಸಿದ ಶಾಸಕ ಗಂಟಿಹೊಳೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೆಂಗಳೂರು:
    ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ  ಗುರುರಾಜ್ ಗಂಟಿಹೊಳೆ ಅವರು ರಾಜ್ಯದಲ್ಲಿ ಎನ್. ಡಿ. ಪಿ ಎಸ್ ಕಾಯ್ದೆ  ರಡಿಯಲ್ಲಿ ಮತ್ತು ಗಾಂಜಾ ಸಹಿತ ಇನ್ನಿತರ ಮಾದಕ ದ್ರವ್ಯ ಗಳ ಸಾಗಾಟ ಮತ್ತು ಸೇವನೆ ಸಂಬಂಧ ಕೈಗೊಂಡ ಕ್ರಮಗಳ  ಬಗ್ಗೆ ಪ್ರಶ್ನೆ ಕೇಳಿದ್ದಾರೆ.

    Click Here

    Call us

    Click Here

    ಚುಕ್ಕೆ ರಹಿತ ಪ್ರಶ್ನೆ ಗೆ  ರಾಜ್ಯ ಗೃಹ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಯವರು ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಸಾಗಾಟಕ್ಕೆ ಸಂಬಂಧಿಸಿದಂತೆ 18,428 ಪ್ರಕರಣಗಳು ದಾಖಲಾಗಿದ್ದು 10,131 ಆರೋಪಿತರು ಸೇರಿರುತ್ತಾರೆ. ಇದರ ಪೈಕಿ 5249 ಜನರ ಮೇಲೆ ಆರೋಪ ಪಟ್ಟಿ ಸಲ್ಲಿಸಲಾಗಿದ್ದು 981 ಪ್ರಕರಣದ 2130 ಮಂದಿಯನ್ನು ದೋಷಿ ಎಂದು ಸಾಬೀತು ಪಡಿಸಲಾಗಿದೆ. ಅವರಿಂದ 2.69 ಕೋಟಿ ದಂಡ ಮೊತ್ತ ವಸೂಲಿ ಮಾಡಲಾಗಿದೆ ಹಾಗೂ  ಮಾದಕ ದ್ರವ್ಯ ಸೇವನೆ ಹಾಗೂ ಸಾಗಾಟಕ್ಕೆ ಸಂಬಂಧಿಸಿದಂತೆ ಕಳೆದ 3 ವರ್ಷಗಳಲ್ಲಿ  25,011 ಆರೋಪಿತರನ್ನು ಗುರುತಿಸಲಾಗಿದ್ದು ಅದರ ಪೈಕಿ 1166 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.

    ಜಾಗೃತಿ ಕಾರ್ಯಕ್ರಮಗಳ ಹೊರತೂ ನಿಲ್ಲದ ಮಾದಕ ದೃವ್ಯ ಸೇವನೆ ಹಾಗೂ ಸಾಗಾಟ ಪ್ರಕರಣ ಗಳು:
    ಶಾಲಾ ಕಾಲೇಜು ಆವರಣಗಳಲ್ಲಿ ನಿಷೇಧಿತ ಪದಾರ್ಥದ ಮಾರಾಟ ತಡೆಯಲು ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರೂ ವರ್ಷದಿಂದ ವರ್ಷಕ್ಕೆ ಮಾದಕ ವ್ಯಸನಿಗಳ ಸಂಖ್ಯೆ ಅದರಲ್ಲೂ ವಿದ್ಯಾರ್ಥಿಗಳ ಸಮೂಹ ಬಲಿಯಾಗುತ್ತಿರುವುದರಿಂದ ಈ ಬಗ್ಗೆ ಸರಕಾರ ಕೈಗೊಂಡ ಕ್ರಮಗಳ ಕುರಿತು ಕೇಳಿದ ಮರು ಪ್ರಶ್ನೆಗೆ  ಶಾಲಾ ಕಾಲೇಜುಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಕಳೆದ 3 ವರ್ಷಗಳಲ್ಲಿ 66,656 ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿ ಕೊಂಡಿದ್ದು, 58. 41 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದು ಸಚಿವರು ಉತ್ತರಿಸಿದರು.

