Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಉಪ್ಪುಂದ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಉಪ್ಪುಂದ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪ್ಪುಂದ ಶಾಖೆಯ ವತಿಯಿಂದ ನಬಾರ್ಡ್‌ನ ಸಹಯೋಗದಲ್ಲಿ ಗ್ರಾಹಕರಿಗಾಗಿ ಆರ್ಥಿಕ ಅರಿವು ಕಾರ್ಯಕ್ರಮವು ಉಪ್ಪುಂದ ನಾಡದೋಣಿ ಸಭಾಭವನದಲ್ಲಿ ಗುರವಾರ ನಡೆಯಿತು.

    Click Here

    Call us

    Click Here

    ಹಿರಿಯ ಕೃಷಿಕರು ಹಾಗೂ ಹೊಸ್ಕೋಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟೇಶ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪ್ಪುಂದ ಶಾಖೆಯು ಈ ಭಾಗದ ರೈತಾಪಿ ಜನರಿಗೆ ನೀಡುತ್ತಿರುವ ಸೇವೆಗಳನ್ನು ಶ್ಲಾಘಿಸಿದರು.

    ಬ್ಯಾಂಕಿನ ಹಿರಿಯ ಗ್ರಾಹಕರಾದ ಡಾ. ಯು. ವಿಶ್ವೇಶ್ವರ ಮಯ್ಯ ಅವರನ್ನು ಸನ್ಮಾನಿಸಲಾಯಿತು. ಇತ್ತೀಚಿಗಷ್ಟೇ ಅಪಘಾತದಲ್ಲಿ ಮೃತರಾದ ಶ್ರೀನಿಧಿ ನವೋದಯ ಸ್ವಸಹಾಯ ಗುಂಪಿನ ಸದಸ್ಯ ಹರಿಶ್ಚಂದ್ರ ಖಾರ್ವಿ ಅವರ ಕುಟುಂಬಕ್ಕೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ರೂ. ಒಂದು ಲಕ್ಷ ಚೈತನ್ಯ ವಿಮಾ ಪರಿಹಾರ ಮೊತ್ತವನ್ನು ನೀಡಲಾಯಿತು.

    ಕೆನರಾ ಬ್ಯಾಂಕಿನ ಆರ್ಥಿಕ ಸಾಕ್ಷರತಾ ಕೇಂದ್ರ ಸಿಬ್ಬಂದಿ ಆಶಾಲತಾ ಮಾತನಾಡಿ, ಅನ್‌ಲೈನ್ ಬ್ಯಾಂಕಿಂಗ್‌ನಲ್ಲಿ ನಡೆಯುವ ವಂಚನೆಗಳ ಬಗ್ಗೆ ಗ್ರಾಹಕರು ಎಚ್ಚರಿಕೆ ವಹಿಸಬೇಕು. ಅಪರಿಚಿತ ಕರೆಗಳು ಸಂದೇಶಗಳು ಹಾಗೂ ಲಿಂಕ್‌ಗಳ ಮೂಲಕ ನಡೆಯುವ ವಂಚನೆಗಳ ಬಗ್ಗೆ ಎಚ್ಚರಿಕೆ ಅಗತ್ಯ ಎಂದರು. ಶ್ರೀ ಬೊಬ್ಬರ್ಯ ದೇವಸ್ಥಾನ ಹೊಸ್ಕೋಟೆ ಅವರಿಗೆ ಕ್ಯುಆರ್ ಕೋಡ್ ವಿತರಿಸಲಾಯಿತು. ಸಭೆಯಲ್ಲಿ ಸುಮಾರು 150ಕ್ಕೂ ಮಿಕ್ಕಿ ಗ್ರಾಹಕರು ಉಪಸ್ಥಿತರಿದ್ದರು.

