ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಅಂತರ್ ತರಗತಿ ಐಟಿ ಫೆಸ್ಟ್ “ಟೆಕ್ ಮಂಥನ್ 6.0” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಸಭಾ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳೇ ತಯಾರಿಸಿದ ಸಾಫ್ಟ್ವೇರ್ ಅಪ್ಲಿಕೇಶನ್ ಮೂಲಕ ಕಾರ್ಯಕ್ರಮವನ್ನು ವಿನೂತನವಾಗಿ ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಎಂಐಟಿಯ ಕ್ವಾಲಿಟಿ ಎಸೂರೆನ್ಸ್ ನ ಸಹಾಯಕ ನಿರ್ದೇಶಕರಾದ ಡಾ. ಶ್ವೇತಾ ವಿನ್ಸೆಂಟ್ ಅವರು ಮಾತನಾಡಿ “ತಂತ್ರಜ್ಞಾನದೊಂದಿಗೆ ಬುದ್ದಿಯನ್ನು ಮಂಥನ ಮಾಡಿದಾಗ ಮಾತ್ರ ಹೊಸ ಹೊಸ ಆಲೋಚನೆಗಳಿಂದಾಗಿ ಇನ್ನಷ್ಟು ಹೊಸ ಬಗೆಯ ತಂತ್ರಜ್ಞಾನಗಳನ್ನು ಕಂಡುಹಿಡಿಯಲು ಸಾಧ್ಯ” ಎಂದರು.
ಇನ್ನೋರ್ವ ಮುಖ್ಯ ಅತಿಥಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರಭಾವತಿ ಅವರು ಮಾತನಾಡಿ, “ವಿದ್ಯಾರ್ಥಿಗಳು ಕ್ರಿಯಾಶೀಲತೆಯನ್ನು ಬೆಳೆಸಿಕೊಂಡು ಹೊಸ ಸಾಫ್ಟ್ವೇರ್ ಗಳನ್ನು ಅಭಿವೃದ್ಧಿಗೊಳಿಸಿದಾಗ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ” ಎಂದರು.
ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾರ್ಯಕ್ರಮದ ಸಂಯೋಜಕರಾದ ಗಿರಿರಾಜ್ ಭಟ್ ಮತ್ತು ನಿರ್ಮಲಾ ಬಿಲ್ಲವ ಉಪಸ್ಥಿತರಿದ್ದರು.
ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಂತಿಮ ಬಿಸಿಎ ವಿಭಾಗದ ವಿದ್ಯಾರ್ಥಿಗಳು ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪ್ರತಿನಿಧಿ ಅಪೂರ್ವ ಸ್ವಾಗತಿಸಿ, ನಿರೀಕ್ಷಾ ಮತ್ತು ರೈನಲ್ ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ವಿದ್ಯಾರ್ಥಿ ಪ್ರತಿನಿಧಿ ಗಣೇಶ್ ಕೆ. ವಂದಿಸಿ, ಸಾನಿಕ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.
