     ಮಾದಕ ವಸ್ತು ನಿಗ್ರಹ ಕಾರ್ಯಪಡೆಗೆ ಶಕ್ತಿ ತುಂಬಲು ಆಗ್ರಹ:
    ರಾಜ್ಯದಲ್ಲಿ ಡ್ರಗ್ಸ್ ಮಾಫಿಯ ನಿಗ್ರಹ ಮಾಡಲು ರಚನೆ ಗೊಂಡ ಮಾದಕ ವಸ್ತು ನಿಗ್ರಹ ಕಾರ್ಯಪಡೆ (ಎ.ಎನ್.ಟಿ.ಎಫ್ ) ಖಾಯಂ ಮುಖ್ಯಸ್ಥರ ನೇಮಕ ಹಾಗೂ ಮಾದಕ ವಸ್ತು ದಂಧೆ ಕೋರರ ವಿರುದ್ಧ ಎಫ್ಐ ಆರ್ ದಾಖಲಿಸಿ ತನಿಖೆ ನಡೆಸಲು ಪ್ರಸ್ತುತ  ಎ.ಎನ್.ಟಿ.ಎಫ್ ಸಂಸ್ಥೆಗೆ ಅಧಿಕಾರ ಇಲ್ಲದೇ ಇರುವ ಬಗ್ಗೆ ಪ್ರಸ್ತಾಪಿಸಿ ಸದರಿ ಸಂಸ್ಥೆಗೆ ಖಾಯಂ ಮುಖ್ಯಸ್ಥರ ಜೊತೆಗೆ ಪ್ರಥಮ ವರ್ತಮಾನ ವರದಿ ದಾಖಲಿಸಿ ಪ್ರಕರಣದ ತನಿಖೆ ನಡೆಸುವ ಅಧಿಕಾರ ನೀಡಲು ಕೇಳಿರುವ ಪೂರಕ ಪ್ರಶ್ನೆಗೆ ಅಪರ ಪೊಲೀಸ್ ಮಹಾ ನಿರ್ದೇಶಕರು ( ಕಾನೂನು ಮತ್ತು ಸುವ್ಯವಸ್ಥೆ) ಇವರನ್ನು ಎ.ಎನ್.ಟಿ.ಎಫ್ ಮುಖ್ಯಸ್ಥರ ರ ಹುದ್ದೆಗೆ ಪ್ರಸ್ತುತ ಹೆಚ್ಚುವರಿ ಪ್ರಭಾರದಲ್ಲಿ ಇರಿಸಲಾಗಿದ್ದು ಎ.ಎನ್.ಟಿ.ಎಫ್ ಘಟಕಕ್ಕೆ ಪೊಲೀಸ್ ಠಾಣೆ ಅಧಿಕಾರ ನೀಡುವ ಕುರಿತು ಪ್ರಸ್ತಾವನೆಯು ಪರಿಶೀಲನೆಯಲ್ಲಿದೆ ಎಂದು ಶಾಸಕರ ಪೂರಕ ಪ್ರಶ್ನೆಗೆ ಸಚಿವರು ಇದೇ ಸಂದರ್ಭದಲ್ಲಿ ಉತ್ತರಿಸಿದ್ದಾರೆ.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾಜ್ಯದಲ್ಲಿನ ಮಳೆ ಮಾಪನಗಳ ದುರವಸ್ಥೆ ಬಗ್ಗೆ ಪ್ರಶ್ನೆ ಮೂಲಕ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ

    21/08/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಸದ್ಭಾವನಾ ದಿವಸ್

    21/08/2026

    ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ

    21/08/2026
    Leave A Reply Cancel Reply

    16 − eight =

    Call us

    Click Here

    Call us

    Call us

    Call us
    Highest Viewed Recently
    • ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯ ನಿಗ್ರಹಕ್ಕೆ ಸದನದಲ್ಲಿ ಒತ್ತಾಯಿಸಿದ ಶಾಸಕ ಗಂಟಿಹೊಳೆ
    • ರಾಜ್ಯದಲ್ಲಿನ ಮಳೆ ಮಾಪನಗಳ ದುರವಸ್ಥೆ ಬಗ್ಗೆ ಪ್ರಶ್ನೆ ಮೂಲಕ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಸದ್ಭಾವನಾ ದಿವಸ್
    • ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಫೆಲೋಶಿಪ್: ಅರ್ಜಿ ಆಹ್ವಾನ
    • ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾದವರು ದಿ. ದೇವರಾಜ ಅರಸು: ಎಂ.ಎ. ಗಫೂರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.