    ಶಾಖಾ ವ್ಯವಸ್ಥಾಪಕ ಶಂಕರ ಶೆಟ್ಟಿ ಪ್ರಸ್ತಾವಿಸಿ ತಮ್ಮ ಬ್ಯಾಂಕಿನಲ್ಲಿ ನೀಡುವ ವಿವಿಧ ಸೌಲಭ್ಯಗಳ ಬಗ್ಗೆ ವಿವರಿಸಿ ಸಭೆಯಲ್ಲಿ ಉಪಸ್ಥಿತರಿರುವ ಗ್ರಾಹಕರ ಸಹಕಾರವನ್ನು ಕೋರಿದರು.

    Click here

    Click here

    Click here

    Call us

    Call us

    ಬ್ಯಾಂಕಿನ ಸಹಾಯಕ ಮಹಾಪ್ರಬಂಧಕರಾದ ಎಂ. ಮೋಹನದಾಸ ಅಧ್ಯಕ್ಷತೆಯನ್ನು ವಹಿಸಿದ್ದರು. ಸಹಕಾರ ಸಂಘದ ವಲಯ ಮೇಲ್ವಿಚಾಕರಾದ ಶಿವರಾಮ ಪೂಜಾರಿ, ನಾಡದೋಣಿ ಸಂಘದ ಅಧ್ಯಕ್ಷ ಕುಮಾರ ಖಾರ್ವಿ, ಸ್ಥಳಿಯರಾದ ಆನಂದ ಖಾರ್ವಿ ಹಾಗೂ IT ವಿಭಾಗದ ಅಧಿಕಾರಿ ಮಹೇಶ ಉಪಸ್ಥಿತರಿದ್ದರು. ಶಾಖಾ ವ್ಯವಸ್ಥಾಪಕ ಶಂಕರ ಶೆಟ್ಟಿ ಸ್ವಾಗತಿಸಿ, ಪ್ರದೀಪ ಶೆಟ್ಟಿ ಕಾರಿಕಟ್ಟೆ ಕಾರ್ಯಕ್ರಮ ನಿರೂಪಿಸಿ, ಶಾಖೆಯ ಸಿಬ್ಬಂದಿ ಗೋಪಾಲ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅ.4ರಂದು ಆಲೂರು ಚಿತ್ರಕೂಟದಲ್ಲಿ ʼಚಿತ್ರಕೂಟ ಆಯುರ್ವೇದ ಹಬ್ಬʼ ವಿವಿಧ ಸ್ಪರ್ಧೆಗಳ ಆಯೋಜನೆ

    11/09/2026

    ಹಣವಂತರಿಗಿಂತ ಶುದ್ಧ ನೀರು ಕುಡಿಯುವವನೇ ನಿಜವಾದ ಯೋಗವಂತ: ಶ್ರೀ ರಾಘವೇಶ್ವರ

    11/09/2026

    ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಉದ್ಘಾಟನೆ

    11/09/2026
    Leave A Reply Cancel Reply

    20 + 2 =

    Call us

    Click Here

    Call us

    Call us

    Call us
    Highest Viewed Recently
    • ಅ.4ರಂದು ಆಲೂರು ಚಿತ್ರಕೂಟದಲ್ಲಿ ʼಚಿತ್ರಕೂಟ ಆಯುರ್ವೇದ ಹಬ್ಬʼ ವಿವಿಧ ಸ್ಪರ್ಧೆಗಳ ಆಯೋಜನೆ
    • ಹಣವಂತರಿಗಿಂತ ಶುದ್ಧ ನೀರು ಕುಡಿಯುವವನೇ ನಿಜವಾದ ಯೋಗವಂತ: ಶ್ರೀ ರಾಘವೇಶ್ವರ
    • ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಉಪ್ಪುಂದ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಕಾರ್ಯಕ್ರಮ
    • ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಉದ್ಘಾಟನೆ
    • ಕರ್ನಾಟಕ ಸಂಘ ಕತಾರ್‌ ವತಿಯಿಂದ ಶಿಕ್ಷಕರ ದಿನಾಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.