ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿವರ್ಷ ಕೊಡಮಾಡುವ ಅತ್ಯತ್ತಮ ಹಾಲು ಉತ್ಪಾದಕರ ಸಂಘ ಪ್ರಶಸ್ತಿಗೆ ಇಲ್ಲಿನ ಸಾಸ್ತಾನದ ಪಾಂಡೇಶ್ವರ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಆಯ್ಕೆಗೊಳಿಸಿ ಶನಿವಾರ ಪ್ರಶಸ್ತಿಯನ್ನು ಪ್ರದಾನಿಸಿದರು.
ಮಂಗಳೂರಿನ ದಕ್ಷಿಣಕನ್ನಡ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಸಂಘದ ಅಧ್ಯಕೆ ವೆಲೇರಿಯನ್ ಡಿಸೋಜ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ಯಾಮಲ ಪಾಂಡೇಶ್ವರ ಅವರಿಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ಐಕಳದ ಬಾವ ಡಾ. ದೇವಿಪ್ರಸಾದ್ ಶೆಟ್ಟಿ ಪ್ರಶಸ್ತಿ ಪತ್ರ ಮತ್ತು ಫಲಕವನ್ನು ಹಸ್ತಾಂತರಿಸಿದರು. ಸಂಘದ ಸಿಬ್ಬಂದಿ ಸುಜಾತ ವೆಂಕಟೇಶ್ ಇದ್ದರು.











