Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು: ಶ್ರೀ ರಾಘವೇಶ್ವರ
    ಊರ್ಮನೆ ಸಮಾಚಾರ

    ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು: ಶ್ರೀ ರಾಘವೇಶ್ವರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗೋಕರ್ಣ:
    ನಮ್ಮ ದೇಹಕ್ಕೆ ನಾವು ಪ್ರಭುಗಳಾಗಿದ್ದು, ಗಟ್ಟಿಯಾದ ಸಂಕಲ್ಪವನ್ನು ಮಾಡಿದಾಗ ದೇಹ ನಮ್ಮ ಅವಶ್ಯಕತೆಗೆ ತಕ್ಕಂತೆ ಬದಲಾಗುತ್ತದೆ. ಆಗ ನಾವು ದುರ್ಲಭವನ್ನೂ ಕೂಡ ಸಾಧಿಸಿಕೊಳ್ಳಬಹುದು.ಆದರೆ ಸಂಕಲ್ಪ ಧೃಢವಾಗಿರಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

    Click Here

    Call us

    Click Here

    ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಅಗ್ನಿ ಹಾಗೂ ಪ್ರಾಣಾಯಾಮಗಳು ಆಹಾರಕ್ಕೆ ಪೂರಕ ವಿಚಾರಗಳಾಗಿದ್ದು, ಪೀಠಿಕೆಯಿಲ್ಲದೇ ಪಾಠವಿಲ್ಲ ಎಂಬಂತೆ ಅಗ್ನಿಯ ಅರಿವಿಲ್ಲದೇ ಆಹಾರವನ್ನು ತಿಳಿದುಕೊಳ್ಳಲಾಗದು.

    ಹಸಿವು ಗೊತ್ತಾಗದವನಿಗೆ ಊಟದ ಸ್ವಾಧ ಗೊತ್ತಾಗದು. ಹಾಗೆಯೇ ಅಗ್ನಿಯನ್ನು ಸಮರ್ಪಕವಾಗಿ ತಿಳಿದುಕೊಳ್ಳದೇ ಇದ್ದರೆ ಆಹಾರದ ವಿಚಾರವನ್ನು ಸಂಪೂರ್ಣವಾಗಿ ತಿಳಿದುಕೊಂಡಂತಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಆಹಾರದ ಪ್ರವಚನ ಸರಣಿಯಲ್ಲಿ ಅಗ್ನಿಯ ಕುರಿತಾದ ವಿಚಾರಗಳನ್ನು ಪ್ರಸ್ತಾಪಿಸಲಾಯಿತು ಎಂದು ಹೇಳಿದರು. 

    ಬಾವಿಯನ್ನು ತೋಡುವಾಗ ಎಲ್ಲಾ ಕಡೆ 5 – 10 ಅಡಿಗಳ ಗುಂಡಿಯನ್ನು ತೋಡಿದರೆ ನೀರು ಸಿಗುವುದಿಲ್ಲ. ಸರಿಯಾದ ಒಂದೇ ಜಾಗದಲ್ಲಿ ಆಳವಾದ ಗುಂಡಿಯನ್ನು ತೆಗೆದಾಗ ಬಾವಿಯಲ್ಲಿ ನೀರು ಸಿಗುತ್ತದೆ. ಆಧುನಿಕತೆಯ ಭರಾಟೆಯಲ್ಲಿ ನಾವು ಯಾವುದೇ ವಿಷಯದಲ್ಲಿ ಆಳಕ್ಕೆ ಇಳಿಯುತ್ತಿಲ್ಲ. ಹಲವಾರು ವಿಷಯಗಳನ್ನು ಕೇವಲ ಸ್ಪರ್ಶಿಸುತ್ತಿದ್ದೇವೆ. ಆದರೆ ಯಾವುದರಲ್ಲಿಯೂ ತಳಸ್ಪರ್ಶಿಯಾಗುತ್ತಿಲ್ಲ. ಯಾವುದಾದರೂ ಒಂದು ವಿಷಯದಲ್ಲಿ ಸ್ಥಿರವಾದ ಗಮನವನ್ನು ನೆಲೆನಿಲ್ಲಿಸಿದಾಗ ಸಾಕ್ಷಾತ್ಕಾರವನ್ನು ಹೊಂದಬಹುದು ಎಂದು ಅಭಿಪ್ರಾಯಪಟ್ಟರು.

