Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಯೇಟಿವ್ ಸ್ಫೂರ್ತಿಮಾತು: ನಾಡಿನ ಖ್ಯಾತ ಲೇಖಕ, ಚಿಂತಕ, ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಭಾಗಿ
    ಊರ್ಮನೆ ಸಮಾಚಾರ

    ಕ್ರಿಯೇಟಿವ್ ಸ್ಫೂರ್ತಿಮಾತು: ನಾಡಿನ ಖ್ಯಾತ ಲೇಖಕ, ಚಿಂತಕ, ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಭಾಗಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸ್ಫೂರ್ತಿ ಮಾತು ಕಾರ್ಯಕ್ರಮದ 18ನೇ ಸರಣಿಯಲ್ಲಿ “ಜೆನ್ ಜಿ: ಹೊಸ ಭಾರತದ ನವಶಕ್ತಿ” ಎಂಬ ವಿಷಯದ ಮೇಲೆ ನಾಡಿನ ಖ್ಯಾತ ಲೇಖಕ, ಚಿಂತಕ, ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಅವರು ಭಾಗವಹಿಸಿ ಮಾತನಾಡಿದರು.

    Click Here

    Call us

    Click Here

    ‘ಇಂದಿನ ಯುವಜನತೆ ಭಾರತೀಯ ಇತಿಹಾಸ ಮತ್ತು ಪರಂಪರೆಯನ್ನು ಮನೋಜ್ಞವಾಗಿ ಅರ್ಥೈಸಿಕೊಳ್ಳಬೇಕು. ಭಾರತೀಯ ನೆಲಮೂಲ ಸಂಸ್ಕೃತಿಯನ್ನು ಜಗತ್ತಿನೆಲ್ಲೆಡೆ ಪಸರಿಸುವ ಕಾರ್ಯಕ್ಕೆ ಮುಂದಾಗಬೇಕು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿಯೆ ತೊಡಗಿ ತಮ್ಮ ಅನನ್ಯ ಭವಿಷ್ಯ ಹಾಳು ಮಾಡಿಕೊಳ್ಳುವ ಬದಲು ಹೊಸ ಹೊಸ ಆವಿಷ್ಕಾರಗಳತ್ತ ಮುಖ ಮಾಡಬೇಕೆಂದು ತಿಳಿಸಿದರು. ಭಾರತದ ಅಸ್ತಿತ್ವ ಮತ್ತು ಅಸ್ಮಿತೆ ಉಳಿಯಬೇಕಾದರೆ ಜೆನ್-ಜಿ ಗಳ ಕೊಡುಗೆ ಅಮೂಲ್ಯ ಎನಿಸಿಕೊಳ್ಳುತ್ತದೆ. ಇಂದಿನ ಜಿನ್-ಜಿ ಗಳು ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ತಾತ್ವಿಕ ಚಿಂತನೆಗಳನ್ನು ಬದುಕಿಗೆ ಅಳವಡಿಸಿಕೊಳ್ಳುವುದರ ಮುಖೇನ ದೇಶದ ಹಿತ ಕಾಪಾಡಬೇಕು. ಭಾರತ ವಿರೋಧಿ ಕಾರ್ಯಗಳಿಂದ ದೂರವಿದ್ದು ದೇಶಕ್ಕೆ ಪೂರಕವಾದ ಕೆಲಸಗಳಲ್ಲಿ ತೊಡಗಬೇಕು. ಈಗಾಗಲೇ ತ್ಯಾಗ, ಬಲಿದಾನಗಳಿಂದ ಸುಭದ್ರವಾದ ರಾಷ್ಟ ನಿರ್ಮಾಣವಾಗಿದೆ,ಅದನ್ನು ಸರಿಯಾದ ಕ್ರಮದಲ್ಲಿ ಉಳಿಸಿಕೊಂಡು ಹೋಗುವುದು ಜಿನ್-ಜಿ ಗಳ ಹೊಣೆಯಾಗಬೇಕು.ನವ ಭಾರತ ನಿರ್ಮಾಣಕ್ಕೆ ಪಣತೊಟ್ಟ ಶಿಲ್ಪಿಗಳಂತೆ ತಮ್ಮ ಕಾರ್ಯ ಸಾಧನೆಯಲ್ಲಿ ಮುಳುಗಿರಬೇಕು ಎಂದರು.

