Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಆಶ್ರಯದಲ್ಲಿ ರಕ್ಷಾ ಬಂಧನ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಆಶ್ರಯದಲ್ಲಿ ರಕ್ಷಾ ಬಂಧನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಬಂಧುತ್ವದ ಚಿಗುರೊಡೆಯಲು ಕಾರಣವಾದ ಬಹುಮುಖ್ಯವಾದ ಪವಿತ್ರವಾದ ಸಾಂಸ್ಕೃತಿಕ ಹಬ್ಬ ರಕ್ಷಾ ಬಂಧನ. ಪರಸ್ಪರ ಆಶ್ವಾಸನೆ, ವಿಶ್ವಾಸವನ್ನು ನೀಡುವ ಹಬ್ಬವೇ ರಕ್ಷಾಬಂಧನ. ರಕ್ಷಾ ಬಂಧನ ಕೇವಲ ಸಹೋದರ ಸಹೋದರಿಯರ ನಡುವೆ ಮಾತ್ರ ನಡೆಯುವ ಹಬ್ಬ ಅಲ್ಲ. ಜಾತಿ, ಮತ, ಧರ್ಮಗಳ ನಡುವೆ ಸ್ನೇಹಪೂರ್ವಕ ಸಂಕೇತವಾಗಿಯೂ ರಕ್ಷಾ ಬಂಧನ ಮಹತ್ವವನ್ನು ಪಡೆದುಕೊಂಡಿದೆ ಎಂದು ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ದಿವ್ಯಶ್ರೀ ರಾಘವೇಂದ್ರ ಹೇಳಿದರು.

    Click Here

    Call us

    Click Here

    ಅವರು ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಇದರ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಇದರ ಸಹಯೋಗದೊಂದಿಗೆ ಗಂಗೊಳ್ಳಿಯ ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ಟಿ.ವಿಮಲಾ ವಿ.ಪೈ ಸಭಾಂಗಣದಲ್ಲಿ ಶನಿವಾರ ಜರಗಿದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಬೌದ್ಧಿಕ್ ನೀಡಿ ಮಾತನಾಡಿದರು.

    ಎಲ್ಲರಲ್ಲಿಯೂ ಸಹೋದರತೆಯ ಬಂಧವನ್ನು ಬೆಸೆಯಲು, ಏಕತೆಯನ್ನು ಕಾಣಲು, ರಾಷ್ಟ್ರ ರಕ್ಷಣೆ ಮಾಡಲು ರಕ್ಷಾ ಬಂಧನವನ್ನು ಕಟ್ಟುತ್ತಾರೆ. ರಕ್ಷೆಯನ್ನು ಮನ:ಪೂರ್ವಕವಾಗಿ ಪ್ರೀತಿಯಿಂದ ಕಟ್ಟಿದರೆ ರಕ್ಷಣೆ ಸಿಗುವುದರಲ್ಲಿ ಸಂಶಯವಿಲ್ಲ. ಅದಕ್ಕೆ ಹಣದ ಶ್ರೀಮಂತಿಕೆ ಬೇಕಿಲ್ಲ, ಆಡಂಬರ ಬೇಕಿಲ್ಲ, ಉಡುಗೊರೆಯೂ ಮುಖ್ಯವಲ್ಲ. ನಾವೆಲ್ಲರೂ ಪರಸ್ಪರ ಪ್ರೀತಿಯಿಂದ ಒಬ್ಬರನ್ನೊಬ್ಬರು ರಕ್ಷಿಸೋಣ ಎಂದು ಅವರು ಹೇಳಿದರು.

    ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಅಧ್ಯಕ್ಷ ಬಿ.ರಾಘವೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷೆ ಮಾಲಾಶ್ರೀ ಖಾರ್ವಿ ಮತ್ತು ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ದೀಕ್ಷಿತ್ ಮೇಸ್ತ ಶುಭಾಶಂಸನೆಗೈದರು. ಶಿಶು ಮಂದಿರದ ಸದಸ್ಯರಾದ ಉಷಾ ಪಿ.ಮಡಿವಾಳ, ವಿಜಯಶ್ರೀ ವಿ.ಆಚಾರ್ಯ, ವಸಂತಿ ಎನ್.ಖಾರ್ವಿ, ಗಾಯತ್ರಿ ಕೊಡಂಚ, ಮಾತಾಜಿ ಪ್ರೇಮಾ, ಸಹಾಯಕಿ ರತ್ನ, ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

    ಬಿ.ರಾಘವೇಂದ್ರ ಪೈ ಸ್ವಾಗತಿಸಿದರು. ಶಿಶು ಮಂದಿರದ ಸಂಚಾಲಕ ಡಾ.ಕಾಶೀನಾಥ ಪೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿ.ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಅಶ್ವಿತಾ ಜಿ.ಪೈ ವಂದಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೀಜಾಡಿ ಅಶಕ್ತ ಕುಟುಂಬದ ಬ್ಯಾಂಕ್ ಸಾಲ ಕಟ್ಟಿ ಮಾನವೀಯತೆ ಮೆರೆದ ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್

    29/08/2026

    ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ

    29/08/2026

    ಅನ್ನವೇ ದೇವರು, ಓಜಸ್ಸೇ ಜೀವಾಳ: ಶ್ರೀ ರಾಘವೇಶ್ವರ

    29/08/2026
    Leave A Reply Cancel Reply

    sixteen + 11 =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಆಶ್ರಯದಲ್ಲಿ ರಕ್ಷಾ ಬಂಧನ
    • ಬೀಜಾಡಿ ಅಶಕ್ತ ಕುಟುಂಬದ ಬ್ಯಾಂಕ್ ಸಾಲ ಕಟ್ಟಿ ಮಾನವೀಯತೆ ಮೆರೆದ ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ
    • ಅನ್ನವೇ ದೇವರು, ಓಜಸ್ಸೇ ಜೀವಾಳ: ಶ್ರೀ ರಾಘವೇಶ್ವರ
    • ಶ್ರೀ ಮಹಾಕಾಳಿ ದೇವಸ್ಥಾನದ ವತಿಯಿಂದ ಸಮುದ್ರ ಪೂಜೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.