Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿರೂರು ಜಿಪಂ ಕ್ಷೇತ್ರ: ಮೂಲಭೂತ ಸೌಕರ್ಯಗಳ ಅಭಿವೃದ್ಧಿಯೇ ಅಭ್ಯರ್ಥಿಗಳಿಗೆ ಸವಾಲು
    ವಿಶೇಷ ವರದಿ

    ಶಿರೂರು ಜಿಪಂ ಕ್ಷೇತ್ರ: ಮೂಲಭೂತ ಸೌಕರ್ಯಗಳ ಅಭಿವೃದ್ಧಿಯೇ ಅಭ್ಯರ್ಥಿಗಳಿಗೆ ಸವಾಲು

    Updated:17/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ.
    ಬೈಂದೂರು: ಕುಂದಾಪುರ ತಾಲೂಕಿನ ತುತ್ತ ತುದಿಯ ಊರು ಶಿರೂರು. ಶಿರಭಾಗದ ಊರಾದ ಕಾರಣ ಶಿರೂರು ಎಂಬ ಹೆಸರು ಬಂತು ಎಂದು ಕೆಲವರು ಹೇಳಿದರೆ ಒಂದು ಕಾಲದಲ್ಲಿ ಸಿರಿ ತುಂಬಿದ ಊರಾಗಿದ್ದ ಕಾರಣ ಶಿರೂರು ಎಂದು ಕರೆಯಲಾಯಿತು ಎನ್ನತ್ತಾರೆ. ಶಿರೂರು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಇಷ್ಟು ವರ್ಷಗಳಲ್ಲಿ ಹೇಳಿಕೊಳ್ಳುವಂತಹ ಅಭಿವೃದ್ಧಿ ಕಾರ್ಯಗಳು ನಡೆಯದಿದ್ದರೂ ಗುರುತಿಸಬಹುದಾದ ಕೆಲವು ಅಭಿವೃದ್ಧಿ ಕಾಮಗಾರಿಗಳು ಒಂದಿರಡು ವರ್ಷಗಳ ಈಚೆಗೆ ನಡೆದಿವೆ.
    (ಕುಂದಾಪ್ರ ಡಾಟ್ ಕಾಂ ವರದಿ)

    Click Here

    Call us

    Click Here

    post-election-voters-Shirurಈ ಭಾರಿ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಸಾಮಾನ್ಯ ಮೀಸಲು ಬಂದಿರುವುದರಿಂದ ಪುರುಷ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಮಾಜಿ ತಾಪಂ ಸದಸ್ಯ ಮದನಕುಮಾರ್ ಸ್ಪರ್ಧಿಸುತ್ತಿದ್ದರೇ, ಬಿಜೆಪಿಯಿಂದ ಪಡುವರಿ ಗ್ರಾಪಂ ಹಾಲಿ ಸದಸ್ಯ ಸುರೇಶ್ ಬಟ್ವಾಡಿ ಸ್ವರ್ಧಿಸುತ್ತಿದ್ದಾರೆ. ಇನ್ನು ಕಾಂಗ್ರೆಸ್ ಪಕ್ಷದ ಹಾಲಿ ತಾಪಂ ಸದಸ್ಯ ರಾಮ ಕೆ. ಪಕ್ಷದಿಂದ ಟಿಕೇಟ್ ವಂಚಿತರಾಗಿದ್ದರಿಂದ ಶಿರೂರು ಕ್ಷೇತ್ರದಿಂದ ಪಕ್ಷೇತರರಾಗಿ ಸ್ವರ್ಧಿಸುತ್ತಿದ್ದಾರೆ.

    ಒಂದು ನೋಟ:
    ಗ್ರಾಮೀಣ ಪ್ರದೇಶವೇ ಹೆಚ್ಚಿರುವ ಶಿರೂರು ಜಿಲ್ಲಾ ಪಂಚಾಯತ್ ಕ್ಷೇತ್ರ ಅರಣ್ಯ ಹಾಗೂ ಕರಾವಳಿ ಭಾಗವನ್ನು ಒಳಗೊಂಡಿದೆ. ರಾಜಕೀಯ, ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿ ಕ್ಷೇತ್ರಗಳಲ್ಲಿ ಶಿರೂರು ಗುರುತಿಸಿಕೊಂಡಿದೆ. ಇಲ್ಲಿನ ಗ್ರಿನ್ ವ್ಯಾಲಿ ಶಿಕ್ಷಣ ಸಂಸ್ಥೆ ಅಂತರಾಷ್ಟ್ರೀಯ ಗುಣಮಟ್ಟದ ಸೌಲಭ್ಯ ಹೊಂದಿದೆ. ಪ್ರವಾಸಿ ತಾಣಗಳು ಕೈಬೀಸಿ ಕರೆಯುತ್ತವೆ. ಉಪ್ಪುಂದದಲ್ಲಿ ನಡೆದ ಕಡಲೋತ್ಸವ ಹಾಗೂ ಶಿರೂರಿನ ಶಿರೂರು ಉತ್ಸವ ಈ ಭಾಗದ ಜನರ ಸಾಂಸ್ಕೃತಿಕ ಅಭಿರುಚಿಯನ್ನು ಎತ್ತಿ ಹಿಡಿದಿದೆ. (ಕುಂದಾಪ್ರ ಡಾಟ್ ಕಾಂ ವರದಿ)

