ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಎಲ್ಲಾ ಭಾಷೆಯನ್ನು ಪ್ರೀತಿಸಿ, ಆ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬಹುದು. ಅಂತಯೇ ಎಲ್ಲಾ ಭಾರತೀಯ ಭಾಷೆಗಳ ಮೂಲವಾದ ಸಂಸ್ಕೃತ ಓದಲು ಮತ್ತು ಬರೆಯಲು ಕಷ್ಟವೆನಿಸಿದರೂ ದಿನಕ್ಕೊಂದು ಪದವನ್ನು ಕಲಿತರೆ ಸಂಸ್ಕೃತ ಭಾಷೆ ಕಲಿಯುವುದು ಅಸಾಧ್ಯವಲ್ಲ ಎಂದು ಕೋಟದ ವಿವೇಕ ಪದವಿ-ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಶ್ರೀ ಬಾಲಕೃಷ್ಣ ನಕ್ಷತ್ರಿ ಹೇಳಿದರು.
ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಂಸ್ಕೃತ ವಿಭಾಗ ಆಯೋಜಿಸಿದ ಸಂಸ್ಕೃತ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕೃತ ವಿಭಾಗದ ಮುಖ್ಯಸ್ಥೆ ಮೇಘಾ ಎಸ್. ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸ್ನೇಹ ಪ್ರಾರ್ಥಿಸಿ, ಸುಶ್ಮಿತಾ ಅತಿಥಿಗಳನ್ನು ಪರಿಚಯಿಸಿ, ಅಪೇಕ್ಷಾ ಸ್ವಾಗತಿಸಿ, ಶ್ರೇಯಾ ನಿರೂಪಿಸಿ, ಕೀರ್ತನಾ ವಂದಿಸಿದರು.











