Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಇನ್ನು ಸಾರ್ವಜನಿಕರಿಗೆ ಮಿನಿ ವಿಧಾನಸೌಧದಲ್ಲಿ ಓದಲು ಪತ್ರಿಕೆ ಉಚಿತ
    ಕುಂದಾಪ್ರದ್ ಸುದ್ಧಿ

    ಕುಂದಾಪುರ: ಇನ್ನು ಸಾರ್ವಜನಿಕರಿಗೆ ಮಿನಿ ವಿಧಾನಸೌಧದಲ್ಲಿ ಓದಲು ಪತ್ರಿಕೆ ಉಚಿತ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ವಿವಾಹ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸುವುದು, ಮಡದಿಗೆ ವಿಶೇಷವಾದ ಉಡುಗೊರೆ ನೀಡುವುದು ಇವೆಲ್ಲಾ ಸಾಮಾನ್ಯವಾಗಿ ನಡೆದೇ ನಡೆಯುತ್ತೆ. ಆದರೆ ಇಲ್ಲೊಬ್ಬ ಪತ್ರಿಕಾ ವಿತರಕರು ತಮ್ಮ 25ನೇ ವಿವಾಹ ವಾರ್ಷಿಕೋತ್ಸವದ ಸವಿ ನೆನಪಿಗಾಗಿ ಸಾರ್ವಜನಿಕರಿಗೆ ಉಚಿತ ಪತ್ರಿಕೆ ನೀಡಿ ಓದುವ ಹವ್ಯಾಸ ಬೆಳೆಸಲು ಮುಂದಾದದ್ದು ಮಾತ್ರ ವಿಶೇಷ ಸ್ಪಲ್ಪ ವಿಶೇಷ ಅಂದೆನಿಸುತ್ತೆ.

    Click Here

    Call us

    Click Here

    [quote font_size=”16″ bgcolor=”#ffffff” bcolor=”#dd890b” arrow=”yes” align=”right”]* ಆಧುನಿಕ ಯುಗದಲ್ಲಿ ಪತ್ರಿಕೆ ಓದುಗರ ಸಂಖ್ಯೆ ಕಡಿಮೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಉಚಿತ ಪತ್ರಿಕೆ ಓದಲು ಅವಕಾಶ ಮಾಡಿಕೊಟ್ಟಿರುವುದು ಓದುವ ಹವ್ಯಾಸವನ್ನು ಉತ್ತೇಜಿಸಿದಂತಾಗುತ್ತದೆ. ಮಿನಿವಿಧಾನಸೌಧಕ್ಕೆ ಬೇರೆ ಕೆಲಸ ನಿಮಿತ್ತ ಬರುವ ಸಾರ್ವಜನಿಕರು, ಕೆಲಸ ಆಗುವ ತನಕ ಸಮ್ಮನೆ ಸಮಯ ಹಾಳು ಮಾಡುವುದಕ್ಕಿಂತ ಪತ್ರಿಕೆಗಳನ್ನ ಓದುವ ಮೂಲಕ ಪ್ರಪಂಚದ ವಿದ್ಯಮಾನ ತಿಳಿಯಲು ಸಹಕಾರಿಗುತ್ತದೆ. ಗ್ರಾಹಕರಿಗೆ ಉಚಿತ ಪತ್ರಿಕೆ ಒದಗಿಸುತ್ತಿರುವ ಶಂಕರಾಚಾರ‍್ಯ ಪ್ರಯತ್ನ ಶ್ಲಾಘನೀಯ.
    ಅಶ್ವಥಿ ಎಸ್., ಎಸಿ ಕುಂದಾಪುರ.[/quote]

    ಹೌದು. ಕುಂದಾಪುರದ ಪತ್ರಿಕಾ ವಿತರಕ ಶಂಕರಾಚಾರ‍್ಯ ಅವರು ತಮ್ಮ 25ನೇ ವಿವಾಹ ವಾರ್ಷಿಕೋತ್ಸವದ ನೆನಪಿಗಾಗಿ ಇಲ್ಲಿನ ಮಿನಿ ವಿಧಾನಸೌಧದಲ್ಲಿ ಸಾರ್ವಜನಿಕರಿಗಾಗಿ ಉಚಿತವಾಗಿ ಸಹಿತ ಎಲ್ಲಾ ಕನ್ನಡ ಪತ್ರಿಕೆಗಳನ್ನು ಓದಲು ಅವಕಾಶ ಮಾಡಿಕೊಟ್ಟಿದ್ದಾರೆ. ಸಾರ್ಥಕ ಭಾವದಿಂದ ಇದಕ್ಕೆ ಕಾರಣವನ್ನೂ ನೀಡುವ ಅವರು ಮಿನಿ ವಿಧಾನಸೌಧಕ್ಕೆ ಗ್ರಾಮೀಣ ಭಾಗದ ಜನರು ಬರುತ್ತಿದ್ದು, ತಮ್ಮ ಕೆಲಸ ಕಾರ‍್ಯ ಮುಗಿಯವ ತನಕ ಸುಮ್ಮನೆ ಕಾಲ ಕಳೆಯಬೇಕಾಗುತ್ತದೆ. ಹಾಗಾಗಬಾರದು ಎಂಬ ಉದ್ದೇಶದಿಂದ ಉಚಿತ ಪತ್ರಿಕೆ ನೀಡಲು ನಿರ್ಧರಿಸಲಾಗಿದೆ. ಈಗಾಗಲೇ ಆಸ್ಪತ್ರೆಗಳಲ್ಲಿ ಉಚಿತ ಪತ್ರಿಕೆ ನೀಡುತ್ತಿದ್ದು, ಮಿನಿ ವಿಧಾನಸೌಧಕ್ಕೂ ಇನ್ನು ಮುಂದೆ ಪತ್ರಿಕೆ ಪೂರೈಕೆ ಮಾಡಲಾಗುತ್ತದೆ. ಸಾರ್ವಜನಿಕರು ಅಲ್ಲಿರುವ ಪತ್ರಿಕೆಗಳನ್ನು ಓದಿ ಮತ್ತೊಬ್ಬರಿಗೆ ಓದಲು ಅವಕಾಶ ಮಾಡಿಕೊಟ್ಟರೆ ನಮ್ಮ ಈ ಪ್ರಯತ್ನ ಸಾರ್ಥಕ ಎನ್ನುತ್ತಾರೆ.

    ಕುಂದಾಪುರ ಉಪವಿಭಾಗಾಧಿಕಾರಿ ಅಶ್ವಥಿ ಎಸ್. ಸಾರ್ವಜನಿಕರಿಗೆ ಪತ್ರಿಕೆ ವಿತರಿಸುವ ಮೂಲಕ ಈ ಯೋಜನೆಗೆ ಚಾಲನೆ ನೀಡಿದರು. ತಹಶೀಲ್ದಾರ್ ಗಾಯತ್ರಿ ಎನ್. ನಾಯಕ್, ಶ್ರೀದೇವಿ ಎಸ್. ಆಚಾರ‍್ಯ ಉಪಸ್ಥಿತರಿದ್ದರು.

    ??????????????????????????????? ???????????????????????????????

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d