ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮವು ಹೆಸ್ಕುತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಟಿ. ರಾಜೀವ್ ಶೆಟ್ಟಿ ಅವರು ಸಂಚಾರ ನಿಯಮ ಪಾಲನೆಯ ಮಹತ್ವವನ್ನು ವಿವರಿಸಿದರು. ಮುಖ್ಯ ಅತಿಥಿ ನಿವೃತ್ತ ಎಆರ್ಟಿಒ ವಿಶ್ವನಾಥ ನಾಯಕ್ ಅವರು ವೀಡಿಯೊ ಪ್ರದರ್ಶನದ ಮೂಲಕ ರಸ್ತೆ ಸುರಕ್ಷತಾ ನಿಯಮಗಳು ಮತ್ತು ಜವಾಬ್ದಾರಿಯುತ ಚಾಲನೆಯ ಕುರಿತು ಮಾಹಿತಿ ನೀಡಿದರು.
ಮುಖ್ಯೋಪಾಧ್ಯಾಯ ಅಬ್ದುಲ್ ರವೂಫ್ ಸ್ವಾಗತಿಸಿದರು. ಶಿಕ್ಷಕ ರಾಘವೇಂದ್ರ ದೇವಾಡಿಗ ನಿರೂಪಿಸಿದರು. ಸುಮಾರು 125 ವಿದ್ಯಾರ್ಥಿಗಳು ಭಾಗವಹಿಸಿದರು.
ಜಗದೀಶ್ ಎಚ್., ವಿಠ್ಠಲ್ ರಾವ್, ಟಿ. ಸುಧಾಕರ್ ಶೆಟ್ಟಿ, ಸಹಾಯಕ ಗವರ್ನರ್ ಚಂದ್ರಶೇಖರ್ ಶೆಟ್ಟಿ, ಜಂಟಿ ಕಾರ್ಯದರ್ಶಿ ನಿತ್ಯಾನಂದ ಕೋಟಾರಿ ಹಾಗೂ ಕಲಿಕಾ ಸಹಾಯಕ ಸುರೇಶ್ ಬೇಳೂರು ಉಪಸ್ಥಿತರಿದ್ದರು. ಶಿಕ್ಷಕ ಗೋಪಾಲ್ ಸೋಮಯಾಜಿ ವಂದಿಸಿದರು. ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಮೂಡಿಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.
















