ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ.ಬಿ.ಆರ್ ಅಂಬೇಡ್ಕರ್ ರವರ ಅನುಯಾಯಿಗಳನ್ನು ಮಹಾರಾಷ್ಟçದ ನಾಗಪುರ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ ಮಾಹೆಯಲ್ಲಿ ನಡೆಯಲಿರುವ ಪ್ರವರ್ತನಾ ದಿನಕ್ಕೆ ಭೇಟಿ ನೀಡಲು ಅಕ್ಟೋಬರ್ 18 ರಿಂದ 20 ರ ವರೆಗೆ ಕೆ.ಎಸ್.ಆರ್.ಟಿ.ಸಿ ಮತ್ತು ಇತರೆ ಸಾರಿಗೆ ಬಸ್ಸು ಹಾಗೂ ರೈಲಿನ ಮೂಲಕ ಯಾತ್ರೆಯನ್ನು ಕೈಗೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಇಲಾಖೆಯ ವೆಬ್ಸೈಟ್ https://swd.karnataka.gov.in/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 9 ಕೊನೆಯ ದಿನ. ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಿದ ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ ಎರಡು ದಿನಗಳ ಒಳಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಬಿ ಬ್ಲಾಕ್, ಎರಡನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ ಮಣಿಪಾಲ ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.