    ನಿಜವಾದ ಶಿಕ್ಷಣ ಎಂದರೆ ವಿದ್ಯಾರ್ಥಿಗಳಲ್ಲಿರುವ ಸಾಮರ್ಥ್ಯವನ್ನು ಹೆಕ್ಕಿ ತೆಗೆದು ಅವರ ನೂತನ ಜೀವನಕ್ಕೆ ಭದ್ರ ಬುನಾದಿಯನ್ನು ಕಲ್ಪಿಸುವುದು ಎಂದರು. ಈ ಸಂದರ್ಭದಲ್ಲಿ ಮದನ್ ಲಾಲ್ ದಿಂಗ್ರ, ಪ್ರಜ್ಞಾನಂದ,ಗುಕೇಶ್, ವೇದಮೂರ್ತಿ ದೇವವ್ರತ ಮಹೇಶ್ ರೇಖೆ, ವಂದನ್ ಕುಮಾರ್ ಅವರಂಥ ಅಪ್ರತಿಮ ಸಾಧಕರ ಸಾಧನೆಯನ್ನು ನೆನಪಿಸಿಕೊಂಡರು.

    ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಮುಂದೊಂದು ದಿನ ನಳಂದ ವಿಶ್ವವಿದ್ಯಾಲಯದಂತೆ ಬೆಳೆಯಬೇಕೆಂಬ ಮಹತ್ವಕಾಂಕ್ಷೆಯನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಜೊತೆ ಮುಕ್ತ ಚರ್ಚೆಯಲ್ಲಿ ತೊಡಗಿ ಅವರ ಪ್ರಶ್ನೆಗಳಿಗೆ ಕೂಡ ಉತ್ತರವನ್ನು ನೀಡಿದರು.

    ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರುಗಳಾದ ವಿದ್ವಾನ್ ಗಣಪತಿ ಭಟ್, ಡಾ. ಗಣನಾಥ್ ಶೆಟ್ಟಿ, ಅಶ್ವತ್ ಎಸ್ ಎಲ್, ಆದರ್ಶ ಎಂ. ಕೆ., ಗಣಪತಿ ಭಟ್ ಕೆ. ಎಸ್., ಅಮ್ಮ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಅವಿನಾಶ್ ಶೆಟ್ಟಿ ಭಾಗವಹಿಸಿದ್ದರು.

    Click here

    Click here

    Click here

    Call us

    Call us

    ಕಾರ್ಯಕ್ರಮವನ್ನು ರಸಾಯನಶಾಸ್ತ್ರ ಉಪನ್ಯಾಸಕರಾದ ಪ್ರಜ್ವಲ್ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್: ತಾಲೂಕು ಮಟ್ಟದ ಸಾಧನೆ

    10/09/2026

    ಕೋಟ ಗ್ರಾಮ ಪಂಚಾಯಿತಿ ಜಮಾಬಂದಿ ಕಾರ್ಯಕ್ರಮ

    10/09/2026

    ಕೋಟ ಮಣೂರು ಪಡುಕರೆ ಕೆಪಿಎಸ್ ಶಾಲೆಯಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ

    10/09/2026
    Leave A Reply Cancel Reply

    9 + 8 =

    Call us

    Click Here

    Call us

    Call us

    Call us
    Highest Viewed Recently
    • ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್: ತಾಲೂಕು ಮಟ್ಟದ ಸಾಧನೆ
    • ಕೋಟ ಗ್ರಾಮ ಪಂಚಾಯಿತಿ ಜಮಾಬಂದಿ ಕಾರ್ಯಕ್ರಮ
    • ಕ್ರಿಯೇಟಿವ್ ಸ್ಫೂರ್ತಿಮಾತು: ನಾಡಿನ ಖ್ಯಾತ ಲೇಖಕ, ಚಿಂತಕ, ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಭಾಗಿ
    • ಕೋಟ ಮಣೂರು ಪಡುಕರೆ ಕೆಪಿಎಸ್ ಶಾಲೆಯಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ
    • ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುದ್ದು ಕೃಷ್ಣ ಮುದ್ದು ರಾಧೆ ಸ್ಪರ್ಧೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.