ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಜನಾಂಗದವರಿAದ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ, ವಿದೇಶಿ ವಿದ್ಯಾಭ್ಯಾಸ ಸಾಲ, ಸ್ವಾವಲಂಬಿ ಸಾರಥಿ, ವ್ಯಾಪಾರ ಉದ್ದಿಮೆಗಳಿಗೆ ನೇರಸಾಲ, ಸಾಂತ್ವನ ಯೋಜನೆ, ಸಿಖ್ಖ್ ಸಮುದಾಯದ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸಹಾಯಧನ ಸೌಲಭ್ಯ ಪಡೆಯಲು ವೆಬ್ಸೈಟ್ https://kmdconline.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 55 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), “ಮೌಲಾನಾ ಆಝಾದ್ ಭವನ” ಒಂದನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ಜಿಲ್ಲೆ, ಸಹಾಯವಾಣಿ ಸಂಖ್ಯೆ 8277799990 ಮತ್ತು ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ: 0820-2574990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕಚೇರಿ ಪ್ರಕಟಣೆ ತಿಳಿಸಿದೆ.











