Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಅತಿಥಿ ಉಪನ್ಯಾಸಕರ ಪ್ರತಿಭಟನೆ, ಚುನಾವಣೆ ಬಹಿಷ್ಕಾರದ ಎಚ್ಚರಿಕೆ
    ಊರ್ಮನೆ ಸಮಾಚಾರ

    ಬೈಂದೂರು: ಅತಿಥಿ ಉಪನ್ಯಾಸಕರ ಪ್ರತಿಭಟನೆ, ಚುನಾವಣೆ ಬಹಿಷ್ಕಾರದ ಎಚ್ಚರಿಕೆ

    Updated:09/02/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಕೆಲಸ ಭದ್ರತೆ ನೀಡಬೇಕಿದ್ದ ಸರಕಾರ ಖಾಯಂ ಉಪನ್ಯಾಸಕರ ನೇಮಕಾತಿಯಲ್ಲಿ ತಾರತಮ್ಯ ನೀತಿ ತಳೆದು ನಮ್ಮನ್ನು ಬೀದಿ ತರುವ ಹುನ್ನಾರ ನಡೆಸಿದೆ ಎಂದು ಉಡುಪಿ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧಕ್ಷ ರಂಜಿತ್‌ಕುಮಾರ್ ಶೆಟ್ಟಿ ವಕ್ವಾಡಿ ಆರೋಪಿಸಿದರು.

    Click Here

    Call us

    Click Here

    [quote font_size=”16″ bgcolor=”#ffffff” arrow=”yes” align=”right”]ಸ್ಥಳಕ್ಕಾಗಮಿಸಿದ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿ, ಈ ವಿಚಾರವನ್ನು ನೇರವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಚರ್ಚಿಸುತ್ತೇನೆ. ನಿಮ್ಮ ಹೋರಾಟಕ್ಕೆ ಧನಿಯಾಗಿ ನಿಲ್ಲುತ್ತೇನೆ. ಸದ್ಯ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣೆಯ ಬಳಿಕ ಮುಂದಿನ ನಿರ್ಣಯ ಕೈಗೊಳುವ ಬಗ್ಗೆ ಚಿಂತಿಸುವುದಾಗಿ ತಿಳಿಸಿದರು. ಸಮಾಜದ ಸತ್ಪ್ರಜೆಗಳನ್ನು ರೂಪಿಸುವ ನೀವುಗಳೇ ಚುನಾವಣೆ ಬಹಿಷ್ಕಾರದಂತಹ ನಿರ್ಣಯ ಕೈಗೊಳ್ಳುವುದು ಸರಿಯಲ್ಲ ಎಂದು ಪ್ರತಿಭಟನಾಕಾರ ಮನವೋಲಿಸಿದರು.[/quote]

    ಬೈಂದೂರು ವಿಶೇಷ ತಹಶೀಲ್ದಾರರ ಕಛೇರಿ ಎದುರು ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹಮ್ಮಿಕೊಳ್ಳಲಾದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು. ಜನವರಿ 12ರಿಂದ ನಿರಂತವಾಗಿ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದರೂ ಈವರೆಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳಾಗಲೀ, ಶಿಕ್ಷಣ ಸಚಿವರಾಗಲಿ, ರಾಜ್ಯ ಸರಕಾರವಾಗಲಿ ನಮ್ಮ ಬೇಡಿಕೆಗಳಿಗೆ ಸ್ಪಂದಿಸದೇ ಬೇಜವಬ್ದಾರಿಯುತವಾಗಿ ವರ್ತಿಸುತ್ತಿದೆ. ಕಳೆದ ನಾಲ್ಕು ತಿಂಗಳುಗಳಿಂದ ಸಂಬಳ ನೀಡಿದೆ ಸತಾಯಿಸುತ್ತಿದೆ ಎಂದ ಅವರು, ಇದು ಹೀಗೆ ಮುಂದುವರಿದರೆ ಚುನವಾಣೆ ಬಹಿಷ್ಕರಿಸುವ ನಿರ್ಣಯ ಕೈಗೊಳ್ಳಲಾಗುವುದು ಎಂದವರು ಎಚ್ಚರಿಸಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ರಾಜ್ಯದ ಶಿಕ್ಷಣ ಸಚಿವರು ಇನ್ನಾದರೂ ಮಧ್ಯ ಪ್ರವೇಶಿಸಿ ಶಾಸನ ಸಭೆಯಲ್ಲಿ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಲು ತೊಡಕಾಗಿರುವ ಕಾನೂನಿಗೆ ತಿದ್ದುಪಡಿ ತಂದು ಅಥವಾ ಈಗಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ಹೊಸ ಕಾನೂನು ಜಾರಿಗೆ ತಂದು ಹಲವು ವರ್ಷಗಳಿಂದ ಜೀತದಾಳುಗಳಂತೆ ಸೇವೆ ಸಲ್ಲಿಸುತ್ತಾ ಬಂದಿರುವ ನಮಗೆ ಮಾನವೀಯ ನೆಲೆಯಲ್ಲಾದರೂ ಖಾಯಂಗೊಳಿಸಿ ನ್ಯಾಯ ಒದಗಿಸಲಿ ಎಂದವರು ಆಗ್ರಹಿಸಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಕಾನೂನು ತೊಡಕನ್ನು ನಿವಾರಿಸಿ ಅತಿಥಿ ಉಪನ್ಯಾಸಕರನ್ನು ಖಾಯಂ ಗೊಳಿಸುವುದು, ಮಾಸಿಕ ವೇತನವನ್ನು ರೂ.25,00ಕ್ಕೆ ಹೆಚ್ಚಿಸುವುದು, ವರ್ಷದ 12ತಿಂಗಳು ವೇತನ ನೀಡುವುದು ಹಾಗೂ ಸೇವಾ ಹಿರಿತನ ಹಾಗೂ ವಯೋಮಿತಿಯ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಪ್ರತಿಭಟಿಸಿದರು. ಪ್ರತಿಭಟನೆಯಲ್ಲಿ ಕುಂದಾಪುರ ತಾಲೂಕು ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಮಣಿಕಂಠ ದೇವಾಡಿಗ, ಕಾರ್ಯದರ್ಶಿ ಪಾಂಡುರಂಗ ಹಾಗೂ ಇನ್ನಿರತ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ?????????? ?????????? ?????????? Guest lecturers protest in Byndoor (3) ??????????

    ?????????? Guest lecturers protest in Byndoor (10) Guest lecturers protest in Byndoor (9) Guest lecturers protest in Byndoor (8) Guest lecturers protest in Byndoor (7) ??????????

    Guest lecturers protest in Byndoor (11) Guest lecturers protest in Byndoor (19) Guest lecturers protest in Byndoor (18) ?????????? Guest lecturers protest in Byndoor (13) Guest lecturers protest in Byndoor (12)

    ?????????? ??????????

    Like this:

    Like Loading...

    Related

    Kundapura Taluk Guest Lecturers Association
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d