ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ ಆರುಣ್ಯ 2026ರ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ವೀರ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ ಬಂಟರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕುಂದಾಪುರ ಇದರ ಅಧ್ಯಕ್ಷರಾದ ಆವರ್ಸೆ ಸುಧಾಕರ ಶೆಟ್ಟಿ ಕಾರ್ಯಕ್ರಮವನುದ್ದೇಶಿಸಿ ಮಾತನಾಡಿ, ಇಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಜ್ಞಾನ, ಕೌಶಲ್ಯ ನಾಯಕತ್ವ, ಸೃಜನಶೀಲತೆ, ಸಾಮಾಜಿಕ ಜವಾಬ್ದಾರಿ ಮತ್ತು ಆತ್ಮವಿಶ್ವಾಸ ಬೆಳೆಸುವಂತಾಗಲಿ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಶಾರದಾ ಕಾಲೇಜಿನ ವಾಣಿಜ್ಯ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕರಾದ ಹೆಚ್ ಜಗದೀಶ್ ಕಾರ್ಯಕ್ರಮ ಕುರಿತು ಕಾಲೇಜಿನಲ್ಲಿ ನಡೆಯುತ್ತಿರುವ ಮ್ಯಾನೇಜ್ಮೆಂಟ್ ಫೆಸ್ಟ್ನಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಕಲಿತ ಜ್ಞಾನವನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳಲು ಉತ್ತಮ ಅವಕಾಶ ದೊರೆಯುತ್ತದೆ ಆದ್ದರಿಂದ ವಿದ್ಯಾರ್ಥಿಗಳು ಇದನ್ನು ಕೇವಲ ಮನರಂಜನಾ ಕಾರ್ಯಕ್ರಮ ಅಂತ ತಿಳಿಯುದೇ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಂವಹನ, ನಿರ್ಧಾರ ಕೈಗೊಳ್ಳುವಿಕೆ, ತಂಡದ ಕೆಲಸ ಮತ್ತು ಉದ್ಯಮಶೀಲತೆ ಬೆಳೆಸುವ ಪ್ರಮುಖ ಶೈಕ್ಷಣಿಕ ವೇದಿಕೆಯಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಸಂಚಾಲಕರಾದ ಅನುಪಮ ಎಸ್. ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆ ಮತ್ತು ಕೌಶಲ್ಯಗಳನ್ನು ಪ್ರದರ್ಶಿಸಿ ಭವಿಷ್ಯದಲ್ಲಿ ಇನ್ನಷ್ಟು ಅವಕಾಶ ದೊರೆಯಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್. ಕಾಲೇಜಿನ ಆಡಳಿತಾಧಿಕಾರಿ ಡಾ. ಮೋಹನ ಕೆ. ಎನ್. ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕ ಡಾ. ರವಿಚಂದ್ರ ಸ್ವಾಗತಿಸಿ, ಉಪನ್ಯಾಸಕಿ ಪ್ರಮೀಳಾ ಕಾರ್ಯಕ್ರಮ ನಿರೂಪಿಸಿ, ಐಕ್ಯೂಎಸಿ ಘಟಕ ಸಂಯೋಜಕ ಸಂದೀಪ ಕೆ. ವಂದಿಸಿದರು.
