    ದೇಹದಲ್ಲಿ ಚಟುವಟಿಕೆಗಳು ಕಡಿಮೆ ಇದ್ದಾಗ ಕಡಿಮೆ ಆಹಾರ ಸಾಕು. ಕಾರ್ಯಚಟುವಟಿಕೆ ಹೆಚ್ಚಿದ್ದಾಗ ಆಹಾರದ ಅವಶ್ಯಕತೆಯೂ ಸಹಜವಾಗಿ ಹೆಚ್ಚಾಗುತ್ತದೆ. ಧ್ಯಾನಮಾರ್ಗದಲ್ಲಿ ಸಾಗುವಾಗಲೂ ಕಡಿಮೆ ಆಹಾರ ಸಾಕಾಗುತ್ತದೆ. ಬಾಹ್ಯ ಚಟುವಟಿಕೆಗಳು ಇಲ್ಲದೇ ಇರುವುದರಿಂದ ಸಮಾಧಿ ಸ್ಥಿತಿಯ ಪೂರ್ವದಲ್ಲಿ ಗಾಳಿ ಮಾತ್ರವೂ ಸಾಕಾಗಬಹುದು. ಸಮಾಧಿ ಸ್ಥಿತಿಯಲ್ಲಿ ಉಸಿರಾಟವಾಗಲಿ, ಹೃದಯ ಬಡಿತವಾಗಲಿ ಯಾವುದೂ  ಇರುವುದಿಲ್ಲ. ಹಾಗಾಗಿ ಯಾವುದೇ ಆಹಾರವಿಲ್ಲದೇ ಜೀವಿ ಬದುಕಿರುತ್ತಾನೆ. ತಪಸ್ಸು ಎನ್ನುವಾಗ ದೇಹದ ಬಾಹ್ಯ ಚಟುವಟಿಕೆಗಳು ಕಡಿಮೆಯಾಗುತ್ತದೆ, ಮನಸ್ಸು ಮಾತ್ರ ದೇವರ ಕಡೆಗೆ ಏಕಾಗ್ರವಾಗುತ್ತದೆ. ಏಕಾಗ್ರತೆ ಹೆಚ್ಚಾಗುತ್ತಾ ಹೊದಂತೆ ದೇವರನ್ನು ಸಾಕ್ಷಾತ್ಕರಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

    Click here

    Click here

    Click here

    Call us

    Call us

    ಉದ್ಯಮಿ ಗೋಪಾಲಕೃಷ್ಣ ಭಟ್ ದ್ವಾರಕಾ ಕುಟುಂಬದವರು ಗುರುಭಿಕ್ಷಾ ಸೇವೆ ಸಮರ್ಪಿಸಿದರು. ಡಾ. ವೈ. ವಿ ಕೃಷ್ಣಮೂರ್ತಿ , ಉದ್ಯಮಿ ವಿನಾಯಕ ಹೆಗಡೆ ಕಟ್ಟೆ,  ಗಣೇಶ ಆರ್ಕೊಡ್ಲು, ವೇ.ಮೂ. ಮಂಜುನಾಥ ಭಟ್ ಅಗ್ನಿಹೋತ್ರಿ, ಲೋಹಿತ ಹೆಬ್ಬಾರ್, ಹರೀಶ್ ಹೆಗಡೆ, ದಿನಪ್ರಧಾನರಾಗಿ ಕೊಲ್ಲಂಪಾರೆ ನಾರಾಯಣ ಭಟ್ ದಂಪತಿಗಳು, ನಿವೃತ್ತ ಪೋಲಿಸ್ ಅಧಿಕಾರಿ ಎನ್. ಆರ್. ಮುಕ್ರಿ, ಶಿವು ಮುಕ್ರಿ, ಅಣ್ಣಪ್ಪ ಮುಕ್ರಿ, ಎಮ್. ಡಿ. ಮುಕ್ರಿ ಸೇರಿದಂತೆ ನೂರಾರು ಮುಕ್ರಿ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

