Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಾರತೀಯ ಕಥನ ಸಾಹಿತ್ಯ: ಒಂದು ದಿನದ ಕಾರ್ಯಾಗಾರ
    ಕ್ಯಾಂಪಸ್ ಕಾರ್ನರ್

    ಭಾರತೀಯ ಕಥನ ಸಾಹಿತ್ಯ: ಒಂದು ದಿನದ ಕಾರ್ಯಾಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಸಾವಿರಾರು ವರ್ಷಗಳ ಇತಿಹಾಸವಿರುವ ಭಾರತ ಉಪಖಂಡದಲ್ಲಿ ವೈವಿಧ್ಯಮಯ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಬದುಕುತ್ತಿರುವ ನಮಗೆ ಭಾರತೀಯ ಸಮುದಾಯದ ಯಾವ ದಿಕ್ಕಿನತ್ತ ಸಾಗುತ್ತದೆ ಎಂಬುದನ್ನು ಪುನರ್ ಪರಿಶೀಲನೆಗೆ ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆ ಒದಗಿಬಂದಿದೆ. ಪೂರಕವಾಗಿ ಭಾರತೀಯ ಸಾಹಿತ್ಯ ಮತ್ತು ಭಾಷೆಯ ಅಧ್ಯಯನ ಬಹಳ ಮುಖ್ಯವಾಗಿದೆ ಎಂದು ಪ್ರಸಿದ್ಧ ಲೇಖಕ ಪ್ರೊ.ಟಿ.ಪಿ.ಅಶೋಕ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಣಿಪಾಲ ವಿಶ್ವವಿದ್ಯಾಲಯದ ಡಾ. ಟಿ.ಎಂ.ಎ ಪೈ ಭಾರತೀಯ ಸಾಹಿತ್ಯ ಪೀಠ ಮತ್ತು ಕಾಲೇಜಿನ ಡಾ.ಹೆಚ್. ಶಾಂತಾರಾಂ ಸಾಹಿತ್ಯ ಮತ್ತು ಸಂಸ್ಕೃತಿ ವೇದಿಕೆಯ ಸಹಯೋಗದಲ್ಲಿ ಭಾರತೀಯ ಕಥನ ಸಾಹಿತ್ಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

    ವೈವಿಧ್ಯಮಯ ಸಾಂಸ್ಕೃತಿಕ ಹಿನ್ನೆಲೆಯ ಭಾರತೀಯ ಸಾಹಿತ್ಯದಲ್ಲಿ ಈ ಹಿಂದೆ ಭಾಷೆಗಳಲ್ಲಿ ಭಿನ್ನತೆ ಇರಲಿಲ್ಲ. ಕನಿಷ್ಠ ಎರಡರಿಂದ ಮೂರು ಭಾಷೆಗಳ ಜ್ನಾನ ಇರುತ್ತಿತ್ತು. ಕಾಲಕಳೆದಂತೆ ವಸಾಹತುಷಾಹಿ ಇಂಗ್ಲೀಷ್ ಭಾಷೆಯ ಪ್ರಭಾವಕ್ಕೆ ಸಿಲುಕಿ ಕೇವಲ ಇಂಗ್ಲೀಷ್ ಬಿಟ್ಟರೆ ನಮ್ಮ ಭಾಷೆ ಮಾತ್ರ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಭಾಷಾವಾರು ಪ್ರಾಂತ್ಯ ವಿಂಗಡಣೆಯು ಕೂಡ ನಾವು ಅಖಂಡ ಭಾರತೀಯ ಸಾಹಿತ್ಯವನ್ನು ಅರಿಯುವಲ್ಲಿ ಪ್ರತಿಕೂಲ ಪರಿಣಾಮವನ್ನು ಬೀರಿದೆ. ಭಾರತದ ವಿಭಜನೆಯ ಪ್ರಭಾವ ಉತ್ತರಭಾರತದ ಸಾಹಿತ್ಯದ ಮೇಲೆ ಬೀರಿರುವುದನ್ನು ಅಲ್ಲಿನ ಸಾಹಿತ್ಯದ ಓದಿನಿಂದ ನಾವು ನೋಡುತ್ತಿದ್ದೇವೆ. ಆದರೆ ಅನುಭವಗಳಲ್ಲಿ ಗಮನಿಸಿದಂತೆ ಭಾರತೀಯ ಸಾಹಿತ್ಯ ವನ್ನು ಅರಿತುಕೊಳ್ಳುವುದಕ್ಕೆ ನಮ್ಮ ಮನಸ್ಸುಗಳು ತೆರೆದುಕೊಳ್ಳಬೇಕಾಗಿದೆ. ಆ ಮುಖಾಂತರ ಒಡೆದುಹೋಗುತ್ತಿರುವ ಮನಸುಗಳನ್ನು ಸರಿಪಡಿಸಲು ಸಾಧ್ಯವಾಗಬಹುದು. ಸಾಹಿತ್ಯವನ್ನು ಅರ್ಥೈಸಿಕೊಳ್ಳುವುದರ ಮೂಲಕ ಒಟ್ಟಾರೆ ಸಂಸ್ಕೃತಿಯನ್ನು ಗೆಲ್ಲುವ ಪ್ರಯತ್ನ ಮಾಡಬಹುದು ಎಂದು ಅವರು ಹೇಳಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಆಡಳಿತಾಧಿಕಾರಿಗಳಾದ ಡಾ.ಹೆಚ್.ಶಾಂತಾರಾಮ್ ವಹಿಸಿದ್ದರು.

    ಮಣಿಪಾಲ ವಿಶ್ವವಿದ್ಯಾಲಯದ ಡಾ. ಟಿ.ಎಂ.ಎ ಪೈ ಭಾರತೀಯ ಸಾಹಿತ್ಯ ಪೀಠದ ಸಂಚಾಲಕರಾದ ಡಾ.ವರದೇಶ ಹಿರೆಗಂಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಸ್ವಾಗತಿಸಿದರು. ಕಾಲೇಜಿನ ಡಾ.ಹೆಚ್. ಶಾಂತಾರಾಂ ಸಾಹಿತ್ಯ ಮತ್ತು ಸಂಸ್ಕೃತಿ ವೇದಿಕೆಯ ಸಂಚಾಲಕಿ ಡಾ.ರೇಖಾ ಬನ್ನಾಡಿ ವಂದಿಸಿದರು. ವಿದ್ಯಾರ್ಥಿನಿ ಚೈತ್ರ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    15 − ten =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.