Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ: ಶ್ರೀ ರಾಘವೇಶ್ವರ
    ಊರ್ಮನೆ ಸಮಾಚಾರ

    ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ: ಶ್ರೀ ರಾಘವೇಶ್ವರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗೋಕರ್ಣ:
    ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಸರ್ಗವನ್ನು ಹೊಂದಿರುವ ನೀರು ಮಾತ್ರ ಬಳಕೆಗೆ ಯೋಗ್ಯ. ಸೂರ್ಯ ಕಿರಣ ಕ್ರಿಮಿ ನಾಶಕ ಹಾಗೂ ಜೀವ ಚೈತನ್ಯದ ಸೆಲೆಯಾದರೆ, ಚಂದ್ರ ಕಿರಣ ನೀರಿಗೆ ತಂಪು ನೀಡುವ ಜೊತೆಗೆ ಔಷಧೀಯ ಗುಣಗಳನ್ನು ತುಂಬುತ್ತದೆ ಹಾಗೂ ವಾಯುವಿನಿಂದಾಗಿ ನೀರು ಸ್ವಯಂ ಶುದ್ಧಿಯನ್ನು ಹೊಂದುತ್ತದೆ. ಹಾಗಾಗಿ ಸೂರ್ಯ, ಚಂದ್ರ ಮತ್ತು ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

    Click Here

    Call us

    Click Here

    ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಬುಧವಾರ ರಂದು ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ನದಿ ನೀರಿನ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಇಂದು ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಪರ್ಕ ಇಲ್ಲದ ನೀರನ್ನೇ ನಾವು ಬಳಸುತ್ತಿದ್ದೇವೆ.

    ಸೂರ್ಯನ ಬೆಳಕು ಬೀಳದಂತೆ ಸಿಮೆಂಟು ಅಥವಾ ಪ್ಲಾಸ್ಟಿಕ್ ಟ್ಯಾಂಕುಗಳಲ್ಲಿ ನೀರನ್ನು ಸಂಗ್ರಹಿಸಿ, ಪ್ಲಾಸ್ಟಿಕ್ ಪೈಪುಗಳಲ್ಲಿ ತಂದು ನೀರನ್ನು ಬಳಸುತ್ತಿದ್ದೇವೆ. ಆಧುನಿಕ ವಿಜ್ಞಾನ ಸೂರ್ಯನ ಸಂಪರ್ಕಕ್ಕೆ ಬಂದ ನೀರಿನಲ್ಲಿ ಜೈವಿಕ ಕ್ರಿಯೆ ನಡೆದು ನೀರು ಬಳಕೆಗೆ ಅಯೋಗ್ಯವಾಗುತ್ತದೆ ಎಂದು ಹೇಳುತ್ತದೆ. ಆದರೆ ಅಧುನಿಕ ವಿಜ್ಞಾನದ ಈ ಸೂತ್ರಕ್ಕೆ ವಿರುದ್ಧವಾಗಿಯೇ ಇಲ್ಲಿಯ ವರೆಗಿನ ಮನುಷ್ಯಕುಲ ಬದುಕಿದೆ.  ಸೂರ್ಯ – ಚಂದ್ರ – ಗಾಳಿಯ ಸಂಪರ್ಕಕ್ಕೆ ಬಂದ ನೀರನ್ನು ಕುಡಿದೇ ಯುಗಯುಗಾಂತರಗಳಿಂದ ನಮ್ಮ ಪೂರ್ವಜರು ಬದುಕಿದ್ದಾರೆ. ಹಾಗಾಗಿ ಈ ಆಧುನಿಕ ಚಿಂತನೆಯನ್ನು ಮತ್ತು  ನಾವು ಕುಡಿಯುವ ನೀರನ್ನು ಒಮ್ಮೆ ಅವಲೋಕಿಸಬೇಕಿದೆ ಎಂದು ಕರೆ ನೀಡಿದರು.