    ಹಿಂದೂ ಮುಕ್ರಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ:
    ಕಳೆದ ದಶಕದಲ್ಲಿ ಮುಕ್ರಿ ಸಮಾಜದವರು ಶ್ರೀಮಠದ ಮಾರ್ಗದರ್ಶನವನ್ನು ಬಯಸಿಬಂದಾಗ, “ಹರಿಜನರು ಗುರುಜನರೂ ಹೌದು” ಎಂದು ಅವರನ್ನು ಶ್ರೀಗಳು ಶಿಷ್ಯಭಾವದಲ್ಲಿ ಆಶೀರ್ವದಿಸಿದ್ದರು. ಅಂದಿನಿಂದಲೂ ಹಿಂದೂ ಮುಕ್ರಿ ಸಮಾಜದವರು ಶ್ರೀಮಠಕ್ಕೆ ನಡೆದುಕೊಳ್ಳುತ್ತಿದ್ದು, ಸಮಾಜದವರೆಲ್ಲರೂ ಒಟ್ಟಾಗಿ ಬಂದು ಚಾತುರ್ಮಾಸ್ಯದಲ್ಲಿ  ಸ್ವರ್ಣಪಾದುಕಾ ಪೂಜೆಯನ್ನು ನೆರವೇರಿಸಿದರು. ಸಮಾಜವನ್ನು ಅನುಗ್ರಹಿಸಿ ಮಾತನಾಡಿದ ಶ್ರೀಗಳು, ಆರ್ಥಿಕವಾಗಿ ಹಿಂದುಳಿದ ಸಮಾಜವಾದ ಮುಕ್ರಿಗಳು ಪ್ರಗತಿಯನ್ನು ಸಾಧಿಸುವಂತಾಗಬೇಕು. ಗುರುಪರಂಪರೆಯ ಅನುಗ್ರಹದಿಂದ ಮುಕ್ರಿಗಳ ಜೀವನ ಸುಖ ಸಮೃದ್ಧಿಯನ್ನು ಕಾಣುವಂತಾಗಲಿ. ಕುಮಟಾದಲ್ಲಿ ಮುಕ್ರಿ ಸಮಾಜ ಭವನ ನಿರ್ಮಾಣದ ಕಾರ್ಯ ಪ್ರಗತಿಯಲ್ಲಿರುವುದ್ದು, ಇದು ಆದಷ್ಟು ಶೀಘ್ರವಾಗಿ ಪೂರ್ಣಗೊಂಡು ಸಮಾಜದ ಬಳಕೆಗೆ ಲಭಿಸುವಂತಾಗಲಿ. ಇದಕ್ಕೆ ಶ್ರೀಮಠದ ಆಶೀರ್ವಾದ ಇರಲಿದೆ ಎಂದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಪದಗ್ರಹಣ

    28/08/2026

    ಚೆನ್ನಿಮಣಿ 2026 ಅಂತರ್ ತರಗತಿ ಕುಂದಗನ್ನಡ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

    28/08/2026

    ಭಂಡಾರ್ಕಾರ್ಸ್ ಕಾಲೇಜು: ಸಾಂಪ್ರದಾಯಿಕ ದಿನಾಚರಣೆ

    28/08/2026
    Leave A Reply Cancel Reply

    4 × two =

    Call us

    Click Here

    Call us

    Call us

    Call us
    Highest Viewed Recently
    • ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಪದಗ್ರಹಣ
    • ಚೆನ್ನಿಮಣಿ 2026 ಅಂತರ್ ತರಗತಿ ಕುಂದಗನ್ನಡ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ
    • ಭಂಡಾರ್ಕಾರ್ಸ್ ಕಾಲೇಜು: ಸಾಂಪ್ರದಾಯಿಕ ದಿನಾಚರಣೆ
    • ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು: ಶ್ರೀ ರಾಘವೇಶ್ವರ
    • ಗಂಗೊಳ್ಳಿ: ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.