Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ: ತಾಲೂಕು ಮಟ್ಟದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳ ಸಮಾರೋಪ
    ಊರ್ಮನೆ ಸಮಾಚಾರ

    ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ: ತಾಲೂಕು ಮಟ್ಟದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳ ಸಮಾರೋಪ

    Updated:12/09/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಮತ್ತು ಶ್ರೀ ಸಿದ್ಧಿಶೈಕ್ಷಣಿಕ ಪ್ರತಿಷ್ಠಾನ, ಹಟ್ಟಿಯಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ವರ್ಷಂಪ್ರತಿ ನಡೆಯುವಂತೆ ಈ ವರ್ಷವೂ ಸಹ ತಾಲೂಕು ಮಟ್ಟದ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾಸ್ಪರ್ಧೆಗಳ ಸಮಾರೋಪವು ನಡೆಯಿತು.

    Click Here

    Call us

    Click Here

    ಸಮಾರೋಪ ಸಮಾರಂಭದ ಘನಾಧ್ಯಕ್ಷರಾದ, ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಉಪಾಧ್ಯಕ್ಷರಾದ ವೇದಮೂರ್ತಿ ಹೆಚ್. ಬಾಲಚಂದ್ರ ಭಟ್ಟರು ದೇವಾಲಯದ ಸಹಯೋಗದ ಕಾರ್ಯಕ್ರಮವನ್ನು ಮಾತನಾಡಿ,  ಸಿದ್ಧಿವಿನಾಯಕನ ತಾಣವಾದ ಇಲ್ಲಿ ಬಂದು ಭಾಗವಹಿಸಿ ಸ್ಪರ್ಧೆಗಳಲ್ಲಿ ನಿಮ್ಮ ಪ್ರಯತ್ನವನ್ನು ನಡೆಸಿರುವ ಸರ್ವರೂ ಸಿದ್ಧಿಯನ್ನು ಪಡೆವಂತವರಾಗಲಿ  ಎಂದು  ಹಾರೈಸಿದರು.

    ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರಥಮ ದರ್ಜೆ ಕಾಲೇಜು ಶಂಕರನಾರಾಯಣದ ಪ್ರಾಧ್ಯಾಪಕರಾದ ಶ್ರೀ ಪಾಂಡುರಂಗ ರವರು  ಗೆದ್ದವರಿಗೆ ಅಭಿನಂದಿಸಿ ಮಾತಾಡುತ್ತಾ ಸೋತವರು ಕುಗ್ಗಲೇ ಬಾರದು. ಇರುವವರಲ್ಲಿ ಮೂವರನ್ನು ಆರಿಸುವಾಗ ನಿಮ್ಮಲ್ಲಿ ಕೆಲವು ಕೊರತೆಗಳನ್ನು ಕಂಡಿರಬಹುದು. ಅವುಗಳನ್ನು ತಿದ್ದಿ ಸಾಧಿಸಿ ಮುಂದಿನ ವರ್ಷಗಳಲ್ಲಿ ತಮ್ಮ ಪ್ರತಿಭೆಯನ್ನು ಹೆಚ್ಚಿಸಿಕೊಳ್ಳಬೇಕು. ಎಂದು ತಿಳಿ ಹೇಳಿದರು.

    ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ ಹಟ್ಟಿಅಂಗಡಿ ಗ್ರಾಮಪಂಚಾಯತ್‌ನ ಪಿಡಿಓ ಆದ ರೇಣುಕಾ ಎಸ್. ಹೆಗ್ಡೆ ಮಾತನಾಡಿ,  ಹಟ್ಟಿಅಂಗಡಿ ಗ್ರಾಮವು ತಾಲೂಕು ಮಟ್ಟದ ಸ್ಪರ್ಧೆಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಾ ತಾಲೂಕಿನಲ್ಲಿ ಉತ್ತಮ ಹೆಸರನ್ನು ಪಡೆಯುತ್ತಿರುವುದು ನಮ್ಮ ಹೆಮ್ಮೆ  ಎಂದು ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು.

