ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇನ್ನೊಬ್ಬರ ಸೇವೆಯಲ್ಲಿ ನಾವು ಸುಖವನ್ನು ಕಾಣಬೇಕು. ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಬೆಳೆಸಿಕೊಂಡು ಮುಂದೆ ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಬೇಕು. ಅದಕ್ಕಾಗಿ ಇಂಟರ್ಯಾಕ್ಟ್ ಕ್ಲಬ್ ಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಅಧ್ಯಕ್ಷ ಸಚಿನ್ ಕುಮಾರ್ ಶೆಟ್ಟಿ ನುಡಿದರು.
ಅವರು ಇಲ್ಲಿನ ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ ನೆರವೇರಿಸಿ ಮಾತನಾಡಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯ ಸಹಕಾರವನ್ನು ಸ್ಮರಿಸಿದರು.
ಕಳೆದ ಸಾಲಿನಲ್ಲಿ ಎಸ್ಎಸ್ಎಲ್ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಂಗೀತಾ ಮತ್ತು ಅನುದೀಪ ಇವರನ್ನು ನಗದು ಬಹಮಾನ ನೀಡಿ ಪುರಸ್ಕರಿಸಿದರು. ವಿಜಯ ಕರ್ನಾಟಕ ದಿನ ಪತ್ರಿಕೆಯವರು ಪ್ರಕಟಿಸುವ ಶೈಕ್ಷಣಿಕ ವಿದ್ಯಾರ್ಥಿ ಸಂಚಿಕೆಯನ್ನು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ ಉಚಿತವಾಗಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಅಂಪಾರು, ಇಂಟರ್ಯಾಕ್ಟ್ ಚೇರ್ ಮನ್ ನಿರಂಜನ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷ ಸುನಿಲ್ ಶೆಟ್ಟಿ, ನಳಿನ್ ಕುಮಾರ್ ಶೆಟ್ಟಿ, ಸದಾನಂದ ಶೆಟ್ಟಿ, ಶ್ರೀಕಾಂತ್ ಶೆಟ್ಟಿ ಹಾಗೂ ವಿಜಯ ಕರ್ನಾಟಕ ದಿನಪತ್ರಿಕೆಯ ವರದಿಗಾರ ಗಣೇಶ್ ಬೀಜಾಡಿ, ಮುಖ್ಯೋಪಾಧ್ಯಾಯ ಉದಯ್ ಕುಮಾರ್ ಶೆಟ್ಟಿ, ನೋಡಲ್ ಶಿಕ್ಷಕ ರಮೇಶ್ ಕುಲಾಲ್ ಎನ್ ಕಳೆದ ಸಾಲಿನ ಇಂಟರ್ಯಾಕ್ಟ್ ಅಧ್ಯಕ್ಷೆ ರಶ್ವಿತಾ ಆರ್ ಕುಲಾಲ್, ಕಾರ್ಯದರ್ಶಿ ಭವಿಷ್, ನೂತನ ಅಧ್ಯಕ್ಷೆ ತ್ರಿಶಾ ಕೆ. ಶೆಟ್ಟಿ, ಕಾರ್ಯದರ್ಶಿ ಗಂಗಾ ಎಸ್., ಶಿಕ್ಷಕರಾದ ಅನಿತಾ ಶೆಟ್ಟಿ, ದೀಪಾವತಿ, ಗೀತಾ, ರತ್ನಾ, ವಸುಧಾ, ಸಂಧ್ಯಾ, ಚಂದ್ರಶೇಖರ್ ಪಿ.ವಿ. ಉಪಸ್ಥಿತರಿದ್ದರು.
















