ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಯೋಗ ಮತ್ತು ಆರೋಗ್ಯ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾದ ನಿವೃತ್ತ ಕನ್ನಡ ಶಿಕ್ಷಕ ಕರುಣಾಕರ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಅಷ್ಟಾಂಗ ಯೋಗದ ಬಗ್ಗೆ ವಿವರಿಸಿ, ಪ್ರಾತ್ಯಕ್ಷಿಕೆಯೊಂದಿಗೆ ಯೋಗದ ಮಹತ್ವ ಮತ್ತು ವಿವಿಧ ಆಸನಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಉಪನ್ಯಾಸಕರಾದ ಚಂದ್ರಶೇಖರ್ ಅವರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಘಟಕ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಸಂಚಾಲಕರಾದ ರಾಜೇಶ್ ಹೆಬ್ಬಾರ್ ಉಪನ್ಯಾಸಕರು, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹ ಕಾರ್ಯಕ್ರಮ ಅಧಿಕಾರಿ ಸುಕೇಶ್ ಚಂದ್ರಶೇಖರ್, ರೆಡ್ ಕ್ರಾಸ್ ಘಟಕದ ಅಧ್ಯಕ್ಷ ಆಸ್ತಿಕ್ ಆರ್ ಗಾಣಿಗ ಮತ್ತು ಕಾರ್ಯದರ್ಶಿ ವೈಷ್ಣವಿ ಬಿಲ್ಲವ, ಬಾಯ್, ಭಾರತೀಯ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು, ಎನ್ಎಸ್ಎಸ್ ಸ್ವಯಂಸೇವಕರು, ರೇಂಜರ್ಸ್ ಮತ್ತು ಲವರ್ಸ್ ಘಟಕದ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.