    ಕಳೆದ 50 ವರ್ಷಗಳನ್ನು ಗಮನಿಸಿದರೆ ಆಧುನಿಕ ಚಿಂತನೆಗಳಲ್ಲಿ ಅನೇಕ ಬದಲಾವಣೆಗಳನ್ನು ಕಾಣಬಹುದು. ಹತ್ತು ವರ್ಷಗಳ ಹಿಂದೆ ಇದು ಆರೋಗ್ಯಕರ ಎಂದಿದ್ದನ್ನೇ ಇಂದು ಅನಾರೋಗ್ಯಕರ ಎನ್ನಲಾಗುತ್ತದೆ. ಇದಕ್ಕೆ ಅನೇಕ ಉದಾಹರಣೆಗಳನ್ನು ನೀಡಬಹುದು. ಆದರೆ ಭಾರತೀಯ ಪರಂಪರೆ ಹೀಗೆ ಬದಲಾಗುವುದಲ್ಲ. ಅದು  ಸಾರ್ವಕಾಲಿಕ ಸತ್ಯ. ಐದು ಹತ್ತು ವರ್ಷಗಳಿಗೊಮ್ಮೆ ಬದಲಾಗುವ ಆಧುನಿಕ ಚಿಂತನೆಯನ್ನು ನಂಬಿ ನಮ್ಮ ಜೀವನ ಕ್ರಮವನ್ನು ಬದಲಾಯಿಸಿಕೊಂಡರೆ ನಮ್ಮ ಜೀವನವನ್ನು ಅಪಾಯಕ್ಕೆ ತೆರೆದುಕೊಂಡಂತೆ ಎಂದು ಸಮಾಜವನ್ನು ಎಚ್ಚರಿಸಿದರು.

    ಆಯುರ್ವೇದದಲ್ಲಿ ಹಿಮ ಕರಗಿದ ನೀರು, ಇಬ್ಬನಿಯ ನೀರು, ಕ್ಷಣ ಮಾತ್ರ ಬಂದು ಹೋಗುವ ಮಳೆಯ ನೀರು,  ವೇಗವಾಗಿ ಮತ್ತು ನಿಧಾನವಾಗಿ ಹರಿಯುವ ನದಿಯ ನೀರು, ಕಲ್ಲಿನ ಮೇಲೆ ಮತ್ತು ಮರಳಿನ ಮೇಲೆ ಹರಿಯುವ ನೀರು ಹಾಗೂ ಮಳೆಗಾಲದಲ್ಲಿ ಮಾತ್ರ ಹರಿಯು ನದಿಗಳ ನೀರು ಸೇರಿದಂತೆ ಅನೇಕ ವಿಧಗಳ ಕುರಿತಾಗಿ ಸವಿಸ್ತಾರವಾಗಿ ಚರ್ಚಿಸಿದ್ದು, ಸುಶ್ರುತರು ಬೇರೆಬೇರೆ ದಿಕ್ಕುಗಳಿಗೆ ಹರಿಯುವ ಹಾಗೂ ಬೇರೆಬೇರೆ ಪರ್ವತಗಳಿಂದ ಉಗಮಿಸುವ ನದಿಯ ನೀರಿನ ಗುಣಾವಗುಣಗಳ ಕುರಿತಾಗಿ ವಿಮರ್ಶಿಸಿದ್ದಾರೆ. ಇದು ಕುಡಿಯುವ ನೀರಿನ ಹಿಂದೆ ನಮ್ಮ ಪೂರ್ವಜರಲ್ಲಿದ್ದ ಅಪರಿಮಿತವಾದ ಚಿಂತನೆಯನ್ನು ಸೂಚಿಸುತ್ತದೆ ಎಂದು ವಿವರಿಸಿದರು.   

    Click here

    Click here

    Click here

    Call us

    Call us

    ನಾರಾಯಣ ಭಟ್ ಸಾದಂಗಾಯ ಕುಟುಂಬದವರು ಗುರುಭಿಕ್ಷಾ ಸೇವೆ ಸಮರ್ಪಿಸಿದರು. ಉದ್ಯಮಿ ನಿಡ್ಲೆ ರಾಮ ಭಟ್, ರವಿಶಂಕರ್ ಭಟ್ ಕಡತೋಕ, ಉದ್ಯಮಿ ಮುರಳೀಧರ್ ಪ್ರಭು, ಸುಬ್ರಾಯ್ ಭಟ್ ಕೊಣಾರೆ, ವಿ.ಎಮ್ ಹೆಗಡೆ ಆಲ್ಮನೆ, ದಿನಪ್ರಧಾನರಾಗಿ ಬಾಬು ಹೆಗಡೆ ಅಳವಳ್ಳಿ ದಂಪತಿಗಳು ಉಪಸ್ಥಿತರಿದ್ದರು.

