Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಪಶು ವೈದ್ಯಕೀಯ ಶಿಬಿರ ಕಚೇರಿಯಲ್ಲಿ ಡಾ. ಪೂಜಿತಾ ಅವರಿಗೆ ಬೀಳ್ಕೊಡುಗೆ ಸಮಾರಂಭ
    ಊರ್ಮನೆ ಸಮಾಚಾರ

    ಕುಂದಾಪುರ ಪಶು ವೈದ್ಯಕೀಯ ಶಿಬಿರ ಕಚೇರಿಯಲ್ಲಿ ಡಾ. ಪೂಜಿತಾ ಅವರಿಗೆ ಬೀಳ್ಕೊಡುಗೆ ಸಮಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಕುಂದಾಪುರ ತಾಲೂಕು ಪಶು ವೈದ್ಯಕೀಯ ಶಿಬಿರ ಕಚೇರಿಯಲ್ಲಿ ಪಶು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಪೂಜಿತಾ ಅವರಿಗೆ, ಕುಂದಾಪುರ ತಾಲೂಕು ಶಿಬಿರ ಕಚೇರಿ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಕೃತಕ ಗರ್ಭಧಾರಣಾ ಕಾರ್ಯಕರ್ತರು ಹಾಗೂ ಮುಖ್ಯ ಕಾರ್ಯನಿರ್ವಾಹಕರ ವತಿಯಿಂದ ಆತ್ಮೀಯ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.

    Click Here

    Call us

    Click Here

    ಕುಂದಾಪುರ ತಾಲೂಕು ಹಾಲು ಉತ್ಪಾದಕರ ಸಹಕಾರಿ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ರಾಘವೇಂದ್ರ ಕೊಮೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಎಸ್. ದಯಾನಂದ ರಾವ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಪಶುವೈದ್ಯೆ ಡಾ. ಶ್ರದ್ಧಾ, ಕಾರ್ಯದರ್ಶಿ ಯೋಗೇಶ್ ಬಳ್ಕೂರು ಹಾಗೂ ಕೋಶಾಧಿಕಾರಿ ರವಿರಾಜ್ ಬಸ್ರೂರು ಉಪಸ್ಥಿತರಿದ್ದರು.

    2024ರಿಂದ ಕುಂದಾಪುರ ಪಶುವೈದ್ಯಕೀಯ ಶಿಬಿರ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಡಾ. ಪೂಜಿತಾ ಅವರು ಮೂಲತಃ ಆಂಧ್ರಪ್ರದೇಶದವರಾಗಿದ್ದು, ಕುಂದಾಪುರಕ್ಕೆ ಆಗಮಿಸಿದ ಅಲ್ಪಾವಧಿಯಲ್ಲಿಯೇ ಸ್ಥಳೀಯ ಕುಂದಾಪ್ರ ಭಾಷೆಯನ್ನು ಕಲಿತುಕೊಂಡಿದ್ದರು. ರೈತರ ಮನೆಮನೆಗೆ ಭೇಟಿ ನೀಡಿ ಪಶುಗಳ ಆರೋಗ್ಯ ರಕ್ಷಣೆ, ಚಿಕಿತ್ಸಾ ಸೇವೆ ಹಾಗೂ ಪಶುಪಾಲಕರಿಗೆ ಅಗತ್ಯವಾದ ಮಾರ್ಗದರ್ಶನ ನೀಡುವ ಮೂಲಕ ಉತ್ತಮ ಸೇವೆ ಸಲ್ಲಿಸಿದ್ದರು. ತಮ್ಮ ಸರಳ, ಸೌಜನ್ಯಯುತ ವ್ಯಕ್ತಿತ್ವ ಹಾಗೂ ಸೇವಾ ಮನೋಭಾವದಿಂದ ರೈತರು ಮತ್ತು ಸಹಕಾರಿ ಸಂಘಗಳ ಸಿಬ್ಬಂದಿಗಳೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು ಎಂದು ಗಣ್ಯರು ಪ್ರಶಂಸಿಸಿದರು.

    ವೆಂಕಟೇಶ್ ಕಿಣಿ ಕಟ್ ಬೇಲ್ತೂರು, ಸತೀಶ್ ಶೆಟ್ಟಿ ಬೇಳೂರು, ರಾಜು ಬೀಜಾಡಿ, ದೇವೇಂದ್ರ ಕಂದಾವರ, ಯಶೋಧ ಜಪ್ತಿ ಹಾಗೂ ರಮೇಶ್ ಬಸ್ರೂರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಕೃತಕ ಗರ್ಭಧಾರಣಾ ಕಾರ್ಯಕರ್ತರು ಹಾಗೂ ವಿವಿಧ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಾಹಕರು ಉಪಸ್ಥಿತರಿದ್ದು, ಡಾ. ಪೂಜಿತಾ ಅವರ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ದೇವರಾಜ್ ತಲ್ಲೂರು ಕಾರ್ಯಕ್ರಮ ನಿರೂಪಿಸಿದರು. ಶ್ರೀಕಾಂತ್ ವಂದಿಸಿದರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಆಶ್ರಯದಲ್ಲಿ ರಕ್ಷಾ ಬಂಧನ

    29/08/2026

    ಬೀಜಾಡಿ ಅಶಕ್ತ ಕುಟುಂಬದ ಬ್ಯಾಂಕ್ ಸಾಲ ಕಟ್ಟಿ ಮಾನವೀಯತೆ ಮೆರೆದ ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್

    29/08/2026

    ಅನ್ನವೇ ದೇವರು, ಓಜಸ್ಸೇ ಜೀವಾಳ: ಶ್ರೀ ರಾಘವೇಶ್ವರ

    29/08/2026
    Leave A Reply Cancel Reply

    nine − 1 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ಪಶು ವೈದ್ಯಕೀಯ ಶಿಬಿರ ಕಚೇರಿಯಲ್ಲಿ ಡಾ. ಪೂಜಿತಾ ಅವರಿಗೆ ಬೀಳ್ಕೊಡುಗೆ ಸಮಾರಂಭ
    • ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಆಶ್ರಯದಲ್ಲಿ ರಕ್ಷಾ ಬಂಧನ
    • ಬೀಜಾಡಿ ಅಶಕ್ತ ಕುಟುಂಬದ ಬ್ಯಾಂಕ್ ಸಾಲ ಕಟ್ಟಿ ಮಾನವೀಯತೆ ಮೆರೆದ ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ
    • ಅನ್ನವೇ ದೇವರು, ಓಜಸ್ಸೇ ಜೀವಾಳ: ಶ್ರೀ ರಾಘವೇಶ್ವರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.