    ವಿವಿಧ ಸ್ಪರ್ಧೆಗಳಲ್ಲಿನ ವಿಜೇತರ ಪಟ್ಟಿಯನ್ನು ಸಹಶಿಕ್ಷಕಿಯರಾದ ಶ್ರೀಮತಿ ನೇತ್ರಾವತಿ ಹಾಗೂ ಕುಮಾರಿ ಸುಶ್ಮಿತಾ ಪೂಜಾರಿ ವಾಚಿಸಿದರು. ಪ್ರೌಢಶಾಲಾ  ವಿಭಾಗದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧಿಸಿದ  ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿ ಮತ್ತು ಶ್ರೀ ವೆಂಕಟರಮಣ ಇಂಗ್ಲೀಷ್ ಮೀಡಿಯಂ ಸ್ಕೂಲ್, ಕುಂದಾಪುರ ಹಾಗೂ ಪ್ರಾಥಮಿಕ ವಿಭಾಗದಲ್ಲಿ ವಿಶ್ವವಿನಾಯಕ ಸಿಬಿಎಸ್‌ಇ ಶಾಲೆ, ತೆಕ್ಕಟ್ಟೆ ಈ ಶಾಲೆಗಳಿಗೆ ವಿಶೇಷ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.

    Click here

    Click here

    Click here

    Call us

    Call us

    ಪ್ರೌಢಶಾಲಾ  ವಿಭಾಗದಲ್ಲಿ ಅತಿ ಹೆಚ್ಚು ಪ್ರಶಸ್ತಿಗಳನ್ನು ಪಡೆದು ಸಂದೀಪನ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಾಗೂರು ಚಾಂಪಿಯನ್ ಆಗಿ ಹೊರಹೊಮ್ಮಿದರೆ,  ಪ್ರಾಥಮಿಕ ವಿಭಾಗದಲ್ಲಿ ಶ್ರೀ ವೆಂಕಟರಮಣ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕುಂದಾಪುರ ಚಾಂಪಿಯನ್ ಆಗಿ ಹೊರಹೊಮ್ಮಿತು.

    ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಅಂಗಡಿಯ ಕಾರ್ಯದರ್ಶಿಗಳು, ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ, ಶಾಲಾ ಆಡಳಿತಾಧಿಕಾರಿ ವೀಣಾರಶ್ಮಿ ಎಮ್, ಉಪಪ್ರಾಂಶುಪಾಲರಾದ ರಾಮ ದೇವಾಡಿಗ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಹೇಮಮಾಲಿನೀ, ಶೈಕ್ಷಣಿಕ ಸಲಹೆಗಾರರಾದ ಸುಜಾತಾ ಸದಾರಾಮ್, ಅರವತ್ತಕ್ಕೂ ಅಧಿಕ ಪರಿಣತ ತೀರ್ಪುಗಾರರು ಹಾಗೂ ಶಾಲಾ ಶಿಕ್ಷಕ ಶಿಕ್ಷಕೇತರ ಬಳಗದವರು ಉಪಸ್ಥಿತರಿದ್ದರು.

    ಈ ಕಾರ್ಯಕ್ರಮಗಳನ್ನು ವಿದ್ಯಾರ್ಥಿನಿಯಾದ ನೀಲಾಂಜಲಿ ನಿರ್ವಹಿಸಿ, ಧನ್ಯವಾದವನ್ನು ಸಮರ್ಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಷ್ಯಾದ ಬ್ರಿಕ್ಸ್ ಪರಿಸರ ಸಮ್ಮೇಳನದಲ್ಲಿ ವಿವೇಕ್ ಆಳ್ವ ಉಪನ್ಯಾಸ

    12/09/2026

    ಬೈಂದೂರು ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ – ಶೇ.14 ಡಿವಿಡೆಂಡ್ ಘೋಷಣೆ

    12/09/2026

    ಐಎಂಜೆಐಎಸ್‌ಸಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಬುದ್ಧಿವಂತ ಹೂಡಿಕೆ ಕುರಿತು ವೆಬಿನಾರ್

    12/09/2026
    Leave A Reply Cancel Reply

    3 × 2 =

    Call us

    Click Here

    Call us

    Call us

    Call us
    Highest Viewed Recently
    • ರಷ್ಯಾದ ಬ್ರಿಕ್ಸ್ ಪರಿಸರ ಸಮ್ಮೇಳನದಲ್ಲಿ ವಿವೇಕ್ ಆಳ್ವ ಉಪನ್ಯಾಸ
    • ಬೈಂದೂರು ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ – ಶೇ.14 ಡಿವಿಡೆಂಡ್ ಘೋಷಣೆ
    • ಸನ್ಮತಿ ಪತ್ರಿಕೆ ಬಿಡುಗಡೆ – ತಿಂಗಳ ಅಂಗಳ ಸಂವಾದ ಕಾರ್ಯಕ್ರಮ
    • ಐಎಂಜೆಐಎಸ್‌ಸಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಬುದ್ಧಿವಂತ ಹೂಡಿಕೆ ಕುರಿತು ವೆಬಿನಾರ್
    • ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಸಮಾರೋಪ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.