    ಭೋವಿ ಸಮಾಜದಿಂದ ಸ್ವರ್ಣ ಪಾದುಕಾಪೂಜೆ:
    ಶ್ರೀಮಠಕ್ಕೆ ಪರಂಪರೆಯಿಂದ ನಡೆದುಕೊಳ್ಳುತ್ತಿರುವ ಭೋವಿ ಸಮಾಜದಿಂದ ಸ್ವರ್ಣ ಪಾದುಕಾಪೂಜೆ ನಡೆಯಿತು. ಪಾದುಕಾ ಪೂಜೆ ಸ್ವೀಕರಿಸಿ ಭೋವಿ ಸಮಾಜವನ್ನು ಶ್ರೀಗಳು ಆಶೀರ್ವದಿಸಿದರು.

    ಅನಂತ ಬೈಂದೂರು, ನರಸಿಂಹ ಅಂಕೋಲೆಕರ, ಚಂದ್ರಶೇಖರ ಸಿರಸಿ ಸೇರಿದಂತೆ ಸಮಾಜದ ಮುಖಂಡರು ಹಾಗೂ ಭಕ್ತರು ಉಪಸ್ಥಿತರಿದ್ದರು.

    ಆಧುನಿಕ ಚಿಂತನೆಗಳು ಸಿದ್ಧಾಂತವಲ್ಲ. ಬಹಳಷ್ಟು ಚರ್ಚೆಗಳು ನಡೆದು, ವಿಮರ್ಶೆಗಳ ನಂತರ ಸಿದ್ಧವಾಗುವುದಕ್ಕೆ ಸಿದ್ಧಾಂತ ಎಂದು ಹೆಸರು. ಸಿದ್ಧಾಂತ ಎಂಬುದು ಸಾರ್ವಕಾಲಿಕ ಸತ್ಯ. ಆಧುನಿಕ ಚಿಂತನೆಗಳಂತೆ ಅದು ಹತ್ತಾರು ವರ್ಷಗಳಿಗೊಮ್ಮೆ ಬದಲಾಗುವುದಲ್ಲ – ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೂಡ್ಲಕಟ್ಟೆ ಎಂಐಟಿಕೆ ಆವರಣದಲ್ಲಿ ಜಾಬ್ಸ್ ಎಕ್ಸ್ಪ್ರೆಸ್

    10/09/2026

    ಶಿರೂರು: ಸರಣಿ ಅಪಘಾತದಲ್ಲಿ ಬೈಕ್ ಸವಾರನ ಸಾವು. ಪೊಲೀಸ್ ವಾಹನ ಸೇರಿದಂತೆ ನಾಲ್ಕು ಬೈಕ್ ಜಖಂ

    10/09/2026

    ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    10/09/2026
    Leave A Reply Cancel Reply

    5 × two =

    Call us

    Click Here

    Call us

    Call us

    Call us
    Highest Viewed Recently
    • ಮೂಡ್ಲಕಟ್ಟೆ ಎಂಐಟಿಕೆ ಆವರಣದಲ್ಲಿ ಜಾಬ್ಸ್ ಎಕ್ಸ್ಪ್ರೆಸ್
    • ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ: ಶ್ರೀ ರಾಘವೇಶ್ವರ
    • ಶಿರೂರು: ಸರಣಿ ಅಪಘಾತದಲ್ಲಿ ಬೈಕ್ ಸವಾರನ ಸಾವು. ಪೊಲೀಸ್ ವಾಹನ ಸೇರಿದಂತೆ ನಾಲ್ಕು ಬೈಕ್ ಜಖಂ
    • ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್‌ ಶೆಟ್ಟಿಗೆ ವಿದ್ಯಾ ದೀವಿಗೆ ಪ್ರಶಸ್ತಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.