Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಟೌನ್ ಸೌಹಾರ್ದ: ಆರ್ಥಿಕ ಸಂಸ್ಥೆಗಳು ಸಾಮಾಜಿಕ ಜವಾಬ್ದಾರಿ ನಿರ್ವಹಿಸಬೇಕಿದೆ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಟೌನ್ ಸೌಹಾರ್ದ: ಆರ್ಥಿಕ ಸಂಸ್ಥೆಗಳು ಸಾಮಾಜಿಕ ಜವಾಬ್ದಾರಿ ನಿರ್ವಹಿಸಬೇಕಿದೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಆರ್ಥಿಕ ಸಂಸ್ಥೆಗಳು ಸಾಮಾಜಿಕ ಜವಾಬ್ದಾರಿ ನಿರ್ವಹಿಸಬೇಕಿದೆ: ಯು.ವರಮಹಾಲಕ್ಷ್ಮೀ ಹೊಳ್ಳ

    Click Here

    Call us

    Click Here

    ಗಂಗೊಳ್ಳಿ: ಆರ್ಥಿಕ ಸಂಸ್ಥೆಗಳು ಕೇವಲ ಆರ್ಥಿಕ ಚಟುವಟಕೆಗಳಿಗೆ ಸೀಮಿತವಾಗಿರದೆ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಿರಬೇಕು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯು ಕಳೆದ ಹಲವು ವರ್ಷಗಳಿಂದ ಆರ್ಥಿಕ ವ್ಯವಹಾರಗಳ ಜೊತೆಗೆ ವೈದ್ಯಕೀಯ ಶಿಬಿರ, ಸ್ಥಳೀಯಾಡಳಿತಕ್ಕೆ ಕೊಡುಗೆ, ಶಾಲಾ ಕಟ್ಟಡ ನಿರ್ಮಾಣಕ್ಕೆ ಸಹಾಯ ನೀಡುವಂತಹ ಅನೇಕ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಿಕೊಂಡು ಬಂದಿರುವುದು ಶ್ಲಾಘನೀಯ. ಈ ಭಾಗದ ಜನರ ಅವಶ್ಯಕತೆಗೆ ಸ್ಪಂದಿಸುವ ಸಹಕಾರಿಯ ಉದ್ದೇಶ ಧೋರಣೆಯ ಪ್ರತೀಕವಾಗಿ ಸಹಕಾರಿ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಉಪ್ಪುಂದ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಯು.ವರಮಹಾಲಕ್ಷ್ಮೀ ಹೊಳ್ಳ ಹೇಳಿದರು.

    ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಜರಗಿದ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಸಂಸ್ಥಾಪಕರ ಸ್ಮರಣೀಯ ದಿನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಆರ್ಥಿಕ ಸಂಸ್ಥೆಗಳು ಹುಟ್ಟು ಹಾಕಿ ಅದರ ಬೆಳವಣಿಗೆಗೆ ಕಾರಣೀಭೂತರಾದವರಿಗೆ ಕೃತಜ್ಞತೆ ಸಲ್ಲಿಸುವುದು ದೊಡ್ಡ ಮೌಲ್ಯವಾಗಿದೆ. ನಮ್ಮ ಹಿಂದಿನವರ ನಿಷ್ಠೆ, ಪ್ರಾಮಾಣಿಕತೆಗೆ ಫಲ ಇಂದು ದೊರೆಯುತ್ತಿದೆ. ಸಹಕಾರಿಯ ಈ ಸಾಧನೆ ನಿರಂತರವಾಗಿ ಮುನ್ನಡೆಯಬೇಕು ಎಂದರು.

    ಅಧ್ಯಕ್ಷತೆ ವಹಿಸಿದ್ದ ಸಹಕಾರಿಯ ಅಧ್ಯಕ್ಷ ಎಚ್.ಗಣೇಶ ಕಾಮತ್ ಮಾತನಾಡಿ, ಜನರ ಪ್ರೀತಿ ವಿಶ್ವಾಸದಿಂದ ಸಂಸ್ಥೆ ಅಭಿವೃದ್ಧಿ ಹೊಂದುತ್ತಿದೆ. ಸಹಕಾರಿಯ ಸಿಬ್ಬಂದಿಗಳ ನಿಷ್ಠೆ ಪ್ರಾಮಾಣಿಕತೆಯಿಂದ ಸಹಕಾರಿ ಹೆಚ್ಚು ಅಭಿವೃದ್ಧಿ ಸಾಧಿಸುತ್ತಿದೆ. ೨೮ ಕೋಟಿ ಠೇವಣಿಯನ್ನು ಹೊಂದಿರುವ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯು ಕೋಟೇಶ್ವರ ಮತ್ತು ಉಪ್ಪುಂದದಲ್ಲಿ ಶಾಖೆಗಳನ್ನು ತೆರೆಯುವ ಮೂಲಕ ಆ ಭಾಗದ ಜನರಿಗೆ ವಿಶಿಷ್ಟ ಸೇವೆಯನ್ನು ನೀಡುತ್ತಿದೆ ಎಂದರು. ಇದೇ ಸಂದರ್ಭ ಗಂಗೊಳ್ಳಿಯ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಶಾರದಾ ರಾಮಕೃಷ್ಣ ಬಿ. ಮತ್ತು ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನಿವೃತ್ತ ವ್ಯವಸ್ಥಾಪಕ ನಿರ್ದೇಶಕಿ ಮಮತಾ ವಿ. ಮಯ್ಯ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪುರಸ್ಕರಿಸಲಾಯಿತು. ಪಿಗ್ಮಿ ಸಂಗ್ರಾಹಕರನ್ನು ಮತ್ತು ಸಲಹೆಗಾರರನ್ನು ಗೌರವಿಸಲಾಯಿತು. ಸಹಕಾರಿಯ ಉಪಾಧ್ಯಕ್ಷ ಜಿ.ವೇದವ್ಯಾಸ ಕೆ. ಆಚಾರ್ಯ, ನಿರ್ದೇಶಕರಾದ ಉದಯಶಂಕರ ರಾವ್, ಜಿ.ವಿಶ್ವನಾಥ ಆಚಾರ್ಯ, ಬಿ.ಪ್ರಕಾಶ ಶೆಣೈ ಉಪಸ್ಥಿತರಿದ್ದರು.

    ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಕಾರಿಯ ಸಿಬ್ಬಂದಿ ರಕ್ಷಾ ಶೆಣೈ ಅತಿಥಿಗಳನ್ನು ಹಾಗೂ ಸನ್ಮಾನಿತರನ್ನು ಪರಿಚಯಿಸಿದರು. ಅಶ್ವಿನಿ ಖಾರ್ವಿ ಕಾರ್ಯಕ್ರಮ ನಿರೂಪಿಸಿದರು. ಸಹಕಾರಿಯ ಅಧಿಕಾರಿ ಸುಮನಾ ಶೆಣೈ ವಂದಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.