ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಹೊಸದು ಹಾಗೂ ನವೀಕರಣ ಅರಿವು – ಶೈಕ್ಷಣಿಕ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಾಂಗ ಯೋಜನೆ, ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆ ಹಾಗೂ ಹೊಲಿಗೆ ಯಂತ್ರ / ಝೀಗ್ ಝ್ಯಾಗ್ ಯೋಜನೆಯಡಿ ಸಹಾಯಧನ ಹಾಗೂ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ನಡಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kvcdcl.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸಂಖ್ಯೆ: 080-22374848 / 7899899039 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ದೂ.ಸಂಖ್ಯೆ: 0820-2574882 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.











