ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಪ್ರಸಿದ್ಧ ದೇಗುಲ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮಗಳು ಜರಗಿದವು.ದೇಗುಲದಲ್ಲಿ ನಡೆದ ಧಾರ್ಮಿಕ ಕಾರ್ಯವನ್ನು ವೇ.ಮೂ ಮಧುಸೂದನ್ ಬಾಯರಿ ನೆರವೇರಿಸಿದರು.
ಶ್ರೀದೇವಿಗೆ ವಿಶೇಷ ಅಲಂಕಾರ, ಸಹಸ್ರ ಕುಂಕುಮಾರ್ಚನೆ, ಪೂಜಾ ಕಾರ್ಯಕ್ರಮಗಳು, ಪ್ರಸಾದ ವಿತರಣೆ, ಅಪರಾಹ್ನ 3ಸಾವಿರಕ್ಕೂ ಅಧಿಕ ಮಂದಿ ಅನ್ನಪ್ರಸಾದದಲ್ಲಿ ಭಾಗಿಯಾದರು.
ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ ಕುಂದರ್, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಸದಸ್ಯರಾದ ರತನ್ ಐತಾಳ್, ಚಂದ್ರಶೇಖರ್ ಆಚಾರ್, ಎಂ.ಶಿವ ಪೂಜಾರಿ, ಸುಧಾ. ಎ.ಪೂಜಾರಿ, ಸುಭಾಷ್ ಶೆಟ್ಟಿ,ಗಣೇಶ್ ನೆಲ್ಲಿಬೆಟ್ಟು, ಜ್ಯೋತಿ ಡಿ. ಕಾಂಚನ್, ಸುಬ್ರಾಯ ಜೋಗಿ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ಅರ್ಚಕ ಪ್ರತಿನಿಧಿಗಳು ಭಾಗಿಯಾದರು.