    ಕ್ಷೇತ್ರದ ಪ್ರಮುಖ ಕಸುಬು ಮೀನುಗಾರಿಕೆ ಮತ್ತು ಕೃಷಿ. ಮೀನುಗಾರಿಕೆಗೆ ಪೂರಕವಾಗಿ ಬೇಕಾದ ರಸ್ತೆಗಳು ದುಸ್ತರವಾಗಿವೆ. ಉಪ್ಪುಂದ ಭಾಗದ ಕೃಷಿ ಭೂಮಿಗಳಿಗೆ ನುಗ್ಗುವ ಉಪ್ಪುನೀರನ್ನು ತಡೆಯಿಡಿಯಲು ಸೂಕ್ತ ವ್ಯವಸ್ಥೆಗಳೇ ಆಗಿಲ್ಲ. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಈ ವರೆಗೆ ಕಾಯಕಲ್ಪ ದೊರೆಯದೇ ಪ್ರತಿವರ್ಷವೂ ಕ್ಷೇತ್ರದ ಜನರ ನೀರಿಗಾಗಿ ಪರದಾಟ ನಿಂತಿಲ್ಲ. ಶಿರೂರು ಅಳ್ವೆಗದ್ದೆಯಲ್ಲಿ ಮೀನುಗಾರರಿಗೆ ಜಟ್ಟಿ ಸಮಸ್ಯೆ. ಪ್ರವಾಸೋದ್ಯಮ ಕಡೆಗಣನೆ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಸಮುದ್ರದ ಬದಿಯಲ್ಲಿ ವಾಸಿಸುವ ನೂರಾರು ಕುಟುಂಬಗಳಿಗೆ ಸಿ.ಆರ್.ಝಡ್ ಗೋಳು ತಪ್ಪಿಲ್ಲ. ಮನೆ ನಿರ್ಮಾಣ, ವಿದ್ಯುತ್ ಪಡೆಯಲು ಹರಸಾಹಸ ಪಡುವುದು ನಿಂತಿಲ್ಲ. ಇದು ಕುಂದಾಪ್ರ ಡಾಟ್ ಕಾಂ ವರದಿ

    ಪ್ರವಾಸೋದ್ಯಮ ಕಡೆಗಣನೆ:
    ಕ್ಷಿತಿಜ ನಿಸರ್ಗಧಾಮ, ಉಪ್ಪುಂದ ಮಡಿಕಲ್ ಕಡಲತೀರ, ಸೋಮೇಶ್ವರ ಬೀಚ್, ಚರ್ಚ್ ಗುಡ್ಡ, ಕ್ಷಿತಿಜ, ನಿಸರ್ಗಧಾಮ ಕೋಣಮಕ್ಕಿ ಜಂಗಲ್ ಫೀರ್ ಧ್ಯಾನಪೀಠ, ಅಳುವೆಗದ್ದೆ ಕಡಲತೀರ ಶಿರೂರು ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಪ್ರಮುಖ ಪ್ರವಾಸಿ ತಾಣಗಳಾಗಿವೆ. ಆದರೆ ಈ ಎಲ್ಲಾ ತಾಣಗಳೂ ಸಂಪರ್ಕ ಕಲ್ಪಿಸುವ ರಸ್ತೆ ದುಸ್ತರವಾಗಿದ್ದರೇ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಗಳು ಅಭಿವೃದ್ಧಿ ಮಾತ್ರ ಆಗಿಲ್ಲ.Election-shiruru-candidates

    Click here

    Click here

    Click here

    Call us

    Call us

    ಸಂಸದರ ಆದರ್ಶ ಗ್ರಾಮದಲ್ಲಿ ಶಿರೂರು ಗ್ರಾಮ:
    ಸಂಸದರ ಆದರ್ಶ ಗ್ರಾಮ ಯೋಜನೆಯಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಶಿರೂರು ಗ್ರಾಮವನ್ನು ಆಯ್ಕೆಮಾಡಿಕೊಂಡಿದ್ದು, ಈ ಭಾಗದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪಣತೊಟ್ಟಿದ್ದಾರೆ. ಪ್ರಮುಖ ರಸ್ತೆ, ಸೇತುವೆ, ಶೌಚಾಲಯ, ಸಮುದ್ರಕ್ಕೆ ತಡೆಗೋಡೆ, ಕುಡಿಯುವ ನೀರಿನ ಬಗ್ಗೆ ಮೊದಲು ಮುತುವರ್ಜಿ ವಹಿಸಲಾಗಿದೆ. ಕೆಲವು ಕಾಮಗಾರಿಗಳು ಟೆಂಡರ್ ಪ್ರಕ್ರಿಯೆ ಮುಗಿದು ಚಾಲನೆಯಲ್ಲಿದ್ದರೇ, ಹಲವು ಇನ್ನೂ ಬಾಕಿ ಇವೆ.

    ತಾಲೂಕು ಪಂಚಾಯತ್ ಕ್ಷೇತ್ರಗಳು
    ಶಿರೂರು-1 ಶಿರೂರು-2, ಪಡುವರಿ, ಉಪ್ಪುಂದ

    ಈ ಹಿಂದಿನ ಜಿಪಂ ಸದಸ್ಯರು
    2005 ಮದನ್ ಕುಮಾರ್, 2011 ಗೌರಿ ದೇವಾಡಿಗ

    Shiruru ZP constituency (1) Shiruru ZP constituency (2)

    Like this:

    Like Loading...

    Related

    Election Shiruru Taluk Panchayat Election TP ZP Election Zilla Panchayat Election
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಅರಣ್ಯ ಲೋಕದ ಮರುಸೃಷ್ಟಿ – ಕುಮ್ರಿಕಾನ್. ‌ಬೈಂದೂರು ಉತ್ಸವದ ವಿಶೇಷ ಆಕರ್ಷಣೆ

    01/11/2024

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d